April 2, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಬೆಳ್ತಂಗಡಿ : ಇನ್ಸ್ಪೆಕ್ಟರ್ ಗಂಗ್ಗಿರೆಡ್ಡಿಯನ್ನು ಸುಳ್ಳು ಪ್ರಕರಣದಲ್ಲಿ ಟ್ರ್ಯಾಪ್ ಮಾಡಿಸಿದ್ದ ದೂರುದಾರ ಹಾಗೂ ಚೆಕ್ ಬೌನ್ಸ್ ಪ್ರಕರಣದಲ್ಲಿ ತಲೆಮರೆಸಿಕೊಂಡಿದ್ದ ಆರೋಪಿಯನ್ನು ಬಂಧಿಸಿದ ಬೆಳ್ತಂಗಡಿ ಪೊಲೀಸರು

ಬೆಳ್ತಂಗಡಿ : ಬೆಳ್ತಂಗಡಿ ಸರ್ಕಲ್‌‌‌ ಇನ್ಸ್ಪೆಕ್ಟರ್ ಅಗಿದ್ದ ಗಂಗ್ಗಿರೆಡ್ಡಿಯನ್ನು ಲಂಚ ಪಡೆದ ಸುಳ್ಳು ಆರೋಪದಲ್ಲಿ ಲೋಕಾಯಕ್ತ ಪೊಲೀಸರಿಗೆ ಟ್ರ್ಯಾಪ್ ಮಾಡಿಸಿದ ದೂರುದಾರ ಇದೀಗ ಚೆಕ್ ಬೌನ್ಸ್ ಪ್ರಕರಣದಲ್ಲಿ ತಲೆಮರೆಸಿಕೊಂಡಿದ್ದ ಆರೋಪಿಯನ್ನು ಬೆಳ್ತಂಗಡಿ ಪೊಲೀಸರು ಬಂಧಿಸಿ ಜೈಲಿಗಟ್ಟಿದ್ದಾರೆ.

ಚೆಕ್ ಬೌನ್ಸ್ ಪ್ರಕರಣ: ಬೆಳ್ತಂಗಡಿ ನ್ಯಾಯಲಯದ ಸಿ.ಸಿ ನಂಬ್ರ 118/2021 ಕಲಂ.138 NI Act (ಚೆಕ್ ಬೌನ್ಸ್) ಪ್ರಕರಣದಲ್ಲಿ ವಾರಂಟು ಆರೋಪಿ ಶ್ರೀನಿವಾಸ್ ಪ್ರಸಾದ್(50) ಎಂಬಾತನನ್ನು ಜ.24 ರಂದು ಬೆಳ್ತಂಗಡಿ ಪೊಲೀಸ್ ಠಾಣೆಯ ಸಬ್ ಇನ್ಸ್ಪೆಕ್ಟರ್ ಮುರುಳಿಧರ್ ನಾಯ್ಕ್ ನೇತೃತ್ವದಲ್ಲಿ ಸಿಬ್ಬಂದಿ ವ್ರಷಭ ಮತ್ತು ಬಸವರಾಜ್ ರವರು ಬೆಳ್ತಂಗಡಿ ತಾಲೂಕಿನ ಇಂದಬೆಟ್ಟುನಿಂದ ವಶಕ್ಕೆ ಪಡೆದು ಮಾನ್ಯ ಬೆಳ್ತಂಗಡಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದು ಆರೋಪಿಗೆ ಬೆಳ್ತಂಗಡಿ ನ್ಯಾಯಾಂಗ ಬಂಧನ ವಿಧಿಸಲಾಗಿದೆ.

ಟ್ಯಾಪ್ ಪ್ರಕರಣ: ಬೆಳ್ತಂಗಡಿ ಸರ್ಕಲ್ ಇನ್ಸ್ಪೆಕ್ಟರ್ ಅಗಿದ್ದ ಗಂಗ್ಗಿರೆಡ್ಡಿ ಅವರನ್ನು ಸುಳ್ಳು ಪ್ರಕರಣದಲ್ಲಿ ಲೋಕಾಯುಕ್ತ ಪೊಲೀಸರಿಗೆ ದೂರು ನೀಡಿ ಟ್ರ್ಯಾಪ್ ಮಾಡಿಸಿದ್ದ ದೂರುದಾರ ಶ್ರೀನಿವಾಸ್ ಪ್ರಸಾದ್. ಮಂಗಳೂರು ನ್ಯಾಯಾಲಯ ಇನ್ಸ್ಪೆಕ್ಟರ್ ಅವರ ಆರೋಪ ಸಾಭಿತಾಗಿ ಶಿಕ್ಷೆ ಹಾಗೂ ದಂಡ ವಿಧಿಸಿದ್ದರು. ನಂತರ 2022 ರಲ್ಲಿ ಹೈಕೋರ್ಟ್ ನಲ್ಲಿ ಇನ್ಸ್ಪೆಕ್ಟರ್ ಗಂಗ್ಗಿರೆಡ್ಡಿ ಅವರ ಆರೋಪ ಪ್ರಕರಣ ಸುಳ್ಳು ಎಂದು ರದ್ದಾಗಿತ್ತು. ಇದೀಗ ಇನ್ಸ್ಪೆಕ್ಟರ್ ಗಂಗ್ಗಿರೆಡ್ಡಿ ಗುಪ್ತಚರ ಇಲಾಖೆಯಿಂದ ಕರ್ತವ್ಯದಿಂದ ನಿವೃತ್ತ ರಾಗಿದ್ದಾರೆ.

Related posts

ಶಿಬಾಜೆ ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನಕ್ಕೆ ಧಾರ್ಮಿಕ ಪರಿಷತ್ತಿನ ಸದಸ್ಯರು ಶ್ರೀಮತಿ ಮಲ್ಲಿಕಾ ಪಕ್ಕಳ ಬೇಟಿ

Suddi Udaya

ಗುರುವಾಯನಕೆರೆ : ಶಕ್ತಿ ನಗರದಲ್ಲಿ ರಸ್ತೆ ಮಧ್ಯೆ ಅಪಾಯಕಾರಿ ಹೊಂಡ

Suddi Udaya

ಸಂತೆಕಟ್ಟೆ ರಿಕ್ಷಾ ಚಾಲಕ ಮತ್ತು ಮಾಲಕರಿಂದ ನಿಧನರಾದ ಶೇಖರ್ ರವರಿಗೆ ಸಂತಾಪ

Suddi Udaya

ಶಿಬಾಜೆ ಗ್ರಾ.ಪಂ. ವ್ಯಾಪ್ತಿಯಲ್ಲಿ ಸ್ವಚ್ಛತಾ ಕಾರ್ಯಕ್ರಮ

Suddi Udaya

ಸುರ್ಯ ಆಟೋ ಚಾಲಕರ ಮತ್ತು ಮಾಲಕರ ಸಂಘದಿಂದ ಆಟಿಡೊಂಜಿ ದಿನ ಮತ್ತು ಸಾರ್ವಜನಿಕ ಕ್ರೀಡಾಕೂಟ

Suddi Udaya

‌ಬೆಳ್ತಂಗಡಿ ತಾಲೂಕಿನ ಮಳೆ ಹಾನಿ ಪ್ರದೇಶಗಳಿಗೆ ದ.ಕ ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಭೇಟಿ: ಪರಿಶೀಲನೆ

Suddi Udaya
error: Content is protected !!