23.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಆಟೋ ರಿಕ್ಷಾದಲ್ಲಿ ಬಾಡಿಗೆಗೆ ಬಂದ ಚಿಕ್ಕಮಗಳೂರು ನಿವಾಸಿಯ ಮೇಲೆ ಹಲ್ಲೆ , ದರೋಡೆ : ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು

ಬೆಳ್ತಂಗಡಿ : ಚಿಕ್ಕಮಗಳೂರು ನಿವಾಸಿ ಈಶ್ವರ ರವರು ಬೆಳ್ತಂಗಡಿಯ ಗುತ್ಯಡ್ಕ ಎಂಬಲ್ಲಿಗೆ ಆಟೋ ರಿಕ್ಷಾದಲ್ಲಿ ಬಾಡಿಗೆಗೆ ಬಂದು ಕೆಲಸ ಮುಗಿಸಿ, ರಿಕ್ಷಾದಲ್ಲಿ ಹೋಗುತ್ತಿರುವಾಗ ಉಕ್ಕುಡ ಎಂಬಲ್ಲಿ ಪ್ರವೀಣ್‌ ಗೌಡ ಹಾಗೂ ಇತರ ಇಬ್ಬರೂ ಆಟೋವನ್ನು ಅಡ್ಡಗಟ್ಟಿ ಈಶ್ವರರವರಿಗೆ ಮಾರಕಾಯುಧ ತೋರಿಸಿ, ಕೈಯಿಂದ ಹಲ್ಲೆ ನಡೆಸಿ, ಜಾತಿ ನಿಂದನೆ ಮಾಡಿ ಅವಾಚ್ಯ ಶಬ್ದಗಳಿಂದ ಬೈದು ರೂ 1450/- ನ್ನು ದರೋಡೆ ಮಾಡಿರುವುದಾಗಿ ನೀಡಿದ ದೂರಿನಂತೆ ಜ.23 ರಂದು ಬೆಳ್ತಂಗಡಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಸಂಸೆ ಗ್ರಾಮ ಅಂಚೆ ಕಳಸ ತಾಲೂಕು ಚಿಕ್ಕಮಗಳೂರು ನಿವಾಸಿ ಈಶ್ವರ (52) ಎಂಬವರ ದೂರಿನಂತೆ, ಜ.23 ರಂದು ರಾತ್ರಿ ಬೆಳ್ತಂಗಡಿ ತಾಲೂಕು ಗುತ್ಯಡ್ಕ ಎಂಬಲ್ಲಿಗೆ ಆಟೋ ರೀಕ್ಷಾದಲ್ಲಿ ಬಾಡಿಗೆಗೆ ಬಂದು ಕೆಲಸ ಮುಗಿಸಿ, ತನ್ನ ಬಾಬ್ತು ರೀಕ್ಷಾದಲ್ಲಿ ಹೋಗುತ್ತಿರುವಾಗ ಉಕ್ಕುಡ ಎಂಬಲ್ಲಿ ಪ್ರವೀಣ್‌ ಗೌಡ ಹಾಗೂ ಇತರ ಇಬ್ಬರೂ ಆಟೋವನ್ನು ಅಡ್ಡಗಟ್ಟಿ ಮಾರಕಾಯುಧ ತೋರಿಸಿ, ಕೈಯಿಂದ ಹಲ್ಲೆ ನಡೆಸಿದ್ದು, ಜಾತಿ ನಿಂದನೆ ಮಾಡಿ ಅವಾಚ್ಯ ಶಬ್ದಗಳಿಂದ ಬೈದು ರೂ 1450/- ನ್ನು ದರೋಡೆ ಮಾಡಿರುತ್ತಾರೆ ಹಾಗೂ ಪಿರ್ಯಾದಿರವರ ಬಳಿಯಿದ್ದ ಅಡುಗೆ ಸಾಮಾನುಗಳನ್ನು ಕದ್ದುಕೊಂಡು ಹೋಗಿರುತ್ತಾರೆ ಎಂಬುದಾಗಿ ನೀಡಿದ ದೂರಿನಂತೆ ಬೆಳ್ತಂಗಡಿ ಪೊಲೀಸ್ ಠಾಣಾ ಅಕ್ರ ನಂ 08/2024 ಕಲಂ: 341,323,504,392, 379,, ಐಪಿಸಿ ಕಲಂ: 3(1)(S) ,3(2)(va) SC/ST ACT 2015 ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸಲಾಗುತ್ತಿದೆ.

Related posts

ಉಜಿರೆ ವಾಣಿಜ್ಯ ಮತ್ತು ಕೈಗಾರಿಕಾ ಸಂಘದಿಂದ ಉಜಿರೆ ವರ್ತಕರ ಕುಟುಂಬ ಮಿಲನ ಕಾರ್ಯಕ್ರಮ

Suddi Udaya

ಉರುವಾಲು: ಉರುವಾಲುಪದವು ಶಿವಾಜಿನಗರದ ಶ್ರೀ ಮಹಮ್ಮಾಶ್ರೀ ದೇವಿಯ ಪ್ರತಿಷ್ಠಾ ಮಹೋತ್ಸವ – ಧಾರ್ಮಿಕ ಸಭೆ

Suddi Udaya

ಬೆಳ್ತಂಗಡಿ : ಜೈನ ವಿದ್ಯಾರ್ಥಿ ಪ್ರೋತ್ಸಾಹ ಧನಕ್ಕಾಗಿ ಅರ್ಜಿ ಅಹ್ವಾನ

Suddi Udaya

ಪಾರೆಂಕಿ ಖಾಸಗಿ ವ್ಯಕ್ತಿಯಿಂದ ಸಾರ್ವಜನಿಕ ಕಾಲು ದಾರಿಗೆ ತಡೆಯಾಗಿದ್ದು, ತೆರವುಗೊಳಿಸಲು ಆಗ್ರಹ: ಸಾರ್ವಜನಿಕರು, ಕೃಷಿಕರ ಕುಂದುಕೊರತೆಗಳ ನಿವಾರಣೆಗೆ ಕನ್ನಡ ಸೇನೆ ಕರ್ನಾಟಕ ಹೋರಾಟ

Suddi Udaya

ಕುಕ್ಕೇಡಿ:ಕೋಟಿ ಚೆನ್ನಯ ಸೇವಾ ಸಂಘದಿಂದ ವಿದ್ಯಾರ್ಥಿಗಳಿಗೆ ಪುಸ್ತಕ ವಿತರಣೆ

Suddi Udaya

ಶಿಬಾಜೆ : ಹಾವುಗಳ ಗುರುತಿಸುವಿಕೆ ಮುನ್ನೆಚ್ಚರಿಕೆ ಮತ್ತು ಪ್ರಥಮ ಚಿಕಿತ್ಸೆ ಮಾಹಿತಿ ಕಾರ್ಯಕ್ರಮ

Suddi Udaya
error: Content is protected !!