25.8 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿಶುಭಾರಂಭ

ಬೆಳ್ತಂಗಡಿಯಲ್ಲಿ ನೂತನ ಶಾಖೆ ‘ಕೋಟಕ್ ಲೈಫ್’ ಉದ್ಘಾಟನೆ

ಬೆಳ್ತಂಗಡಿ: ಇಲ್ಲಿಯ ಮುಖ್ಯ ರಸ್ತೆ ವೈಭವ್ ಆರ್ಕೇಡ್ ನಲ್ಲಿ ನೂತನವಾಗಿ ಪ್ರಾರಂಭಗೊಂಡ ‘ಕೋಟಕ್ ಲೈಫ್’ (kotak life) ಉದ್ಘಾಟನಾ ಕಾರ್ಯಕ್ರಮವು ಜ.25 ರಂದು ನಡೆಯಿತು.

ಕಾರ್ಯಕ್ರಮದ ಉದ್ಘಾಟನೆಯನ್ನು ವಿಧಾನ ಪರಿಷತ್ ಶಾಸಕ ಪ್ರತಾಪ್ ಸಿಂಹ ನಾಯಕ್ ನೆರವೇರಿಸಿ ಮಾತನಾಡಿ ಪ್ರಯತ್ನ, ತಾಳ್ಮೆ, ಶ್ರಮ , ನಂಬಿಕೆ, ವಿಶ್ವಾಸ ಇದ್ದಲ್ಲಿ ವ್ಯವಹಾರ ಯಶಸ್ವಿಯಾಗುವುದು ಹಾಗೂ ಜೀವನ ಭದ್ರತೆಯಲ್ಲಿ ಕೋಟಕ್ ಲೈಫ್ 2ನೇ ಸ್ಥಾನದಲ್ಲಿ ಇದೆ ಎಂದು ತಿಳಿಸಿ ಶುಭಹಾರೈಸಿದರು.

ಬೆಳ್ತಂಗಡಿ ಕೋಟಕ್ ಲೈಫ್ ಪ್ರೋವಿಜಿನಲ್ ಚೀಫ್ ಏಜೆನ್ಸಿ ಪಾಟ್ನರ್ ದಿನಕರ್ ಕೆ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದರು.

ಮುಖ್ಯ ಅತಿಥಿಗಳಾಗಿ ಬೆಳ್ತಂಗಡಿ ಶಾಸಕ ಹರೀಶ್ ಪೂಂಜ, ಮಂಗಳೂರು ಕೋಟಕ್ ಲೈಫ್ ರೀಜಿನಲ್ ಹೆಡ್ ಅಬ್ದುಲ್ ಗಫೂರ್, ಮಂಗಳೂರು ಕೋಟಕ್ ಲೈಫ್ ಏರಿಯಾ ಹೆಡ್ ಮೈಕಲ್ ಡಿ ಸೋಜ, ಬೆಳ್ತಂಗಡಿ ವೈಭವ್ ಆರ್ಕೇಡ್ ನ ಮಾಲಕ ಸೀತಾರಾಮ ಶೆಟ್ಟಿ, ಕೊಕ್ಕಡ ಉದ್ಯಮಿ ರಾಮಣ್ಣ ಗೌಡ ಕೆಚೋಡಿ, ಮಂಗಳೂರು ಕೋಟಕ್ ಲೈಫ್ ಚೀಫ್ ಏಜೆನ್ಸಿ ಪಾಟ್ನರ್ ಡೋಲ್ಫಿ ಮೊಂತೆರೊ, ಏರಿಯಾ ಮಾನ್ಯೇಜರ್ ಅಂಜನೇಯ, ಶಾಖಾ ಮಾನ್ಯೇಜರ್ ಗಳಾದ ನಿಸಾರ್ ಅಹಮ್ಮದ್ , ಪ್ರಜ್ವಲ್, ಪ್ರಿಮಿಯಂ ಏಜೆನ್ಸಿ ಮಾನೇಜರ್ ಕೃಪಾ ಉಪಸ್ಥಿತರಿದ್ದರು.


ಮಂಗಳೂರು ಕೋಟಕ್ ಲೈಫ್ ಎಕ್ಸಿಕ್ಯೂಟಿವ್ ಚೀಫ್ ಏಜೆನ್ಸಿ ಪಾಟ್ನರ್ ಸತ್ಯರಂಜನ್ ಕುಮಾರ್ ಕಾರ್ಯಕ್ರಮ ನಿರೂಪಿಸಿದರು. ಯೋಗೀಶ್ ಕೊಕ್ಕಡ ಆಳಂಬಿಲ ಸ್ವಾಗತಿಸಿ, ಗಿರೀಶ್ ಧನ್ಯವಾದವಿತ್ತರು.

Related posts

ಶ್ರೀ ಕೃಷ್ಣ ಭಜನಾ ಮಂದಿರದ ಸಭಾ ಭವನದ ನಿರ್ಮಾಣಕ್ಕೆ ಶ್ರೀ ಕ್ಷೇತ್ರ ಧ.ಗ್ರಾ. ಯೋ. ವತಿಯಿಂದ ರೂ.2ಲಕ್ಷ ಸಹಾಯಧನ

Suddi Udaya

ತಾಲೂಕಿನಲ್ಲಿ ಮುಂದುವರಿದ ಬೆಟ್ಟಿಂಗ್ ಭರಾಟೆ

Suddi Udaya

ನಾಳ: ಹೆದ್ದಾರಿ ಮೇಲೆ ಉರುಳಿ ಬಿದ್ದ ಮರ, ಕಿಲೋಮೀಟರ್ ದೂರ ವಾಹನ ದಟ್ಟಣೆ

Suddi Udaya

ಉಜಿರೆಯಲ್ಲಿ ಬ್ಯೂಟಿ ಬ್ಲಂಡ್ ಸಲೂನ್ ಶುಭಾರಂಭ

Suddi Udaya

ಧರ್ಮಸ್ಥಳ ಬಿಜೆಪಿ ಶಕ್ತಿ ಕೇಂದ್ರದ ಅಭ್ಯಾಸವರ್ಗ

Suddi Udaya

ವಿ.ಪ. ಮಾಜಿ ಶಾಸಕ ದ.ಕ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಕೆ.ಹರೀಶ್ ಕುಮಾರ್ ರವರ ಮುತುವರ್ಜಿಯಿಂದ ಸರಕಾರದ ವಿಶೇಷ ರೂ.50 ಲಕ್ಷ ಅನುದಾನದಿಂದ ಗೇರುಕಟ್ಟೆ – ಹೇರೋಡಿ ಕಾಂಕ್ರೀಟ್ ರಸ್ತೆ ಶಿಲಾನ್ಯಾಸ

Suddi Udaya
error: Content is protected !!