25.5 C
ಪುತ್ತೂರು, ಬೆಳ್ತಂಗಡಿ
April 24, 2026
Uncategorizedಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಮಲವಂತಿಗೆ: ಉಮೇಶ್ ರವರಿಗೆ ಹಲ್ಲೆ, ಬೆದರಿಕೆ: ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು

ಬೆಳ್ತಂಗಡಿ: ಮಲವಂತಿಗೆ ನಿವಾಸಿ ಉಮೇಶ್‌ ರವರು ರಾತ್ರಿ ಮೋಟಾರ್ ಸೈಕಲ್ ನಲ್ಲಿ ಮನೆಗೆ ಹೋಗುವ ಸಂದರ್ಭ ಉಕ್ಕುಡ ಎಂಬಲ್ಲಿ ಗುಂಪೊಂದು ಹಲ್ಲೆ ನಡೆಸಿ, ಬೆದರಿಕೆ ಹಾಕಿದ ಘಟನೆ ಜ.23 ರಂದು ನಡೆದಿದೆ.

ಮಲವಂತಿಗೆ ನಿವಾಸಿ ಉಮೇಶ್‌ (35) ಎಂಬವರ ದೂರಿನಂತೆ, ಜ. 23 ರಂದು ರಾತ್ರಿ ಉಮೇಶ್ ರವರು ಬಾಬ್ತು ಮೋಟಾರ್‌ ಸೈಕಲ್‌ ನಲ್ಲಿ ಮನೆಗೆ ಹೋಗುತ್ತಾ ಉಕ್ಕುಡ ಎಂಬಲ್ಲಿಗೆ ತಲುಪಿದಾಗ, ಆರೋಪಿಗಳಾದ ರಮೇಶ್‌ ನಾಯ್ಕ, ದಯಾನಂದ, ರವಿ,ಸುರೇಶ, ಸಂತೋಷ್‌, ಪ್ರವೀಣ್‌ ಕುಮಾರ್‌ , ಅರುಣ್‌ , ಆದಿ ಜೈನ್‌, ಅನಿಲ್‌ ಜೈನ್‌, ಸಾವಂತ್‌ ,ಸುನೀಲ್‌,ಪ್ರಕಾಶ್‌ ಕುಮಾರ್‌, ಮತ್ತು ಯೂಸುಫ್‌ ರವರು ಉಮೇಶ್ ರವರನ್ನು ತಡೆದು ನಿಲ್ಲಿಸಿ, ಆರೋಪಿಗಳ ಪೈಕಿ ರಮೇಶ್‌ ನಾಯ್ಕ ರವರ ಮನೆಯ ಅಂಗಳಕ್ಕೆ ಎಳೆದುಕೊಂಡು ಹೋಗಿದ್ದು, ಅವಾಚ್ಯ ಶಬ್ದಗಳಿಂದ ಬೈದು ಅವಮಾನ ಪಡಿಸಿರುತ್ತಾರೆ.

ಆರೋಪಿಗಳ ಪೈಕಿ ರಮೇಶ್‌ ನಾಯ್ಕ , ದಯಾನಂದ, ರವಿ ಮತ್ತು ಸುರೇಶ್‌ ರವರು ಪಿರ್ಯಾದಿದಾರರಿಗೆ ಹಲ್ಲೆ ನಡೆಸಿ, ಮೆಣಸಿನ ಹುಡಿ ಎರಚಿದ್ದು, ಬಳಿಕ‌ ಆರೋಪಿಗಳು ಜೀವ ಬೆದರಿಕೆ ಹಾಕಿ ಹೊರಟು ಹೋಗಿರುತ್ತಾರೆ ಎಂಬುದಾಗಿ ನೀಡಿದ ದೂರಿನಂತೆ ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ಅಕ್ರ. ನಂ: 06/2024 ಕಲಂ: 143,147,148,341,324,504,506, ಜೊತೆಗೆ 149 ಐಪಿಸಿ ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸಲಾಗುತ್ತಿದೆ.

Related posts

ಎ.30-ಮೇ.3: ಮಾನ್ಯ ಸತ್ಯಚಾವಡಿ ತರವಾಡು ಮನೆಯ ಗೃಹಪ್ರವೇಶ: ಸ್ಥಳ ದೇವತಾ ಸಾನಿಧ್ಯಗಳ ಪುನರ್ ಪ್ರತಿಷ್ಠಾ ಬ್ರಹ್ಮಕಲಶೋತ್ಸವ: ಚಪ್ಪರ ಮೂಹೂರ್ತ

Suddi Udaya

ಕಣಿಯೂರು ಗ್ರಾಮ ಪಂಚಾಯತ್ ಮುಂದೆ ಸರ್ಕಾರದ ವಿರುದ್ಧ ಬಿಜೆಪಿ ಪ್ರತಿಭಟನೆ

Suddi Udaya

ಸವಣಾಲು, ಶಿರ್ಲಾಲು-ಕರಂಬಾರು ಗ್ರಾಮಗಳ ಪ.ಜಾತಿ ಕಾಲೋನಿಗಳಲ್ಲಿ ಸಾಮರಸ್ಯದ ಸಂಕ್ರಾತಿ ಹಬ್ಬ ಆಚರಣೆ

Suddi Udaya

ನೆರಿಯ ನಿವಾಸಿ ಶ್ವೇತಾ ರವರ ಚಿಕಿತ್ಸೆಗೆ ನೆರವಾಗಿ

Suddi Udaya

ಮಡಂತ್ಯಾರು ವಲಯದ ಜನಜಾಗೃತ ಸಭೆ

Suddi Udaya

ಉಜಿರೆ ಗ್ರಾಮ ಪಂಚಾಯತ್ ಜನಸ್ಪಂದನ ಸಭೆ

Suddi Udaya
error: Content is protected !!