22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ನಾಲ್ಕೂರುನಲ್ಲಿ ಶ್ರೀ ಕಟೀಲು ಕ್ಷೇತ್ರ ಮಹಾತ್ಮೆ ಯಕ್ಷಗಾನ ಸೇವಾ ಬಯಲಾಟ

ಬಳಂಜ: ಇಲ್ಲಿಯ ನಾಲ್ಕೂರು ಬಾಕಿಮಾರು ಗದ್ದೆ ಕುರೆಲ್ಯ ಗುತ್ತುವಿನಲ್ಲಿ ಶ್ರೀ ಕಟೀಲು ಕ್ಷೇತ್ರ ಮಹಾತ್ಮೆ ಯಕ್ಷಗಾನ ಸೇವಾ ಬಯಲಾಟ ಜ.24 ರಂದು ನಡೆಯಿತು.

ಬರೆಮೇಲು ಜಯಂತ ಭಟ್ ಇವರ ಮನೆಯಿಂದ ಶ್ರೀದೇವರ ವೈಭವೋಪೇತ ಮೆರವಣಿಗೆ ಹೊರಟು, ಕುರೆಲ್ಯ ಗುತ್ತು ಬಾಕಿಮಾರು ಗದ್ದೆಯಲ್ಲಿ ಚೌಕಿ ಪೂಜೆ , ಶ್ರೀ ಕಟೀಲು ದುರ್ಗಾಪರಮೇಶ್ವರೀ ಪ್ರಸಾದಿತ ದಶಾವತಾರ ಯಕ್ಷಗಾನ ಮಂಡಳಿ ಇವರಿಂದ ಶ್ರೀ ಕಟೀಲು ಕ್ಷೇತ್ರ ಮಹಾತ್ಮೆ ಎಂಬ ಯಕ್ಷಗಾನ ಸೇವಾ ಬಯಲಾಟ ನಡೆಯಿತು.

ಯಕ್ಷಗಾನ ಕಲಾವಿದ ರಾಜ್ಯ ಪ್ರಶಸ್ತಿ ವಿಜೇತ ಕೊರಗಪ್ಪ ಶೆಟ್ಟಿ ಅರ್ವ, ಯಕ್ಷಗಾನ ಕಲಾವಿದ ಶ್ರೀಧರ ಭಟ್ ನಾಲ್ಕೂರು ಇವರಿಗೆ ಅಭಿನಂದನಾ ಸಮಾರಂಭ ನಡೆಯಿತು.

ವಿಧಾನಪರಿಷತ್ ಶಾಸಕ ಕೆ. ಪ್ರತಾಪಸಿಂಹ ನಾಯಕ್, ಅಳದಂಗಡಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಅಧ್ಯಕ್ಷ ರಾಕೇಶ್ ಹೆಗ್ಡೆ ಬಳಂಜ, ಪ್ರಗತಿಪರ ಕೃಷಿಕ ಸತೀಶ್ ರೈ ಬಾರ್ದಡ್ಕ, ಕುರೆಲ್ಯಗುತ್ತು ಮನೆತನದ ಹಿರಿಯರಾದ ನೋಣಯ್ಯ ಶೆಟ್ಟಿ, ತುಳು ಸಾಹಿತ್ಯ ಅಕಾಡಮಿ ಸದಸ್ಯ ರವೀಂದ್ರ ಶೆಟ್ಟಿ ಬಳಂಜ, ಬಳಂಜ ಗ್ರಾ.ಪಂ ಸದಸ್ಯ ಜಯ ಶೆಟ್ಟಿ ಪಾದೆ , ಸುರೇಂದ್ರ ಶೆಟ್ಟಿ ಕುರೆಲ್ಯ ವೇದಿಕೆಯಲ್ಲಿ ಉಪಸ್ಥಿತರಿದ್ದರು.

ಕಾರ್ಯಕ್ರಮದಲ್ಲಿ ಊರ ಪರವೂರ ಸಾವಿರಾರು ಭಕ್ತರು, ವಿವಿಧ ಕ್ಷೇತ್ರದ ಗಣ್ಯರು ನೆರೆದಿದ್ದರು. ದೇವರ ಪ್ರಸಾದ ಹಾಗೂ ಸಾರ್ವಜನಿಕ‌ ಅನ್ನಸಂತರ್ಪಣೆ ನಡೆಯಿತು.

Related posts

ಸರಕಾರಿ ಪ್ರಥಮ ದರ್ಜೆ ಕಾಲೇಜು ಬೆಳ್ತಂಗಡಿ.ಶಿಕ್ಷಕ ರಕ್ಷಕ ಸಂಘದ ಪೋಷಕರ ಸಭೆ .

Suddi Udaya

ಶಿಶಿಲ ಬಿಜೆಪಿ ಗ್ರಾಮ ಸಮಿತಿ ವತಿಯಿಂದ ಬಿಜೆಪಿ ಕಾರ್ಯಕರ್ತರಾದ ಚಂದ್ರಶೇಖರ್ ಗೌಡ ಧರ್ಮದಕಳ ಹಾಗೂ ಚೋಮರಿಗೆ ನುಡಿನಮನ ಕಾರ್ಯಕ್ರಮ

Suddi Udaya

ಕನ್ಯಾಡಿ ಸರ್ಕಾರಿ ಶಾಲೆಗೆ ಹಸಿರು ನೈರ್ಮಲ್ಯ ಅಭ್ಯುದಯ ಪ್ರಶಸ್ತಿ

Suddi Udaya

ಮುಂಡಾಜೆ : ವಿವೇಕಾನಂದ ಶಿಕ್ಷಣ ಸಂಸ್ಥೆಯಲ್ಲಿ ಸೈಬರ್ ಅಪರಾಧಗಳ ತಡೆಗಟ್ಟುವಿಕೆ ಕುರಿತು ಮಾಹಿತಿ ಕಾರ್ಯಕ್ರಮ

Suddi Udaya

ಅನಘ ಮನೆಯ ಕಳ್ಳತನ ಪ್ರಕರಣ ಶೀಘ್ರವಾಗಿ ಭೇದಿಸುವಂತೆ ವೇಣೂರು ಪೊಲೀಸ್ ಠಾಣೆಗೆ ಕುತ್ಲೂರು ಗ್ರಾಮದ ಮಹಿಳೆಯರಿಂದ ಮನವಿ

Suddi Udaya

ತೆಂಕಕಾರಂದೂರು ಶ್ರೀ ವಿಷ್ಣುಮೂರ್ತಿ ದೇವಸ್ಥಾನದಲ್ಲಿ ಶ್ರೀ ರಾಮ ದೇವರು ರಾಮ ತಾರಕ ಹೋಮ ಪೂರ್ಣಹುತಿ ಕಾಲದಲ್ಲಿ ಅಗ್ನಿ ಮುಖದಲ್ಲಿ ಕಂಡು ಬಂದ ದೃಶ್ಯ

Suddi Udaya
error: Content is protected !!