23.5 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಆಟೋ ರಿಕ್ಷಾದಲ್ಲಿ ಬಾಡಿಗೆಗೆ ಬಂದ ಚಿಕ್ಕಮಗಳೂರು ನಿವಾಸಿಯ ಮೇಲೆ ಹಲ್ಲೆ , ದರೋಡೆ : ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು

ಬೆಳ್ತಂಗಡಿ : ಚಿಕ್ಕಮಗಳೂರು ನಿವಾಸಿ ಈಶ್ವರ ರವರು ಬೆಳ್ತಂಗಡಿಯ ಗುತ್ಯಡ್ಕ ಎಂಬಲ್ಲಿಗೆ ಆಟೋ ರಿಕ್ಷಾದಲ್ಲಿ ಬಾಡಿಗೆಗೆ ಬಂದು ಕೆಲಸ ಮುಗಿಸಿ, ರಿಕ್ಷಾದಲ್ಲಿ ಹೋಗುತ್ತಿರುವಾಗ ಉಕ್ಕುಡ ಎಂಬಲ್ಲಿ ಪ್ರವೀಣ್‌ ಗೌಡ ಹಾಗೂ ಇತರ ಇಬ್ಬರೂ ಆಟೋವನ್ನು ಅಡ್ಡಗಟ್ಟಿ ಈಶ್ವರರವರಿಗೆ ಮಾರಕಾಯುಧ ತೋರಿಸಿ, ಕೈಯಿಂದ ಹಲ್ಲೆ ನಡೆಸಿ, ಜಾತಿ ನಿಂದನೆ ಮಾಡಿ ಅವಾಚ್ಯ ಶಬ್ದಗಳಿಂದ ಬೈದು ರೂ 1450/- ನ್ನು ದರೋಡೆ ಮಾಡಿರುವುದಾಗಿ ನೀಡಿದ ದೂರಿನಂತೆ ಜ.23 ರಂದು ಬೆಳ್ತಂಗಡಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಸಂಸೆ ಗ್ರಾಮ ಅಂಚೆ ಕಳಸ ತಾಲೂಕು ಚಿಕ್ಕಮಗಳೂರು ನಿವಾಸಿ ಈಶ್ವರ (52) ಎಂಬವರ ದೂರಿನಂತೆ, ಜ.23 ರಂದು ರಾತ್ರಿ ಬೆಳ್ತಂಗಡಿ ತಾಲೂಕು ಗುತ್ಯಡ್ಕ ಎಂಬಲ್ಲಿಗೆ ಆಟೋ ರೀಕ್ಷಾದಲ್ಲಿ ಬಾಡಿಗೆಗೆ ಬಂದು ಕೆಲಸ ಮುಗಿಸಿ, ತನ್ನ ಬಾಬ್ತು ರೀಕ್ಷಾದಲ್ಲಿ ಹೋಗುತ್ತಿರುವಾಗ ಉಕ್ಕುಡ ಎಂಬಲ್ಲಿ ಪ್ರವೀಣ್‌ ಗೌಡ ಹಾಗೂ ಇತರ ಇಬ್ಬರೂ ಆಟೋವನ್ನು ಅಡ್ಡಗಟ್ಟಿ ಮಾರಕಾಯುಧ ತೋರಿಸಿ, ಕೈಯಿಂದ ಹಲ್ಲೆ ನಡೆಸಿದ್ದು, ಜಾತಿ ನಿಂದನೆ ಮಾಡಿ ಅವಾಚ್ಯ ಶಬ್ದಗಳಿಂದ ಬೈದು ರೂ 1450/- ನ್ನು ದರೋಡೆ ಮಾಡಿರುತ್ತಾರೆ ಹಾಗೂ ಪಿರ್ಯಾದಿರವರ ಬಳಿಯಿದ್ದ ಅಡುಗೆ ಸಾಮಾನುಗಳನ್ನು ಕದ್ದುಕೊಂಡು ಹೋಗಿರುತ್ತಾರೆ ಎಂಬುದಾಗಿ ನೀಡಿದ ದೂರಿನಂತೆ ಬೆಳ್ತಂಗಡಿ ಪೊಲೀಸ್ ಠಾಣಾ ಅಕ್ರ ನಂ 08/2024 ಕಲಂ: 341,323,504,392, 379,, ಐಪಿಸಿ ಕಲಂ: 3(1)(S) ,3(2)(va) SC/ST ACT 2015 ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸಲಾಗುತ್ತಿದೆ.

Related posts

ಅಳದಂಗಡಿ ಸ. ಪ್ರೌ. ಶಾಲೆ ಮಕ್ಕಳಿಂದ ನಗರ ಸ್ವಚ್ಛತೆ, ಪ್ಲಾಸ್ಟಿಕ್ ಬಳಕೆ ಬಗ್ಗೆ ಜಾಗೃತಿ

Suddi Udaya

ಕಕ್ಕಿಂಜೆ ಸರಕಾರಿ ಪ್ರೌಢಶಾಲೆಯಲ್ಲಿ ಹದಿಹರೆಯದ ಆರೋಗ್ಯ–ನೈರ್ಮಲ್ಯ ಕುರಿತು ತಜ್ಞರಿಂದ ಮಾಹಿತಿ ಕಾರ್ಯಾಗಾರ

Suddi Udaya

ಕಾಂಗ್ರೆಸ್ ಪಕ್ಷದ ಹಿರಿಯ ಕಾರ್ಯಕರ್ತ: ಕೊಲ್ಲಿ ದೇವಸ್ಥಾನದ ಮಾಜಿ ಮೊಕ್ತೇಸರ, ಯಕ್ಷಗಾನ ಅರ್ಥದಾರಿ ಮಂಜುನಾಥ ಕಾಮತ್ ನಿಧನ

Suddi Udaya

ನಾವರ ಪ್ರಗತಿಬಂಧು ಒಕ್ಕೂಟದ ತ್ರೈಮಾಸಿಕ ಸಭೆ

Suddi Udaya

ಉಪನಯನದಲ್ಲಿ ಗಾನವೈಭವ

Suddi Udaya

ವಾಣಿ ಪದವಿಪೂರ್ವ ಕಾಲೇಜಿನ ನಮೃತ ರಾಜ್ಯಕ್ಕೆ ಹತ್ತನೇ ಸ್ಥಾನ

Suddi Udaya
error: Content is protected !!