25.5 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಬೆಳಾಲು ಪ್ರೌಢಶಾಲೆಯಲ್ಲಿ ಕುಮಾರವ್ಯಾಸ ನಮನ, ಮುದ್ದಣ ಸ್ಮರಣೆ

ಬೆಳಾಲು: ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಪ್ರೌಢಶಾಲೆಯಲ್ಲಿ ಮುಖ್ಯೋಪಾಧ್ಯಾಯರಾದ ರಾಮಕೃಷ್ಣ ಭಟ್ ರವರ ಅಧ್ಯಕ್ಷತೆಯಲ್ಲಿ ಕುಮಾರವ್ಯಾಸ ನಮನ ಮತ್ತು ಕವಿ ಮುದ್ದಣರವರ ಸ್ಮರಣೆಯ ಕಾರ್ಯಕ್ರಮ ಜರಗಿತು.

ಆರಂಭದಲ್ಲಿ ಈರ್ವರು ಕವಿಗಳ ಭಾವಚಿತ್ರಕ್ಕೆ ಪುಷ್ಪಾರ್ಚನೆ ಸಲ್ಲಿಸಲಾಯಿತು. ಅನಂತರ ಕುಮಾರವ್ಯಾಸನ ಕವಿಕಾವ್ಯ ಪರಿಚಯದಲ್ಲಿ ಕುಮಾರವ್ಯಾಸನ ಪರಿಚಯವನ್ನು ಸುಕನ್ಯಾ ಹತ್ತನೇ ತರಗತಿ, ಮುದ್ದಣ ಪರಿಚಯವನ್ನು ಸೃಷ್ಟಿ ಎಂಟನೇ ತರಗತಿ, ಮುದ್ದಣ ಮನೋರಮೆಯರ ಸಂಭಾಷಣೆಯ ಕಾವ್ಯ ಭಾಗದ ಪ್ರಸ್ತುತಿಯನ್ನು ತೃಷಾ ಜೈನ್ ಮತ್ತು ಸಂಶಿಯ ಎಂಟನೇ ತರಗತಿ ಹಾಗೂ ಕುಮಾರವ್ಯಾಸ ಭಾರತದ ಆಯ್ದ ಕಾವ್ಯ ಭಾಗದಿಂದ ವಾಚನ ಪ್ರವಚನ ಗಮಕ ಕಾರ್ಯಕ್ರಮವನ್ನು ಹತ್ತನೇ ತರಗತಿಯ ಅಮೂಲ್ಯ ಮತ್ತು ಕಿರ್ತನಾ ನಡೆಸಿಕೊಟ್ಟರು.

ಶಿಕ್ಷಕರಾದ ಸುಮನ್ ರವರ ಮಾರ್ಗದರ್ಶನದಲ್ಲಿ ಜರಗಿದ ಈ ಕಾರ್ಯಕ್ರಮದ ನಿರ್ವಹಣೆಯನ್ನು ಮಾಡಿದ ಎಂಟನೇ ತರಗತಿಯ ಶ್ರೇಯಸ್ ಸ್ವಾಗತಿಸಿ, ವಂದಿಸಿದರು.

Related posts

“ಕಲಾ -ಸಂಭ್ರಮ 2024” ಸಾಂಸ್ಕೃತಿಕ ಸ್ಪರ್ಧೆಗಳಲ್ಲಿ ಅಳದಂಗಡಿ ಸರಕಾರಿ ಪ್ರೌಢ ಶಾಲೆಗೆ ಪ್ರಶಸ್ತಿ

Suddi Udaya

ಕ್ಯಾನ್ಸರ್ ಪೀಡಿತರಿಗೆ ಕೇಶದಾನಗೈದು ಮಾನವೀಯತೆ ಮೆರೆದ ಉಜಿರೆಯ ದಿಕ್ಷೀತಾ

Suddi Udaya

ಗೇರುಕಟ್ಟೆ ಪತಂಜಲಿ ಯೋಗ ಶಾಖೆಯಲ್ಲಿ ಸ್ವಾತಂತ್ರ್ಯೋತ್ಸವ ಆಚರಣೆ

Suddi Udaya

ಪಬ್ಲಿಕ್ ಪರೀಕ್ಷೆ : ಉಣ್ಣಾಲು , ಕೊಯ್ಯೂರು ಸಿರಾಜುಲ್ ಹುದಾ ಅರೇಬಿಕ್ ಸ್ಕೂಲ್ ವಿದ್ಯಾರ್ಥಿ ನೂರುನ್ನಿಸಾ ರಾಷ್ಟ್ರ ಮಟ್ಟದಲ್ಲಿ ಪ್ರಥಮ ರ್‍ಯಾಂಕ್: ಉಣ್ಣಾಲು ಕೊಯ್ಯೂರು ಮದರಸಕ್ಕೆ ಶೇಕಡಾ 100 ಫಲಿತಾಂಶ

Suddi Udaya

ಕಳೆಂಜ ಗ್ರಾ,ಪಂ. ವ್ಯಾಪ್ತಿಯ ಬಿಜೆಪಿ ಶಕ್ತಿ ಕೇಂದ್ರದ ಸಭೆ

Suddi Udaya

ಏ.23: ಹುರುಂಬಿದೊಟ್ಟು ದೇವಾಲಯ ನಿರ್ಮಾಣದ ಶಿಲಾನ್ಯಾಸ-ವಿಜ್ಞಾಪನಾ ಪತ್ರ ಬಿಡುಗಡೆ

Suddi Udaya
error: Content is protected !!