September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಬೆಳಾಲು ಪ್ರೌಢಶಾಲೆಯಲ್ಲಿ ಕುಮಾರವ್ಯಾಸ ನಮನ, ಮುದ್ದಣ ಸ್ಮರಣೆ

ಬೆಳಾಲು: ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಪ್ರೌಢಶಾಲೆಯಲ್ಲಿ ಮುಖ್ಯೋಪಾಧ್ಯಾಯರಾದ ರಾಮಕೃಷ್ಣ ಭಟ್ ರವರ ಅಧ್ಯಕ್ಷತೆಯಲ್ಲಿ ಕುಮಾರವ್ಯಾಸ ನಮನ ಮತ್ತು ಕವಿ ಮುದ್ದಣರವರ ಸ್ಮರಣೆಯ ಕಾರ್ಯಕ್ರಮ ಜರಗಿತು.

ಆರಂಭದಲ್ಲಿ ಈರ್ವರು ಕವಿಗಳ ಭಾವಚಿತ್ರಕ್ಕೆ ಪುಷ್ಪಾರ್ಚನೆ ಸಲ್ಲಿಸಲಾಯಿತು. ಅನಂತರ ಕುಮಾರವ್ಯಾಸನ ಕವಿಕಾವ್ಯ ಪರಿಚಯದಲ್ಲಿ ಕುಮಾರವ್ಯಾಸನ ಪರಿಚಯವನ್ನು ಸುಕನ್ಯಾ ಹತ್ತನೇ ತರಗತಿ, ಮುದ್ದಣ ಪರಿಚಯವನ್ನು ಸೃಷ್ಟಿ ಎಂಟನೇ ತರಗತಿ, ಮುದ್ದಣ ಮನೋರಮೆಯರ ಸಂಭಾಷಣೆಯ ಕಾವ್ಯ ಭಾಗದ ಪ್ರಸ್ತುತಿಯನ್ನು ತೃಷಾ ಜೈನ್ ಮತ್ತು ಸಂಶಿಯ ಎಂಟನೇ ತರಗತಿ ಹಾಗೂ ಕುಮಾರವ್ಯಾಸ ಭಾರತದ ಆಯ್ದ ಕಾವ್ಯ ಭಾಗದಿಂದ ವಾಚನ ಪ್ರವಚನ ಗಮಕ ಕಾರ್ಯಕ್ರಮವನ್ನು ಹತ್ತನೇ ತರಗತಿಯ ಅಮೂಲ್ಯ ಮತ್ತು ಕಿರ್ತನಾ ನಡೆಸಿಕೊಟ್ಟರು.

ಶಿಕ್ಷಕರಾದ ಸುಮನ್ ರವರ ಮಾರ್ಗದರ್ಶನದಲ್ಲಿ ಜರಗಿದ ಈ ಕಾರ್ಯಕ್ರಮದ ನಿರ್ವಹಣೆಯನ್ನು ಮಾಡಿದ ಎಂಟನೇ ತರಗತಿಯ ಶ್ರೇಯಸ್ ಸ್ವಾಗತಿಸಿ, ವಂದಿಸಿದರು.

Related posts

ಧರ್ಮಸ್ಥಳ: ಆಸರೆ ಆನಿಮಲ್ ಟ್ರಸ್ಟ್ ಗೆ ಮೊದಲ ಸೇವಾ ಯೋಜನೆ ಹಸ್ತಾಂತರ

Suddi Udaya

ಅರಣ್ಯ ಒತ್ತುವರಿ ಮತ್ತು ಪಟ್ಟಾ ಜಮೀನು ಸೇರಿ 3 ಎಕರೆಗಿಂತ ಕಡಿಮೆ ಇರುವ ಅರಣ್ಯ ಒತ್ತುವರಿದಾರರನ್ನು ತೆರವುಗೊಳಿಸುವಂತಿಲ್ಲ: ಪ್ರತಾಪ್ ಸಿಂಹ ನಾಯಕ್

Suddi Udaya

ಬೆಳ್ತಂಗಡಿ ವಕೀಲರ ಸಂಘ, ಯುವ ವಕೀಲರ ವೇದಿಕೆಯ ವತಿಯಿಂದ ಕ್ರಿಸ್ ಮಸ್ ಆಚರಣೆ

Suddi Udaya

ಎಸ್‌ಎಸ್‌ಎಲ್‌ಸಿ ಫಲಿತಾಂಶ: ಮೂಡಬಿದ್ರೆ ಎಕ್ಸಲೆಂಟ್ ಆಂಗ್ಲ ಮಾಧ್ಯಮ ಶಾಲೆಗೆ ಶೇ. 100 ಫಲಿತಾಂಶ

Suddi Udaya

ಬೆಳ್ತಂಗಡಿ ಸ.ಪ್ರ.ದ. ಕಾಲೇಜಿನಲ್ಲಿ ವಾಣಿಜ್ಯ ಸಂಘ ಮತ್ತು ಐಕ್ಯುಎಸಿ ವತಿಯಿಂದ ಹಳ್ಳಿ ಸಂತೆ ಕಾರ್ಯಕ್ರಮ

Suddi Udaya

ಮುಂಡಾಜೆ ಪ. ಪೂ. ಕಾಲೇಜಿನಲ್ಲಿ ಪೋಷಕರ ಸಭೆ

Suddi Udaya
error: Content is protected !!