July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿ

ದೆಹಲಿಯ ಗಣರಾಜ್ಯೋತ್ಸವ: ಉಜಿರೆ ಎಸ್.ಡಿ.ಎಂ ಎನ್.ಸಿ.ಸಿಯ 3 ಕೆಡೆಟ್‌ಗಳ ಆಯ್ಕೆ

ಉಜಿರೆ: 75 ನೇ ಗಣರಾಜ್ಯೋತ್ಸವದ ಪ್ರಯುಕ್ತ ದೆಹಲಿಯಲ್ಲಿ ನಡೆಯಲಿರುವ ಗಣರಾಜ್ಯೋತ್ಸವ ಪಥ ಸಂಚಲನಕ್ಕೆ ಉಜಿರೆಯ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಪದವಿ ಕಾಲೇಜಿನ ಮೂರು ಎನ್‌ಸಿಸಿ ಕೆಡೆಟ್‌ಗಳು ಆಯ್ಕೆಯಾಗಿದ್ದಾರೆ.

ಗಣರಾಜ್ಯೋತ್ಸವದ ಪಥಸಂಚಲನ, ಗಾರ್ಡ್ ಆಫ್ ಹಾನರ್, ಪ್ರಧಾನ ಮಂತ್ರಿ ರ್ಯಾಲಿಯ ಉದ್ದೇಶಕ್ಕಾಗಿ ಆಯ್ಕೆಯಾಗಿರುವ ತಂಡಗಳಲ್ಲಿ ಕಾಲೇಜಿನ ಎನ್‌ಸಿಸಿ ಕೆಡೆಟ್‌ಗಳು ಪ್ರಾಶಸ್ಯ ಪಡೆದಿದ್ದು. ನೇವಲ್ ವಿಭಾಗದಿಂದ ಕೆಡೆಟ್ ತರುಣ್ ಎಸ್, ಆರ್ಮಿ ವಿಭಾಗದಿಂದ ಕೆಡೆಟ್ ಉದೀತ್ ಯು.ವಿ ಹಾಗು ಕೆಡೆಟ್ ರಾಧಿಕಾ ಸಿ . ಎಸ್ ಆಯ್ಕೆಯಾಗದ್ದಾರೆ.ಗಣರಾಜ್ಯೋತ್ಸವ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳುವ ಉದ್ದೇಶಕ್ಕಾಗಿ ಎನ್‌ಸಿಸಿ ಕೆಡೆಟ್‌ಗಳನ್ನು ಆಯ್ಕೆ ಮಾಡಲು ರಾಜ್ಯದ ವಿವಿಧ ಭಾಗಗಳ್ಲಲಿ ಕ್ಯಾಂಪ್‌ನಡೆಸಲಾಗಿತ್ತು. ತದನಂತರ ಬೆಂಗಳೂರಿನಲ್ಲಿ ಐಜಿಸಿ ಶಿಬಿರ ಮತ್ತು ಮೂರು ಪ್ರಿ ಆರ್ ಡಿಸಿ ಮತ್ತು ಕೊನೆಯಲ್ಲಿ ಕಿಟಿಂಗ್ ಕ್ಯಾಂಪ್ ಸೇರಿದಂತೆ ಒಟ್ಟು ಎಂಟು ಬಗೆಯು ಕಠಿಣ ಆಯ್ಕೆ ಪ್ರಕ್ರಿಯೆಯ ಶಿಬಿರಗಳನ್ನು ನಡೆಸಲಾಗಿತ್ತು. ಈ ಶಿಬಿರಗಳ ವಿವಿಧ ಹಂತಗಳಲ್ಲಿ ಯಶಸ್ವಿಯಾಗಿ ಕಾಲೇಜಿನ ಎನ್‌ಸಿಸಿ ವಿಭಾಗದ ಒಟ್ಟು 3 ಕೆಡೆಟ್‌ಗಳು ಆಯ್ಕೆಯಾಗಿದ್ದಾರೆ. ಪ್ರತಿ ವರ್ಷ ದೆಹಲಿಯಲ್ಲಿ ಆಯೋಜಿತವಾಗುವ ಗಣರಾಜ್ಯೋತ್ಸವದ ಪಥಸಂಚಲನ ಕಾರ್ಯಕ್ರಮಕ್ಕಾಗಿ ಕಾಲೇಜಿನ ಕೆಡೆಟ್‌ಗಳು ನಿಯೋಜಿತರಾಗಿರುವುದು ವಿಶೇಷ. ಈವರೆಗೆ ಕಾಲೇಜಿನ ನೆವಲ್ ಹಾಗು ಆರ್ಮಿ ವಿಭಾಗದಿಂದ ಒಟ್ಟು 50ಕ್ಕೂ ಹೆಚ್ಚು ಕೆಡೆಟ್ ಗಳು ಗಣರಾಜ್ಯೋತ್ಸವ ಪರೇಡ್ ನಲ್ಲಿ ಭಾಗವಹಿಸಿರುವುದು ವಿಶೇಷವಾಗಿದೆ.

ಎಸ್.ಡಿ.ಎಂ ಕಾಲೇಜಿನ ನೌಕಾ ವಿಭಾಗದ ಎನ್.ಸಿ.ಸಿ ಹಿರಿಯ ಅಧಿಕಾರಿ ಲೆಫ್ಟಿನೆಂಟ್ ಕಮಾಂಡರ್ ಡಾ. ಶ್ರೀಧರ್ ಭಟ್, ಕೇರ್ ಟೇಕರ್ ಹರೀಶ ಶೆಟ್ಟಿ , ಆರ್ಮಿ ಎನ್.ಸಿ.ಸಿ ಅಧಿಕಾರಿಗಳಾದ ಲೆಫ್ಟಿನೆಂಟ್ ಭಾನುಪ್ರಕಾಶ್ ಮತ್ತು ಲೆಫ್ಟಿನೆಂಟ್ ಶುಭಾ ರಾಣ ಹಾಗೂ ಹಿರಿಯ ಎನ್.ಸಿ.ಸಿ ಕೆಡೆಟ್‌ಗಳು ತರಬೇತಿ ನೀಡಿದ್ದರು.

Related posts

ನಡ: ನಿವೃತ್ತ ಶಿಕ್ಷಕ ವೆಂಕಪ್ಪ ಗೌಡ ನಿಧನ

Suddi Udaya

ಡಿ.3: ಬೆಳ್ತಂಗಡಿ ಹಳೆಕೋಟೆ ಜೋರ್ಡನ್ ರಿವರ್ ವೆಲ್ ವ್ಯೂ ರೂಮ್ಸ್ & ಸೂಟ್ಸ್ ವಿಸ್ಕೃತ ಕಟ್ಟಡದ ಉದ್ಘಾಟನೆ

Suddi Udaya

ನಾಳ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯ ಹಿರಿಯ ವಿದ್ಯಾರ್ಥಿಗಳ ಸಮಾಗಮ

Suddi Udaya

ಧರ್ಮಸ್ಥಳದಲ್ಲಿ ನಾಳೆ(ಫೆ.15) ಶಿವರಾತ್ರಿ ವೈಭವ : ಪಾದಯಾತ್ರಿಗಳ ಗಡಣ, ಅಹೋರಾತ್ರಿ ಶಿವಪಂಚಾಕ್ಷರಿ ಪಠಣ, ಜಾಗರಣೆ, ಕಲಾಸೇವೆ

Suddi Udaya

ಬೆಳ್ತಂಗಡಿ ತಾಲೂಕು ಪತ್ರಕರ್ತರ ಸಂಘ ಅಧ್ಯಕ್ಷರಾಗಿ ತುಕರಾಮ್ ಬಿ., ಪ್ರಧಾನ ಕಾರ್ಯದರ್ಶಿಯಾಗಿ ಮನೋಹರ ಬಳಂಜ

Suddi Udaya

ಇಲಂತಿಲ ಗ್ರಾ. ಪಂ. ಅಧ್ಯಕ್ಷರಾಗಿ ಬಿಜೆಪಿ ಬೆಂಬಲಿತ ತಿಮ್ಮಪ್ಪ ಗೌಡ, ಉಪಾಧ್ಯಕ್ಷರಾಗಿ ಸವಿತಾ ಹೆಚ್ ಆಯ್ಕೆ

Suddi Udaya
error: Content is protected !!