25.7 C
ಪುತ್ತೂರು, ಬೆಳ್ತಂಗಡಿ
May 17, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಧಾರ್ಮಿಕ

ನಾಳ ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದ ವಾರ್ಷಿಕ ಜಾತ್ರೆ: ದೇವರ ದರ್ಶನ ಬಲಿ, ಪಲ್ಲ ಪೂಜೆ

ಬೆಳ್ತಂಗಡಿ : ನಾಳ ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದಲ್ಲಿ ವಾರ್ಷಿಕ ಜಾತ್ರಾ ಮಹೋತ್ಸವ ಆರಂಭಗೊಂಡಿದ್ದು ಎರಡನೇ ದಿನವಾದ ಇಂದು (ಜ.25) ದೇವರಿಗೆ ದರ್ಶನ ಬಲಿ, ಪಲ್ಲ ಪೂಜೆ ಹಾಗೂ ಅನ್ನ ಸಂತರ್ಪಣೆ ನಡೆಯಿತು.

ದೇವಳದ ತಂತ್ರಿಗಳಾದ ಬ್ರಹ್ಮಶ್ರೀ ಬಾಲಕೃಷ್ಣ ಪಾಂಗಾಣ್ಣಾಯ ಮಾರ್ಗದರ್ಶನದಲ್ಲಿ ಹಾಗೂ ದೇವಸ್ಥಾನದ ಪ್ರಧಾನ ಅರ್ಚಕರಾದ ವೇ.ಮೂ. ರಾಘವೇಂದ್ರ ಅಸ್ರಣ್ಣರ ನೇತೃತ್ವದಲ್ಲಿ ಬೆಳಗ್ಗೆ ಉಷಾಕಾಲ ಪೂಜೆ, ಅಲಂಕಾರ ಪೂಜೆ, ಮಹಾಪೂಜೆ, ನಿತ್ಯ ಪೂಜೆ, ದೇವರ ಬಲಿ ನಡೆಯಿತು.

ದೇವಳದ ಟ್ರಸ್ಟಿ, ನಿವೃತ್ತ ಯೋಧ ದಿನೇಶ್ ಗೌಡ ಕಲಾಯಿತೊಟ್ಟು, ಪ್ರಸ್ತುತ ಸೇವೆಯಲ್ಲಿರುವ ಯೋಧರಾದ
ಬೇಬಿ ಗೌಡ ಪೇರಾಜೆ, ವಿಕ್ರಂ ಜೆ.ಎನ್. ವಂಜಾರೆ ಹಾಗೂ ಪ್ರಮೋದ್ ಗೌಡ ಬಾಕಿಮಾರು ಅವರ ಸೇವೆಯಾಗಿ ಅನ್ನದಾನ ನಡೆಯಿತು. ಈ ಸಂದರ್ಭ ಅನ್ನದಾನ ಸೇವಾರ್ಥಿಗಳ ಮನೆಯವರು ಉಪಸ್ಥಿತರಿದ್ದರು.

ಈ ಸಂದರ್ಭದಲ್ಲಿ ವ್ಯವಸ್ಥಾಪನ ಸಮಿತಿ ಅಧ್ಯಕ್ಷರು, ಸದಸ್ಯರು, ಅಭಿವೃದ್ಧಿ ಸಮಿತಿ ಅಧ್ಯಕ್ಷರು, ಪದಾಧಿಕಾರಿಗಳು, ಸದಸ್ಯರು, ಭಜನಾ ಮಂಡಳಿ ಅಧ್ಯಕ್ಷರು, ಪಸಾಧಿಕಾರಿಗಳು ಸದಸ್ಯರು, ಶ್ರೀ ದುರ್ಗಾ ಮಾತೃ ಮಂಡಳಿ ಅಧ್ಯಕ್ಷರು, ಪದಾಧಿಕಾರಿಗಳು, ಸದಸ್ಯರು, ದೇವಳದ ಸಿಬ್ಬಂದಿಗಳು, ಜಾತ್ರಾ ಮಹೋತ್ಸವದ ವಿವಿಧ ಸಮಿತಿ ಪದಾಧಿಕಾರಿಗಳು ಮತ್ತು ಭಕ್ತಾದಿಗಳು ಉಪಸ್ಥಿತರಿದ್ದರು.

ಇಂದು ಸಂಜೆ ದೇವರ ಬಲಿ ಹೊರಟು, ಕೆರೆಕಟ್ಟೆ ಉತ್ಸವ, ಮಹಾಪೂಜೆ, ನಿತ್ಯ ಬಲಿ, ದೀಪದ ಬಲಿ ಕಾರ್ಯಕ್ರಮ ಜರುಗಲಿದೆ.
ರಾತ್ರಿ ಧಾರ್ಮಿಕ ಸಭೆ, ನಾಳ ಅಂಗನವಾಡಿ ಕೇಂದ್ರ ಮತ್ತು ಸರಕಾರಿ ಹಿರಿಯ ಪ್ರಾಥಮಿಕ ಶಾಲಾ ವಿಧ್ಯಾರ್ಥಿಗಳಿಂದ ಸಾಂಸ್ಕೃತಿಕ ಕಾರ್ಯಕ್ರಮ ಹಾಗೂ ಕೇಸರಿ ಗೆಳೆಯರ ಬಳಗದ ಮೋಕೆದ ಕಲಾವಿದೆರ್ ತಂಡದ ಸದಸ್ಯರಿಂದ ತುಳು ಹಾಸ್ಯಮಯ ನಾಟಕ ಕಾಸ್ ದ ಕಸರತ್ತ್ ನಾಟಕ ನಡೆಯಲಿದೆ

Related posts

ಬೆಳಾಲಿನ ಶಿಲ್ಪಿ ಶಶಿಧರ ಆಚಾರ್ಯ ರಿಗೆ ದಿ| ಬೋಳೂರು ಹರಿಶ್ಚಂದ್ರ ಆಚಾರ್ಯ ಪುರಸ್ಕಾರ

Suddi Udaya

ಬೆಳಾಲು ಪ್ರೌಢಶಾಲೆ ಪೋಷಕರ ಸಮಾವೇಶ

Suddi Udaya

ಆ 21: ಜೆಸಿಐ ಭಾರತದ ರಾಷ್ಟ್ರೀಯ ಅಧ್ಯಕ್ಷ ಸಿ.ಆರ್ ರಿಕೇಶ್ ಶರ್ಮಾ ಬೆಳ್ತಂಗಡಿಗೆ

Suddi Udaya

ಪೆರಿಂಜೆ: ಪಡ್ಡ್ಯಾರಬೆಟ್ಟ ದೈವಸ್ಥಾನ ಕ್ಷೇತ್ರ ವಾರ್ಷಿಕ ಜಾತ್ರೋತ್ಸವ ಸಂಪನ್ನ, ಸಾಧಕರಿಗೆ ಗೌರವ, ವಿದ್ಯಾರ್ಥಿ ವೇತನ ವಿತರಣೆ

Suddi Udaya

ಜ.31-ಫೆ.1: ನಾವೂರು ಶ್ರೀ ಗೋಪಾಲಕೃಷ್ಣ ದೇವಸ್ಥಾನದಲ್ಲಿ ಪ್ರತಿಷ್ಠಾ ವರ್ಧಂತ್ಯುತ್ಸವ ಮತ್ತು ವಾರ್ಷಿಕ ಜಾತ್ರಾ ಮಹೋತ್ಸವ

Suddi Udaya

ಒಡಿಯೂರು ಶ್ರೀ ಸೌಹಾರ್ದ ಸಹಕಾರಿ ಸಂಘದ 22ನೇ ಮಡಂತ್ಯಾರು ಶಾಖೆ ಉದ್ಘಾಟನೆ

Suddi Udaya
error: Content is protected !!