July 23, 2026
ಗ್ರಾಮಾಂತರ ಸುದ್ದಿತಾಲೂಕು ಸುದ್ದಿ

ಮಹಿಳೆಯೊಂದಿಗೆ ಅನುಚಿತ ವರ್ತನೆ ಹಾಗೂ ಹಲ್ಲೆ ಆರೋಪ: ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು

ಬೆಳ್ತಂಗಡಿ: ಮಹಿಳೆಯೊಂದಿಗೆ ಅನುಚಿತ ವರ್ತನೆ ಹಾಗೂ ಹಲ್ಲೆ ಆರೋಪ ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ಜ.23 ರಂದು ಪ್ರಕರಣ ದಾಖಲಾಗಿದೆ.

ಸಂತ್ರಸ್ಥ ಮಹಿಳೆಯ ದೂರಿನಂತೆ, ಜ.23 ರಂದು ರಾತ್ರಿ, ಬೆಳ್ತಂಗಡಿ ಠಾಣಾ ವ್ಯಾಪ್ತಿಯಲ್ಲಿರುವ ಮಹಿಳೆಯ ಪತಿ ಮನೆಯಲ್ಲಿದ್ದಾಗ, ಆರೋಪಿ ಉಮೇಶ ಗೌಡರವರು ಮನೆಯೊಳಗಡೆ ಮಹಿಳೆಯೊಂದಿಗೆ ಅನುಚಿತವಾಗಿ ವರ್ತಿಸಿದ್ದು, ಈ ವೇಳೆ ತಡೆದ ಮಹಿಳೆಯ ಪತಿ, ಉಮೇಶ ಗೌಡ ಈತನ ಕಡೆಯವರಾದ ಹೋಮ್ ಸ್ಟೇ ಮಹೇಶ್, ರತೀಶ, ಅಶೋಕ, ಗಣೇಶ, ರವಿ, ಲೋಕಪ್ಪ ಗೌಡ ಮತ್ತು ಶಾಂತಪ್ಪ ಗೌಡ ಎಂಬವರುಗಳು ಹಲ್ಲೆ ನಡೆಸಿರುತ್ತಾರೆ. ಬಳಿಕ ಅವಾಚ್ಯ ಶಬ್ಧಗಳಿಂದ ಬೈದು, ಅವಮಾನಪಡಿಸಿ, ಕೊಲೆ ಬೆದರಿಕೆ ಹಾಕಿ ಹೊರಟು ಹೋಗಿರುತ್ತಾರೆ ಎಂಬುದಾಗಿ ನೀಡಿದ ದೂರಿನ ಮೇರೆಗೆ,‌ ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ಅಕ್ರ ನಂ 07/2024 ಕಲಂ: 143,147,148,447,354(ಎ),323, 504,506, ಜೊತೆಗೆ 149 ಐಪಿಸಿ ಕಲಂ: 3(2)(v)(a),3(1)(w)(1) SC/ST ACT 2015 ರಂತೆ ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸಲಾಗುತ್ತಿದೆ.

Related posts

ಮಹೇಶ್ ಶೆಟ್ಟಿ ತಿಮರೋಡಿಯವರಿಂದ ಜೈನ ಮತ್ತು ಹಿಂದೂ ಸಮುದಾಯಗಳ ನಡುವೆ ಅಶಾಂತಿಯನ್ನು ಪ್ರೇರೇಪಿಸುವ ಭಾಷಣ ಆರೋಪ: ಸೂಕ್ತ ಕಾನೂನು ಕ್ರಮಕ್ಕೆ ಒತ್ತಾಯಿಸಿ ಉಜಿರೆಯ ಅಜಿತ್ ಹೆಗ್ಡೆಯವರಿಂದ ಬೆಳ್ತಂಗಡಿ ಪೊಲೀಸ್ ಠಾಣೆಗೆ ದೂರು

Suddi Udaya

ವೇಣೂರು ಕುಂಭಶ್ರೀ ಶಾಲೆಯಲ್ಲಿ ಮಾತಾ-ಪಿತಾ-ಗುರುದೇವೋಭವ ಕಾರ್ಯಕ್ರಮ

Suddi Udaya

ಮಲೆಬೆಟ್ಟು ಶ್ರೀ ವನದುರ್ಗಾ ದೇವಸ್ಥಾನದಲ್ಲಿ ಶ್ರೀ ವರಮಹಾಲಕ್ಷ್ಮಿ ಪೂಜೆ

Suddi Udaya

ಪಾಡ್ಯಾರು ಮಜಲು ರಾಜಗ್ರಹ ನಿವಾಸಿ ಶ್ರೀಮತಿ ವಿಮಲಾ ಡಿ’ ಪಾಂಡಿ ನಿಧನ

Suddi Udaya

ಉಜಿರೆ ರುಡ್ ಸೆಟ್ ಸಂಸ್ಥೆಯಲ್ಲಿ ಉದ್ಯಮಶೀಲತಾ ಅಭಿವೃದ್ಧಿ- ಮದುಮಗಳ ಶೃಂಗಾರ ತರಬೇತಿಯ ಸಮಾರೋಪ ಸಮಾರಂಭ

Suddi Udaya

ಎಸ್‌ಡಿಎಂ ಪಿಯು ಕಾಲೇಜಿನಲ್ಲಿ ಆತ್ಮಹತ್ಯಾ ತಡೆ ದಿನದ ಅಂಗವಾಗಿ “ಭವಿಷ್ಯ ಕಾದಿದೆ ಆತ್ಮಹತ್ಯೆ ಬೇಡ” ಎಂಬ ಕಾರ್ಯಕ್ರಮ

Suddi Udaya
error: Content is protected !!