September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಬೆಳ್ತಂಗಡಿ : ಇನ್ಸ್ಪೆಕ್ಟರ್ ಗಂಗ್ಗಿರೆಡ್ಡಿಯನ್ನು ಸುಳ್ಳು ಪ್ರಕರಣದಲ್ಲಿ ಟ್ರ್ಯಾಪ್ ಮಾಡಿಸಿದ್ದ ದೂರುದಾರ ಹಾಗೂ ಚೆಕ್ ಬೌನ್ಸ್ ಪ್ರಕರಣದಲ್ಲಿ ತಲೆಮರೆಸಿಕೊಂಡಿದ್ದ ಆರೋಪಿಯನ್ನು ಬಂಧಿಸಿದ ಬೆಳ್ತಂಗಡಿ ಪೊಲೀಸರು

ಬೆಳ್ತಂಗಡಿ : ಬೆಳ್ತಂಗಡಿ ಸರ್ಕಲ್‌‌‌ ಇನ್ಸ್ಪೆಕ್ಟರ್ ಅಗಿದ್ದ ಗಂಗ್ಗಿರೆಡ್ಡಿಯನ್ನು ಲಂಚ ಪಡೆದ ಸುಳ್ಳು ಆರೋಪದಲ್ಲಿ ಲೋಕಾಯಕ್ತ ಪೊಲೀಸರಿಗೆ ಟ್ರ್ಯಾಪ್ ಮಾಡಿಸಿದ ದೂರುದಾರ ಇದೀಗ ಚೆಕ್ ಬೌನ್ಸ್ ಪ್ರಕರಣದಲ್ಲಿ ತಲೆಮರೆಸಿಕೊಂಡಿದ್ದ ಆರೋಪಿಯನ್ನು ಬೆಳ್ತಂಗಡಿ ಪೊಲೀಸರು ಬಂಧಿಸಿ ಜೈಲಿಗಟ್ಟಿದ್ದಾರೆ.

ಚೆಕ್ ಬೌನ್ಸ್ ಪ್ರಕರಣ: ಬೆಳ್ತಂಗಡಿ ನ್ಯಾಯಲಯದ ಸಿ.ಸಿ ನಂಬ್ರ 118/2021 ಕಲಂ.138 NI Act (ಚೆಕ್ ಬೌನ್ಸ್) ಪ್ರಕರಣದಲ್ಲಿ ವಾರಂಟು ಆರೋಪಿ ಶ್ರೀನಿವಾಸ್ ಪ್ರಸಾದ್(50) ಎಂಬಾತನನ್ನು ಜ.24 ರಂದು ಬೆಳ್ತಂಗಡಿ ಪೊಲೀಸ್ ಠಾಣೆಯ ಸಬ್ ಇನ್ಸ್ಪೆಕ್ಟರ್ ಮುರುಳಿಧರ್ ನಾಯ್ಕ್ ನೇತೃತ್ವದಲ್ಲಿ ಸಿಬ್ಬಂದಿ ವ್ರಷಭ ಮತ್ತು ಬಸವರಾಜ್ ರವರು ಬೆಳ್ತಂಗಡಿ ತಾಲೂಕಿನ ಇಂದಬೆಟ್ಟುನಿಂದ ವಶಕ್ಕೆ ಪಡೆದು ಮಾನ್ಯ ಬೆಳ್ತಂಗಡಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದು ಆರೋಪಿಗೆ ಬೆಳ್ತಂಗಡಿ ನ್ಯಾಯಾಂಗ ಬಂಧನ ವಿಧಿಸಲಾಗಿದೆ.

ಟ್ಯಾಪ್ ಪ್ರಕರಣ: ಬೆಳ್ತಂಗಡಿ ಸರ್ಕಲ್ ಇನ್ಸ್ಪೆಕ್ಟರ್ ಅಗಿದ್ದ ಗಂಗ್ಗಿರೆಡ್ಡಿ ಅವರನ್ನು ಸುಳ್ಳು ಪ್ರಕರಣದಲ್ಲಿ ಲೋಕಾಯುಕ್ತ ಪೊಲೀಸರಿಗೆ ದೂರು ನೀಡಿ ಟ್ರ್ಯಾಪ್ ಮಾಡಿಸಿದ್ದ ದೂರುದಾರ ಶ್ರೀನಿವಾಸ್ ಪ್ರಸಾದ್. ಮಂಗಳೂರು ನ್ಯಾಯಾಲಯ ಇನ್ಸ್ಪೆಕ್ಟರ್ ಅವರ ಆರೋಪ ಸಾಭಿತಾಗಿ ಶಿಕ್ಷೆ ಹಾಗೂ ದಂಡ ವಿಧಿಸಿದ್ದರು. ನಂತರ 2022 ರಲ್ಲಿ ಹೈಕೋರ್ಟ್ ನಲ್ಲಿ ಇನ್ಸ್ಪೆಕ್ಟರ್ ಗಂಗ್ಗಿರೆಡ್ಡಿ ಅವರ ಆರೋಪ ಪ್ರಕರಣ ಸುಳ್ಳು ಎಂದು ರದ್ದಾಗಿತ್ತು. ಇದೀಗ ಇನ್ಸ್ಪೆಕ್ಟರ್ ಗಂಗ್ಗಿರೆಡ್ಡಿ ಗುಪ್ತಚರ ಇಲಾಖೆಯಿಂದ ಕರ್ತವ್ಯದಿಂದ ನಿವೃತ್ತ ರಾಗಿದ್ದಾರೆ.

Related posts

ಅ.18 ರಂದು ನಡೆಯಲಿರುವ ರಾಜ್ಯಸಭಾ ಸದಸ್ಯ ಡಾ. ನಾಸಿರ್ ಹುಸೈನ್, ಕೆ.ಪಿ.ಸಿ.ಸಿ. ಕಾರ್ಯಾಧ್ಯಕ್ಷ ಸಲೀಮ್ ಅಹಮ್ಮದ್ ರವರಿಗೆ ಅಭಿನಂದನಾ ಸಮಾರಂಭ ಹಾಗೂ ಅಲ್ಪಸಂಖ್ಯಾತರ ಸಮಾವೇಶ ಕಾರ್ಯಕ್ರಮಕ್ಕೆ ಉಪಮುಖ್ಯಮಂತ್ರಿ ಹಾಗೂ ಸಚಿವರುಗಳಿಗೆ ಆಹ್ವಾನ

Suddi Udaya

ಶ್ರೀ ಕ್ಷೇ.ಧ.ಗ್ರಾ.ಯೋಜನೆಯ ಮುಂಡಾಜೆ ವಲಯದ ಕೊಂಬಿನಡ್ಕ ಶಾಲೆಯಲ್ಲಿ ಸ್ವಚ್ಛತಾ ಕಾರ್ಯಕ್ರಮ

Suddi Udaya

ಜೆಸಿಐ ಬೆಳ್ತಂಗಡಿ ಮಂಜುಶ್ರೀ ವತಿಯಿಂದ ಬೇಸಿಗೆ ಶಿಬಿರ

Suddi Udaya

ಕರ್ನಾಟಕ ಸರ್ಕಾರದ ವಿಶೇಷ ಪ್ರತಿನಿಧಿ ಟಿ.ಬಿ. ಜಯಚಂದ್ರ ಧರ್ಮಸ್ಥಳ ಭೇಟಿ

Suddi Udaya

ಮಳೆಯಿಂದ ಹಾನಿಗೀಡಾದ ಪ್ರದೇಶಗಳಿಗೆ ಶಾಸಕ ಹರೀಶ್ ಪೂಂಜ ಭೇಟಿ – ವೈಯಕ್ತಿಕ ನೆಲೆಯಲ್ಲಿ ಆಥಿ೯ಕ ಸಹಾಯ ಹಸ್ತಾಂತರ

Suddi Udaya

ಪ್ರಥಮ ತಾಲೂಕು ಅಧಿವೇಶನಕ್ಕೆ ಸಜ್ಜಾಗುತಿದೆ ಬೆಳ್ತಂಗಡಿ ಅಭಾಸಾಪ: ಡಿ.22 ರಂದು ಬಲಿಪ ರೆಸಾರ್ಟಿನಲ್ಲಿ ಅಧಿವೇಶನ

Suddi Udaya
error: Content is protected !!