38.6 C
ಪುತ್ತೂರು, ಬೆಳ್ತಂಗಡಿ
March 6, 2026
Uncategorizedಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಮಲವಂತಿಗೆ: ಉಮೇಶ್ ರವರಿಗೆ ಹಲ್ಲೆ, ಬೆದರಿಕೆ: ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು

ಬೆಳ್ತಂಗಡಿ: ಮಲವಂತಿಗೆ ನಿವಾಸಿ ಉಮೇಶ್‌ ರವರು ರಾತ್ರಿ ಮೋಟಾರ್ ಸೈಕಲ್ ನಲ್ಲಿ ಮನೆಗೆ ಹೋಗುವ ಸಂದರ್ಭ ಉಕ್ಕುಡ ಎಂಬಲ್ಲಿ ಗುಂಪೊಂದು ಹಲ್ಲೆ ನಡೆಸಿ, ಬೆದರಿಕೆ ಹಾಕಿದ ಘಟನೆ ಜ.23 ರಂದು ನಡೆದಿದೆ.

ಮಲವಂತಿಗೆ ನಿವಾಸಿ ಉಮೇಶ್‌ (35) ಎಂಬವರ ದೂರಿನಂತೆ, ಜ. 23 ರಂದು ರಾತ್ರಿ ಉಮೇಶ್ ರವರು ಬಾಬ್ತು ಮೋಟಾರ್‌ ಸೈಕಲ್‌ ನಲ್ಲಿ ಮನೆಗೆ ಹೋಗುತ್ತಾ ಉಕ್ಕುಡ ಎಂಬಲ್ಲಿಗೆ ತಲುಪಿದಾಗ, ಆರೋಪಿಗಳಾದ ರಮೇಶ್‌ ನಾಯ್ಕ, ದಯಾನಂದ, ರವಿ,ಸುರೇಶ, ಸಂತೋಷ್‌, ಪ್ರವೀಣ್‌ ಕುಮಾರ್‌ , ಅರುಣ್‌ , ಆದಿ ಜೈನ್‌, ಅನಿಲ್‌ ಜೈನ್‌, ಸಾವಂತ್‌ ,ಸುನೀಲ್‌,ಪ್ರಕಾಶ್‌ ಕುಮಾರ್‌, ಮತ್ತು ಯೂಸುಫ್‌ ರವರು ಉಮೇಶ್ ರವರನ್ನು ತಡೆದು ನಿಲ್ಲಿಸಿ, ಆರೋಪಿಗಳ ಪೈಕಿ ರಮೇಶ್‌ ನಾಯ್ಕ ರವರ ಮನೆಯ ಅಂಗಳಕ್ಕೆ ಎಳೆದುಕೊಂಡು ಹೋಗಿದ್ದು, ಅವಾಚ್ಯ ಶಬ್ದಗಳಿಂದ ಬೈದು ಅವಮಾನ ಪಡಿಸಿರುತ್ತಾರೆ.

ಆರೋಪಿಗಳ ಪೈಕಿ ರಮೇಶ್‌ ನಾಯ್ಕ , ದಯಾನಂದ, ರವಿ ಮತ್ತು ಸುರೇಶ್‌ ರವರು ಪಿರ್ಯಾದಿದಾರರಿಗೆ ಹಲ್ಲೆ ನಡೆಸಿ, ಮೆಣಸಿನ ಹುಡಿ ಎರಚಿದ್ದು, ಬಳಿಕ‌ ಆರೋಪಿಗಳು ಜೀವ ಬೆದರಿಕೆ ಹಾಕಿ ಹೊರಟು ಹೋಗಿರುತ್ತಾರೆ ಎಂಬುದಾಗಿ ನೀಡಿದ ದೂರಿನಂತೆ ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ಅಕ್ರ. ನಂ: 06/2024 ಕಲಂ: 143,147,148,341,324,504,506, ಜೊತೆಗೆ 149 ಐಪಿಸಿ ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸಲಾಗುತ್ತಿದೆ.

Related posts

ಕಡಿರುದ್ಯಾವರದಲ್ಲಿ ಅಡಿಕೆ ತೋಟಕ್ಕೆ ಕಾಡಾನೆ ದಾಳಿ : ಸೋಲಾರ್ ಬೇಲಿಗಳಿಗೆ ಹಾನಿ

Suddi Udaya

ಬೆಳಾಲು ಪ್ರೌಢಶಾಲೆಯಲ್ಲಿ ಕುಮಾರವ್ಯಾಸ ನಮನ, ಮುದ್ದಣ ಸ್ಮರಣೆ

Suddi Udaya

ವೇಣೂರು ಶ್ರೀ ಗುರುನಾರಾಯಣ ಸ್ವಾಮಿ ಸೇವಾ ಸಂಘ ಮತ್ತು ಯುವವಾಹಿನಿ ಘಟಕದಿಂದ ಯಕ್ಷಗಾನ ಕಲಾವಿದರಿಗೆ ಸನ್ಮಾನ

Suddi Udaya

ಕಲ್ಮಂಜ: ನಿಡಿಗಲ್ ನಿವಾಸಿ ಮಾಧವ ಕಾಮತ್ ನಿಧನ

Suddi Udaya

ತೆಕ್ಕಾರು ಪರಿಸರದ ಹಲವು ಮನೆಗಳಲ್ಲಿ ಕಳ್ಳತನ: ಲಕ್ಷಾಂತರ ರೂ. ನಗ-ನಗದು ಕಳವು

Suddi Udaya

ನಾಗರಿಕ ಅಭಿನಂದನಾ ಸಮಿತಿ ಕುವೆಟ್ಟು-ಓಡಿಲ್ನಾಳ ವತಿಯಿಂದ ಭಾರತ ಮಾತೆಯ ಸೇವೆಗೈದು ನಿವೃತ್ತ ಹೊಂದಿದ ಯೋಧ ಮಂಜುನಾಥ ಹಾಗೂ ಕರ್ನಾಟಕ ರಾಜ್ಯದ ಅತ್ಯುತ್ತಮ ಶಿಕ್ಷಕ ಪುರಸ್ಕೃತ ವಿ.ಕೆ. ವಿಟ್ಲ ರವರಿಗೆ ನಾಗರಿಕ ಅಭಿನಂದನಾ ಸಮಾರಂಭ

Suddi Udaya
error: Content is protected !!