24 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಬೆಳಾಲು ಪ್ರೌಢಶಾಲೆಯಲ್ಲಿ ಕುಮಾರವ್ಯಾಸ ನಮನ, ಮುದ್ದಣ ಸ್ಮರಣೆ

ಬೆಳಾಲು: ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಪ್ರೌಢಶಾಲೆಯಲ್ಲಿ ಮುಖ್ಯೋಪಾಧ್ಯಾಯರಾದ ರಾಮಕೃಷ್ಣ ಭಟ್ ರವರ ಅಧ್ಯಕ್ಷತೆಯಲ್ಲಿ ಕುಮಾರವ್ಯಾಸ ನಮನ ಮತ್ತು ಕವಿ ಮುದ್ದಣರವರ ಸ್ಮರಣೆಯ ಕಾರ್ಯಕ್ರಮ ಜರಗಿತು.

ಆರಂಭದಲ್ಲಿ ಈರ್ವರು ಕವಿಗಳ ಭಾವಚಿತ್ರಕ್ಕೆ ಪುಷ್ಪಾರ್ಚನೆ ಸಲ್ಲಿಸಲಾಯಿತು. ಅನಂತರ ಕುಮಾರವ್ಯಾಸನ ಕವಿಕಾವ್ಯ ಪರಿಚಯದಲ್ಲಿ ಕುಮಾರವ್ಯಾಸನ ಪರಿಚಯವನ್ನು ಸುಕನ್ಯಾ ಹತ್ತನೇ ತರಗತಿ, ಮುದ್ದಣ ಪರಿಚಯವನ್ನು ಸೃಷ್ಟಿ ಎಂಟನೇ ತರಗತಿ, ಮುದ್ದಣ ಮನೋರಮೆಯರ ಸಂಭಾಷಣೆಯ ಕಾವ್ಯ ಭಾಗದ ಪ್ರಸ್ತುತಿಯನ್ನು ತೃಷಾ ಜೈನ್ ಮತ್ತು ಸಂಶಿಯ ಎಂಟನೇ ತರಗತಿ ಹಾಗೂ ಕುಮಾರವ್ಯಾಸ ಭಾರತದ ಆಯ್ದ ಕಾವ್ಯ ಭಾಗದಿಂದ ವಾಚನ ಪ್ರವಚನ ಗಮಕ ಕಾರ್ಯಕ್ರಮವನ್ನು ಹತ್ತನೇ ತರಗತಿಯ ಅಮೂಲ್ಯ ಮತ್ತು ಕಿರ್ತನಾ ನಡೆಸಿಕೊಟ್ಟರು.

ಶಿಕ್ಷಕರಾದ ಸುಮನ್ ರವರ ಮಾರ್ಗದರ್ಶನದಲ್ಲಿ ಜರಗಿದ ಈ ಕಾರ್ಯಕ್ರಮದ ನಿರ್ವಹಣೆಯನ್ನು ಮಾಡಿದ ಎಂಟನೇ ತರಗತಿಯ ಶ್ರೇಯಸ್ ಸ್ವಾಗತಿಸಿ, ವಂದಿಸಿದರು.

Related posts

ಮಲ್ಲೊಟ್ಟು -ಕೊಯ್ಯೂರು ವಿದ್ಯುತ್ ಫೀಡರ್ ನಲ್ಲಿ ಪರಿಹಾರ ಕಾಣದ ವಿದ್ಯುತ್ ಸಮಸ್ಯೆ.

Suddi Udaya

ಧರ್ಮಸ್ಥಳದಿಂದ ಚಿತ್ರದುರ್ಗಕ್ಕೆ ಹೋಗುತ್ತಿದ್ದ ಒಮ್ನಿ ಕಾರಿಗೆ ಲಾರಿ ಡಿಕ್ಕಿ : ಸ್ಥಳದಲ್ಲೇ ನಾಲ್ಕು ಮಂದಿ ಸಾವು

Suddi Udaya

ಕುವೆಟ್ಟು :ಶ್ರೀ ಗುರುನಾರಾಯಣ‌ ಸ್ವಾಮಿ ಸೇವಾ‌ ಸಂಘ ಯುವ ಬಿಲ್ಲವ ವೇದಿಕೆ, ಮಹಿಳಾ ಬಿಲ್ಲವ ವೇದಿಕೆ, ಕುವೆಟ್ಟು ಗ್ರಾಮ ಸಮಿತಿಯಿಂದ  ಗುರು ಪೂಜೆ ಹಾಗೂ ಸಾರ್ವಜನಿಕ ಶನೈಶ್ಚರ ಪೂಜೆ

Suddi Udaya

ಉಜಿರೆಯಲ್ಲಿ ಸಹನಶ್ರೀ ಸಹಕಾರಿ ಸೊಸೈಟಿಯ ಕಚೇರಿ ಉದ್ಘಾಟನೆ

Suddi Udaya

ಮಚ್ಚಿನ ಸರ್ಕಾರಿ ಪ್ರೌಢಶಾಲೆಯಲ್ಲಿ ಪ್ರಾಣಿಜನ್ಯ ರೋಗಗಳ ಬಗ್ಗೆ ಮಾಹಿತಿ ಕಾರ್ಯಾಗಾರ

Suddi Udaya

ಶಿರ್ಲಾಲು: ಅಂಗಡಿಗೆ ಬಿದ್ದ ಬೃಹತ್ ಗಾತ್ರದ ಮರ, ಅಪಾರ ಹಾನಿ

Suddi Udaya
error: Content is protected !!