25.7 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿಶುಭಾರಂಭ

ಬೆಳ್ತಂಗಡಿಯಲ್ಲಿ ನೂತನ ಶಾಖೆ ‘ಕೋಟಕ್ ಲೈಫ್’ ಉದ್ಘಾಟನೆ

ಬೆಳ್ತಂಗಡಿ: ಇಲ್ಲಿಯ ಮುಖ್ಯ ರಸ್ತೆ ವೈಭವ್ ಆರ್ಕೇಡ್ ನಲ್ಲಿ ನೂತನವಾಗಿ ಪ್ರಾರಂಭಗೊಂಡ ‘ಕೋಟಕ್ ಲೈಫ್’ (kotak life) ಉದ್ಘಾಟನಾ ಕಾರ್ಯಕ್ರಮವು ಜ.25 ರಂದು ನಡೆಯಿತು.

ಕಾರ್ಯಕ್ರಮದ ಉದ್ಘಾಟನೆಯನ್ನು ವಿಧಾನ ಪರಿಷತ್ ಶಾಸಕ ಪ್ರತಾಪ್ ಸಿಂಹ ನಾಯಕ್ ನೆರವೇರಿಸಿ ಮಾತನಾಡಿ ಪ್ರಯತ್ನ, ತಾಳ್ಮೆ, ಶ್ರಮ , ನಂಬಿಕೆ, ವಿಶ್ವಾಸ ಇದ್ದಲ್ಲಿ ವ್ಯವಹಾರ ಯಶಸ್ವಿಯಾಗುವುದು ಹಾಗೂ ಜೀವನ ಭದ್ರತೆಯಲ್ಲಿ ಕೋಟಕ್ ಲೈಫ್ 2ನೇ ಸ್ಥಾನದಲ್ಲಿ ಇದೆ ಎಂದು ತಿಳಿಸಿ ಶುಭಹಾರೈಸಿದರು.

ಬೆಳ್ತಂಗಡಿ ಕೋಟಕ್ ಲೈಫ್ ಪ್ರೋವಿಜಿನಲ್ ಚೀಫ್ ಏಜೆನ್ಸಿ ಪಾಟ್ನರ್ ದಿನಕರ್ ಕೆ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದರು.

ಮುಖ್ಯ ಅತಿಥಿಗಳಾಗಿ ಬೆಳ್ತಂಗಡಿ ಶಾಸಕ ಹರೀಶ್ ಪೂಂಜ, ಮಂಗಳೂರು ಕೋಟಕ್ ಲೈಫ್ ರೀಜಿನಲ್ ಹೆಡ್ ಅಬ್ದುಲ್ ಗಫೂರ್, ಮಂಗಳೂರು ಕೋಟಕ್ ಲೈಫ್ ಏರಿಯಾ ಹೆಡ್ ಮೈಕಲ್ ಡಿ ಸೋಜ, ಬೆಳ್ತಂಗಡಿ ವೈಭವ್ ಆರ್ಕೇಡ್ ನ ಮಾಲಕ ಸೀತಾರಾಮ ಶೆಟ್ಟಿ, ಕೊಕ್ಕಡ ಉದ್ಯಮಿ ರಾಮಣ್ಣ ಗೌಡ ಕೆಚೋಡಿ, ಮಂಗಳೂರು ಕೋಟಕ್ ಲೈಫ್ ಚೀಫ್ ಏಜೆನ್ಸಿ ಪಾಟ್ನರ್ ಡೋಲ್ಫಿ ಮೊಂತೆರೊ, ಏರಿಯಾ ಮಾನ್ಯೇಜರ್ ಅಂಜನೇಯ, ಶಾಖಾ ಮಾನ್ಯೇಜರ್ ಗಳಾದ ನಿಸಾರ್ ಅಹಮ್ಮದ್ , ಪ್ರಜ್ವಲ್, ಪ್ರಿಮಿಯಂ ಏಜೆನ್ಸಿ ಮಾನೇಜರ್ ಕೃಪಾ ಉಪಸ್ಥಿತರಿದ್ದರು.


ಮಂಗಳೂರು ಕೋಟಕ್ ಲೈಫ್ ಎಕ್ಸಿಕ್ಯೂಟಿವ್ ಚೀಫ್ ಏಜೆನ್ಸಿ ಪಾಟ್ನರ್ ಸತ್ಯರಂಜನ್ ಕುಮಾರ್ ಕಾರ್ಯಕ್ರಮ ನಿರೂಪಿಸಿದರು. ಯೋಗೀಶ್ ಕೊಕ್ಕಡ ಆಳಂಬಿಲ ಸ್ವಾಗತಿಸಿ, ಗಿರೀಶ್ ಧನ್ಯವಾದವಿತ್ತರು.

Related posts

ಬೆಳ್ತಂಗಡಿ ರಾಜಕೇಸರಿ ಟ್ರಸ್ಟ್ ಸಂಸ್ಥಾಪಕ ದೀಪಕ್ ಜಿ ರವರಿಗೆ ಸ್ಪೂರ್ತಿ ಕುಮಾರ ಸೇವಾ ರತ್ನ ಪ್ರಶಸ್ತಿ

Suddi Udaya

ಡಿ.10: ಕರಾಯದಲ್ಲಿ ವಿದ್ಯುತ್ ನಿಲುಗಡೆ

Suddi Udaya

ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ: ಉಡುಪಿ ಜಿಲ್ಲೆ ಪ್ರಥಮ, ದ.ಕ ಜಿಲ್ಲೆ ದ್ವಿತೀಯ

Suddi Udaya

ನ.26: ಶ್ರೀ ಕಾಲಭೈರವೇಶ್ವರ ಒಕ್ಕಲಿಗ ಗೌಡರ ಕ್ರೆಡಿಟ್ ಸೌಹಾರ್ದ ಸಹಕಾರಿ ಸಂಘದ ಬೆಳ್ತಂಗಡಿ ಶಾಖೆಯ ಉದ್ಘಾಟನೆ

Suddi Udaya

ನಿವೃತ್ತ ಯೋಧ ಗೋಪಾಲಕೃಷ್ಣ ಕಾಂಚೋಡು ಅವರ ಡ್ರಾಗನ್ ಕೃಷಿ ತೋಟಕ್ಕೆ ವಿಜ್ಞಾನಿ ತಂಡ ಭೇಟಿ

Suddi Udaya

ಅಸೌಖ್ಯದಿಂದ ಬಳಲಿ ರಸ್ತೆ ಬದಿಯಲ್ಲಿ ಅನಾಥವಾಗಿ ಬಿದ್ದ ಅಪರಿಚಿತ ವ್ಯಕ್ತಿಯನ್ನು ಆಸ್ಪತ್ರೆಗೆ ದಾಖಲಿಸಿದ ನ.ಪಂ ಉಪಾಧ್ಯಕ್ಷ ಮತ್ತಿತರರು

Suddi Udaya
error: Content is protected !!