25.5 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ನಾಲ್ಕೂರುನಲ್ಲಿ ಶ್ರೀ ಕಟೀಲು ಕ್ಷೇತ್ರ ಮಹಾತ್ಮೆ ಯಕ್ಷಗಾನ ಸೇವಾ ಬಯಲಾಟ

ಬಳಂಜ: ಇಲ್ಲಿಯ ನಾಲ್ಕೂರು ಬಾಕಿಮಾರು ಗದ್ದೆ ಕುರೆಲ್ಯ ಗುತ್ತುವಿನಲ್ಲಿ ಶ್ರೀ ಕಟೀಲು ಕ್ಷೇತ್ರ ಮಹಾತ್ಮೆ ಯಕ್ಷಗಾನ ಸೇವಾ ಬಯಲಾಟ ಜ.24 ರಂದು ನಡೆಯಿತು.

ಬರೆಮೇಲು ಜಯಂತ ಭಟ್ ಇವರ ಮನೆಯಿಂದ ಶ್ರೀದೇವರ ವೈಭವೋಪೇತ ಮೆರವಣಿಗೆ ಹೊರಟು, ಕುರೆಲ್ಯ ಗುತ್ತು ಬಾಕಿಮಾರು ಗದ್ದೆಯಲ್ಲಿ ಚೌಕಿ ಪೂಜೆ , ಶ್ರೀ ಕಟೀಲು ದುರ್ಗಾಪರಮೇಶ್ವರೀ ಪ್ರಸಾದಿತ ದಶಾವತಾರ ಯಕ್ಷಗಾನ ಮಂಡಳಿ ಇವರಿಂದ ಶ್ರೀ ಕಟೀಲು ಕ್ಷೇತ್ರ ಮಹಾತ್ಮೆ ಎಂಬ ಯಕ್ಷಗಾನ ಸೇವಾ ಬಯಲಾಟ ನಡೆಯಿತು.

ಯಕ್ಷಗಾನ ಕಲಾವಿದ ರಾಜ್ಯ ಪ್ರಶಸ್ತಿ ವಿಜೇತ ಕೊರಗಪ್ಪ ಶೆಟ್ಟಿ ಅರ್ವ, ಯಕ್ಷಗಾನ ಕಲಾವಿದ ಶ್ರೀಧರ ಭಟ್ ನಾಲ್ಕೂರು ಇವರಿಗೆ ಅಭಿನಂದನಾ ಸಮಾರಂಭ ನಡೆಯಿತು.

ವಿಧಾನಪರಿಷತ್ ಶಾಸಕ ಕೆ. ಪ್ರತಾಪಸಿಂಹ ನಾಯಕ್, ಅಳದಂಗಡಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಅಧ್ಯಕ್ಷ ರಾಕೇಶ್ ಹೆಗ್ಡೆ ಬಳಂಜ, ಪ್ರಗತಿಪರ ಕೃಷಿಕ ಸತೀಶ್ ರೈ ಬಾರ್ದಡ್ಕ, ಕುರೆಲ್ಯಗುತ್ತು ಮನೆತನದ ಹಿರಿಯರಾದ ನೋಣಯ್ಯ ಶೆಟ್ಟಿ, ತುಳು ಸಾಹಿತ್ಯ ಅಕಾಡಮಿ ಸದಸ್ಯ ರವೀಂದ್ರ ಶೆಟ್ಟಿ ಬಳಂಜ, ಬಳಂಜ ಗ್ರಾ.ಪಂ ಸದಸ್ಯ ಜಯ ಶೆಟ್ಟಿ ಪಾದೆ , ಸುರೇಂದ್ರ ಶೆಟ್ಟಿ ಕುರೆಲ್ಯ ವೇದಿಕೆಯಲ್ಲಿ ಉಪಸ್ಥಿತರಿದ್ದರು.

ಕಾರ್ಯಕ್ರಮದಲ್ಲಿ ಊರ ಪರವೂರ ಸಾವಿರಾರು ಭಕ್ತರು, ವಿವಿಧ ಕ್ಷೇತ್ರದ ಗಣ್ಯರು ನೆರೆದಿದ್ದರು. ದೇವರ ಪ್ರಸಾದ ಹಾಗೂ ಸಾರ್ವಜನಿಕ‌ ಅನ್ನಸಂತರ್ಪಣೆ ನಡೆಯಿತು.

Related posts

ವೇಣೂರು ವಿದ್ಯುತ್ ವಿತರಣಾ ಕೇಂದ್ರದಲ್ಲಿ ಹಾಲಿ ಇರುವ 5 MVA ಶಕ್ತಿ ಪರಿವರ್ತಕವನ್ನು 12.5 MVA ಸಾಮರ್ಥ್ಯಕ್ಕೆ ಬದಲಾವಣೆ: ಸಾರ್ವಜನಿಕರಿಂದ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ರಕ್ಷಿತ್ ಶಿವರಾಂ ರವರಿಗೆ ಅಭಿನಂದನೆ

Suddi Udaya

ಬೆಳ್ತಂಗಡಿ ವಕೀಲರ ನಿಯೋಗದಿಂದ ವಿ.ಪ. ಶಾಸಕ ಐವನ್ ಡಿ ಸೋಜಾ ರವರ ಭೇಟಿ, ಹೊಸ ನ್ಯಾಯಾಲಯ ಸಂಕೀರ್ಣದ ಕಾಮಗಾರಿಯ ಬಗ್ಗೆ ಚರ್ಚೆ

Suddi Udaya

ಧರ್ಮಸ್ಥಳ ಡಾ. ಡಿ. ವೀರೇಂದ್ರ ಹೆಗ್ಗಡೆಯವರಿಗೆ ಅಯೋಧ್ಯೆಯ ಶ್ರೀ ರಾಮ ಮಂದಿರದ ಉದ್ಘಾಟನೆಯ ಆಹ್ವಾನ ಪತ್ರಿಕೆ

Suddi Udaya

ಸುದೇಮುಗೇರು ಜೀವನ್ ರವರ ಮನೆಗೆ ಮಂಗಳೂರು ಕಥೋಲಿಕ್ ಸಭಾ ಪ್ರದೇಶ್ ಅಧ್ಯಕ್ಷ ಸಂತೋಷ್ ಡಿಸೋಜ ಹಾಗೂ ಇತರರು ಭೇಟಿ

Suddi Udaya

ಪಡಂಗಡಿ ಗ್ರಾ.ಪಂ. ನ ಪ್ರಥಮ ಸುತ್ತಿನ ಗ್ರಾಮ ಸಭೆ

Suddi Udaya

ಗೇರುಕಟ್ಟೆ: ಪರಪ್ಪು ಮಸೀದಿಯಲ್ಲಿ ಬಕ್ರೀದ್ ಆಚರಣೆ

Suddi Udaya
error: Content is protected !!