30.7 C
ಪುತ್ತೂರು, ಬೆಳ್ತಂಗಡಿ
May 17, 2025
ತಾಲೂಕು ಸುದ್ದಿ

ಮದಡ್ಕದಲ್ಲಿ ಸರಕಾರಿ ಜಾಗದಲ್ಲಿ ಅಕ್ರಮವಾಗಿ ನಿರ್ಮಾಣ ಮಾಡಿದ್ದ ಶೆಡ್:ಬೆಳ್ತಂಗಡಿ ತಹಶೀಲ್ದಾ‌ರ್ ಪೃಥ್ವಿ ಸಾನಿಕಂ ನೇತೃತ್ವದ ತಂಡದಿಂದ ನೆಲಸಮ

ಬೆಳ್ತಂಗಡಿ : ಮದಡ್ಕದಲ್ಲಿ ಸರಕಾರಿ ಜಾಗದಲ್ಲಿ ಅಕ್ರಮವಾಗಿ ನಿರ್ಮಾಣ ಮಾಡಿದ್ದ ಶೆಡ್ ನ್ನು ಜೆಸಿಬಿ ಮೂಲಕ ಬೆಳ್ತಂಗಡಿ ತಹಶೀಲ್ದಾ‌ರ್ ಪೃಥ್ವಿ ಸಾನಿಕಂ ನೇತೃತ್ವದ ತಂಡ ನೆಲಸಮಗೊಳಿಸಿದ್ದಾರೆ.

ಪ್ರಕರಣದ ವಿವರ:ಬೆಳ್ತಂಗಡಿ ತಾಲೂಕಿನ ಕುವೆಟ್ಟು ಗ್ರಾಮದ ಮದಡ್ಕ ಹಾಲಿನ ಡೈರಿ ಹಿಂಭಾಗದ ಸರ್ವೆ ನಂಬರ್ 149/3A ನಲ್ಲಿ 11 ಸೆನ್ಸ್ ಖಾಲಿ ಜಾಗದಲ್ಲಿ ಅಬುಸಾಲಿ ಮಕ್ಕಳಾದ ರೌಫ್ ಮತ್ತು ನಿಸರ್ ಸಹೋದರರು ಅಕ್ರಮವಾಗಿ ಶೆಡ್ ನಿರ್ಮಾಣ ಮಾಡಿದ್ದರು. ಈ ಬಗ್ಗೆ ಬೆಳ್ತಂಗಡಿ ಕಂದಾಯ ಇಲಾಖೆಗೆ ದೂರು ಬಂದಿತ್ತು. ಅದರಂತೆ ಬೆಳ್ತಂಗಡಿ ತಹಶೀಲ್ದಾರ್ ಪೃಥ್ವಿ ಸಾನಿಕಂ ಮತ್ತು ಕಂದಾಯ ಇಲಾಖೆಯ ಸಿಬ್ಬಂದಿ ಜ.18 ಕ್ಕೆ ಜಾಗದ

ಪರಿಶೀಲನೆಗೆ ತೆರಳಿದ್ದರು. ಈ ವೇಳೆ ರೌಫ್ ಮತ್ತು ನಿಸರ್ ತಹಶೀಲ್ದಾ‌ರ್ ಮೇಲೆ ಹಲ್ಲೆಗೆ ಯತ್ನಿಸಿದ್ದರು.ಬಳಿಕ ಕಂದಾಯ ನಿರೀಕ್ಷಕರಿಗೂ ಬೆದರಿಕೆ ಹಾಕಿ ಕರ್ತವ್ಯಕ್ಕೆ ಅಡ್ಡಿ ಪಡಿಸಿದ್ದರು. ಈ ಬಗ್ಗೆ ತಹಶೀಲ್ದಾ‌ರ್ ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ಜ.19 ರಂದು ದೂರು ದಾಖಲಿಸಿದ್ದರು.

ಬೆಳ್ತಂಗಡಿ ತಹಶೀಲ್ದಾರ್ ಪೃಥ್ವಿ ಸಾನಿಕಂ ನೇತೃತ್ವದ ಕಂದಾಯ ಇಲಾಖೆಯ ಸಿಬ್ಬಂದಿ ಜ.25 ರಂದು ಸಂಜೆ (ಇಂದು) ಜೆಸಿಬಿ ಬಳಸಿ ಅಕ್ರಮ ಶೆಡ್ ನೆಲಸಮ ಮಾಡಲಾಯಿತು. ಈ ವೇಳೆ ಅಹಿತಕರ ಘಟನೆ ನಡೆಯದಂತೆ ಬೆಳ್ತಂಗಡಿ ಪೊಲೀಸರು ಭದ್ರತೆ ವಹಿಸಿದ್ದರು.

Related posts

ಉಜಿರೆ ರಾಜಾರಾಂ ಶೋ ರೂಂ ನಲ್ಲಿ ದೀಪಾವಳಿ ಹಬ್ಬದ ಪ್ರಯುಕ್ತ ವಿಶೇಷ ಡಿಸ್ಕೌಂಟ್ ಸೇಲ್

Suddi Udaya

ಮೇಲಂತಬೆಟ್ಟು ಗ್ರಾ.ಪಂ. ವತಿಯಿಂದ ಅರ್ಹ ಫಲಾನುಭವಿಗಳಿಗೆ ಉಜ್ವಲ ಗ್ಯಾಸ್ ವಿತರಣೆ

Suddi Udaya

ಗುಂಡೂರಿ: ಕೊಯಂದೂರು ನಿವಾಸಿ ಗಿರಿಜ ನಿಧನ

Suddi Udaya

ಉಜಿರೆ  ಅತ್ತಾಜೆ ಕೇಶವ ಭಟ್ ಅವಿಭಕ್ತ ಕುಟುಂಬಕ್ಕೆ ಉಂಡೆಮನೆ ಪ್ರಶಸ್ತಿ   

Suddi Udaya

ಭಾರಿ ಗಾಳಿ ಮಳೆ: ಗುರುವಾಯನಕೆರೆ ಶಕ್ತಿನಗರದ ಸುದೇಕ್ಕರುನಲ್ಲಿ ಮನೆಗೆ ತೆಂಗಿನ ಮರ ಬಿದ್ದು ಹಾನಿ

Suddi Udaya

ಬೆಂಗಳೂರಿನಿಂದ ಧರ್ಮಸ್ಥಳಕ್ಕೆ ಸೈಕಲ್ ಯಾತ್ರೆ ಕೈಗೊಂಡ ರಾಜಾಜಿನಗರದ ಶಾಸಕ ಸುರೇಶ ಕುಮಾರ್

Suddi Udaya
error: Content is protected !!