23.5 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಬೆಳಾಲು ಪ್ರೌಢಶಾಲೆಯಲ್ಲಿ ಕುಮಾರವ್ಯಾಸ ನಮನ, ಮುದ್ದಣ ಸ್ಮರಣೆ

ಬೆಳಾಲು: ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಪ್ರೌಢಶಾಲೆಯಲ್ಲಿ ಮುಖ್ಯೋಪಾಧ್ಯಾಯರಾದ ರಾಮಕೃಷ್ಣ ಭಟ್ ರವರ ಅಧ್ಯಕ್ಷತೆಯಲ್ಲಿ ಕುಮಾರವ್ಯಾಸ ನಮನ ಮತ್ತು ಕವಿ ಮುದ್ದಣರವರ ಸ್ಮರಣೆಯ ಕಾರ್ಯಕ್ರಮ ಜರಗಿತು.

ಆರಂಭದಲ್ಲಿ ಈರ್ವರು ಕವಿಗಳ ಭಾವಚಿತ್ರಕ್ಕೆ ಪುಷ್ಪಾರ್ಚನೆ ಸಲ್ಲಿಸಲಾಯಿತು. ಅನಂತರ ಕುಮಾರವ್ಯಾಸನ ಕವಿಕಾವ್ಯ ಪರಿಚಯದಲ್ಲಿ ಕುಮಾರವ್ಯಾಸನ ಪರಿಚಯವನ್ನು ಸುಕನ್ಯಾ ಹತ್ತನೇ ತರಗತಿ, ಮುದ್ದಣ ಪರಿಚಯವನ್ನು ಸೃಷ್ಟಿ ಎಂಟನೇ ತರಗತಿ, ಮುದ್ದಣ ಮನೋರಮೆಯರ ಸಂಭಾಷಣೆಯ ಕಾವ್ಯ ಭಾಗದ ಪ್ರಸ್ತುತಿಯನ್ನು ತೃಷಾ ಜೈನ್ ಮತ್ತು ಸಂಶಿಯ ಎಂಟನೇ ತರಗತಿ ಹಾಗೂ ಕುಮಾರವ್ಯಾಸ ಭಾರತದ ಆಯ್ದ ಕಾವ್ಯ ಭಾಗದಿಂದ ವಾಚನ ಪ್ರವಚನ ಗಮಕ ಕಾರ್ಯಕ್ರಮವನ್ನು ಹತ್ತನೇ ತರಗತಿಯ ಅಮೂಲ್ಯ ಮತ್ತು ಕಿರ್ತನಾ ನಡೆಸಿಕೊಟ್ಟರು.

ಶಿಕ್ಷಕರಾದ ಸುಮನ್ ರವರ ಮಾರ್ಗದರ್ಶನದಲ್ಲಿ ಜರಗಿದ ಈ ಕಾರ್ಯಕ್ರಮದ ನಿರ್ವಹಣೆಯನ್ನು ಮಾಡಿದ ಎಂಟನೇ ತರಗತಿಯ ಶ್ರೇಯಸ್ ಸ್ವಾಗತಿಸಿ, ವಂದಿಸಿದರು.

Related posts

ಪುಂಜಾಲಕಟ್ಟೆ ಸ್ಪಂದನ ಆಟೋ ಚಾಲಕ ಮಾಲಕರ ಸಂಘದ ವಾರ್ಷಿಕ ಮಹಾಸಭೆ: ಪದಾಧಿಕಾರಿಗಳ ಆಯ್ಕೆ

Suddi Udaya

ಗುರುವಾಯನಕೆರೆ: ಶ್ರೀ ಶಿವಂ ಟೆಕ್ಸ್‌ಟೈಲ್ಸ್ ಮತ್ತು ರೆಡಿಮೇಡ್ಸ್‌ನಲ್ಲಿ ದೀಪಾವಳಿ ಹಬ್ಬದ ಪ್ರಯುಕ್ತ ಶೇ.10-50 ವಿಶೇಷ ಆಫರ್

Suddi Udaya

ನಾಳ ಹಾಲು ಉತ್ಪಾದಕರ ಸಹಕಾರಿ ಸಂಘದ ಸಾಮಾನ್ಯ ಸಭೆ

Suddi Udaya

ಅನಾರು ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದ ವರ್ಷಾವಧಿ ಜಾತ್ರಾ ಮಹೋತ್ಸವ : ಧಾರ್ಮಿಕ ಸಭೆ, ಸಾಧಕರಿಗೆ ಸನ್ಮಾನ

Suddi Udaya

ಎಸ್.ಡಿ.ಎಮ್. ಪ.ಪೂ. ಕಾಲೇಜಿನ ವಿದ್ಯಾರ್ಥಿಗಳಿಗೆ ಸಾಧನೆಗೈದ ಕುಮಾರ್‌ ನಿಹಾರ್‌ ಎಸ್‌ ಆರ್‌ ಇವರೊಂದಿಗೆ ವಿಶೇಷ ಸಂವಾದ

Suddi Udaya

ಉಜಿರೆ ಶ್ರೀ ಆದಿನಾಗಬ್ರಹ್ಮ ಮೊಗೇರ್ಕಳ ದೇವಸ್ಥಾನ ಶ್ರೀ ಕ್ಷೇತ್ರ ಎರ್ನೋಡಿ ಜಾತ್ರಾ ಮಹೋತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya
error: Content is protected !!