22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಬೆಳಾಲು ಪ್ರೌಢಶಾಲೆಯಲ್ಲಿ ಕುಮಾರವ್ಯಾಸ ನಮನ, ಮುದ್ದಣ ಸ್ಮರಣೆ

ಬೆಳಾಲು: ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಪ್ರೌಢಶಾಲೆಯಲ್ಲಿ ಮುಖ್ಯೋಪಾಧ್ಯಾಯರಾದ ರಾಮಕೃಷ್ಣ ಭಟ್ ರವರ ಅಧ್ಯಕ್ಷತೆಯಲ್ಲಿ ಕುಮಾರವ್ಯಾಸ ನಮನ ಮತ್ತು ಕವಿ ಮುದ್ದಣರವರ ಸ್ಮರಣೆಯ ಕಾರ್ಯಕ್ರಮ ಜರಗಿತು.

ಆರಂಭದಲ್ಲಿ ಈರ್ವರು ಕವಿಗಳ ಭಾವಚಿತ್ರಕ್ಕೆ ಪುಷ್ಪಾರ್ಚನೆ ಸಲ್ಲಿಸಲಾಯಿತು. ಅನಂತರ ಕುಮಾರವ್ಯಾಸನ ಕವಿಕಾವ್ಯ ಪರಿಚಯದಲ್ಲಿ ಕುಮಾರವ್ಯಾಸನ ಪರಿಚಯವನ್ನು ಸುಕನ್ಯಾ ಹತ್ತನೇ ತರಗತಿ, ಮುದ್ದಣ ಪರಿಚಯವನ್ನು ಸೃಷ್ಟಿ ಎಂಟನೇ ತರಗತಿ, ಮುದ್ದಣ ಮನೋರಮೆಯರ ಸಂಭಾಷಣೆಯ ಕಾವ್ಯ ಭಾಗದ ಪ್ರಸ್ತುತಿಯನ್ನು ತೃಷಾ ಜೈನ್ ಮತ್ತು ಸಂಶಿಯ ಎಂಟನೇ ತರಗತಿ ಹಾಗೂ ಕುಮಾರವ್ಯಾಸ ಭಾರತದ ಆಯ್ದ ಕಾವ್ಯ ಭಾಗದಿಂದ ವಾಚನ ಪ್ರವಚನ ಗಮಕ ಕಾರ್ಯಕ್ರಮವನ್ನು ಹತ್ತನೇ ತರಗತಿಯ ಅಮೂಲ್ಯ ಮತ್ತು ಕಿರ್ತನಾ ನಡೆಸಿಕೊಟ್ಟರು.

ಶಿಕ್ಷಕರಾದ ಸುಮನ್ ರವರ ಮಾರ್ಗದರ್ಶನದಲ್ಲಿ ಜರಗಿದ ಈ ಕಾರ್ಯಕ್ರಮದ ನಿರ್ವಹಣೆಯನ್ನು ಮಾಡಿದ ಎಂಟನೇ ತರಗತಿಯ ಶ್ರೇಯಸ್ ಸ್ವಾಗತಿಸಿ, ವಂದಿಸಿದರು.

Related posts

ನಾಡಿನಾದ್ಯಂತ ನವರಾತ್ರಿ ಸಂಭ್ರಮ; ಕರಾವಳಿಯಲ್ಲಿ ಮಾರ್ನೆಮಿ ವೇಷಗಳ ಸದ್ದು ಆರಂಭ

Suddi Udaya

ಧರ್ಮಸ್ಥಳ: ರಾಷ್ಟ್ರೀಯ ರಸ್ತೆ ಸುರಕ್ಷತಾ ಮಾಸಾಚರಣೆ

Suddi Udaya

ಎಸ್ ಡಿ ಎಮ್ ಪಾಲಿಟೆಕ್ನಿಕ್ ಕಾಲೇಜಿನಲ್ಲಿ ಸ್ವಚ್ಚ ಭಾರತ ಅಭಿಯಾನದ ಕುರಿತು ವಿಶೇಷ ಉಪನ್ಯಾಸ

Suddi Udaya

ಬೆಳ್ತಂಗಡಿಗೆ ಹೊಸ ನ್ಯಾಯಾಲಯ ಕಟ್ಟಡ ಮಂಜೂರುಗೊಳಿಸುವಂತೆ ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ರವರಿಗೆ ರಕ್ಷಿತ್ ಶಿವಾರಂ ರಿಂದ ಮನವಿ

Suddi Udaya

ಸವಣಾಲು ಬೈರವಕಲ್ಲು ಶ್ರೀ ಬೈರವ ಮೂಜಿಲ್ನಾಯ ಪುರುಷರಾಯ ದೈವಸ್ಥಾನದ ಪುನರ್ ಪ್ರತಿಷ್ಠಾ ಕಲಶೋತ್ಸವ: ಧಾರ್ಮಿಕ ಸಭೆ

Suddi Udaya

ಬೆಳ್ತಂಗಡಿ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಬೆಂಬಲಿತ ಗ್ರಾ.ಪಂ., ಪಟ್ಟಣ ಪಂಚಾಯತ್ ಸದಸ್ಯರ ಮತ್ತು ಕಾರ್ಯಕರ್ತರ ಸಭೆ

Suddi Udaya
error: Content is protected !!