September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಆಟೋ ರಿಕ್ಷಾದಲ್ಲಿ ಬಾಡಿಗೆಗೆ ಬಂದ ಚಿಕ್ಕಮಗಳೂರು ನಿವಾಸಿಯ ಮೇಲೆ ಹಲ್ಲೆ , ದರೋಡೆ : ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು

ಬೆಳ್ತಂಗಡಿ : ಚಿಕ್ಕಮಗಳೂರು ನಿವಾಸಿ ಈಶ್ವರ ರವರು ಬೆಳ್ತಂಗಡಿಯ ಗುತ್ಯಡ್ಕ ಎಂಬಲ್ಲಿಗೆ ಆಟೋ ರಿಕ್ಷಾದಲ್ಲಿ ಬಾಡಿಗೆಗೆ ಬಂದು ಕೆಲಸ ಮುಗಿಸಿ, ರಿಕ್ಷಾದಲ್ಲಿ ಹೋಗುತ್ತಿರುವಾಗ ಉಕ್ಕುಡ ಎಂಬಲ್ಲಿ ಪ್ರವೀಣ್‌ ಗೌಡ ಹಾಗೂ ಇತರ ಇಬ್ಬರೂ ಆಟೋವನ್ನು ಅಡ್ಡಗಟ್ಟಿ ಈಶ್ವರರವರಿಗೆ ಮಾರಕಾಯುಧ ತೋರಿಸಿ, ಕೈಯಿಂದ ಹಲ್ಲೆ ನಡೆಸಿ, ಜಾತಿ ನಿಂದನೆ ಮಾಡಿ ಅವಾಚ್ಯ ಶಬ್ದಗಳಿಂದ ಬೈದು ರೂ 1450/- ನ್ನು ದರೋಡೆ ಮಾಡಿರುವುದಾಗಿ ನೀಡಿದ ದೂರಿನಂತೆ ಜ.23 ರಂದು ಬೆಳ್ತಂಗಡಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಸಂಸೆ ಗ್ರಾಮ ಅಂಚೆ ಕಳಸ ತಾಲೂಕು ಚಿಕ್ಕಮಗಳೂರು ನಿವಾಸಿ ಈಶ್ವರ (52) ಎಂಬವರ ದೂರಿನಂತೆ, ಜ.23 ರಂದು ರಾತ್ರಿ ಬೆಳ್ತಂಗಡಿ ತಾಲೂಕು ಗುತ್ಯಡ್ಕ ಎಂಬಲ್ಲಿಗೆ ಆಟೋ ರೀಕ್ಷಾದಲ್ಲಿ ಬಾಡಿಗೆಗೆ ಬಂದು ಕೆಲಸ ಮುಗಿಸಿ, ತನ್ನ ಬಾಬ್ತು ರೀಕ್ಷಾದಲ್ಲಿ ಹೋಗುತ್ತಿರುವಾಗ ಉಕ್ಕುಡ ಎಂಬಲ್ಲಿ ಪ್ರವೀಣ್‌ ಗೌಡ ಹಾಗೂ ಇತರ ಇಬ್ಬರೂ ಆಟೋವನ್ನು ಅಡ್ಡಗಟ್ಟಿ ಮಾರಕಾಯುಧ ತೋರಿಸಿ, ಕೈಯಿಂದ ಹಲ್ಲೆ ನಡೆಸಿದ್ದು, ಜಾತಿ ನಿಂದನೆ ಮಾಡಿ ಅವಾಚ್ಯ ಶಬ್ದಗಳಿಂದ ಬೈದು ರೂ 1450/- ನ್ನು ದರೋಡೆ ಮಾಡಿರುತ್ತಾರೆ ಹಾಗೂ ಪಿರ್ಯಾದಿರವರ ಬಳಿಯಿದ್ದ ಅಡುಗೆ ಸಾಮಾನುಗಳನ್ನು ಕದ್ದುಕೊಂಡು ಹೋಗಿರುತ್ತಾರೆ ಎಂಬುದಾಗಿ ನೀಡಿದ ದೂರಿನಂತೆ ಬೆಳ್ತಂಗಡಿ ಪೊಲೀಸ್ ಠಾಣಾ ಅಕ್ರ ನಂ 08/2024 ಕಲಂ: 341,323,504,392, 379,, ಐಪಿಸಿ ಕಲಂ: 3(1)(S) ,3(2)(va) SC/ST ACT 2015 ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸಲಾಗುತ್ತಿದೆ.

Related posts

ಬೆಳ್ತಂಗಡಿ : ಕಂದಾಯ ನಿರೀಕ್ಷಕರಾಗಿ ಮಲ್ಲೇಶ್ ಕರ್ತವ್ಯಕ್ಕೆ ಹಾಜರು

Suddi Udaya

ಬಳಂಜ ಶಾಲೆಯಲ್ಲಿ 89 ವರ್ಷದ ವೆಂಕಮ್ಮ ರವರಿಂದ ಮತದಾನ

Suddi Udaya

ಬೆಳ್ತಂಗಡಿ: ಯೋಜನೆಯ ಕಚೇರಿ ಸಹಾಯಕರ ಮೂರು ದಿನದ ಸಾಮರ್ಥ್ಯ ಅಭಿವೃದ್ಧಿ ತರಬೇತಿ ಕಾರ್ಯಾಗಾರ

Suddi Udaya

ನಡ ಗ್ರಾಮದ ಕೊಯ್ಯಗುಡ್ಡೆ ನಿವಾಸಿ ಜಯರಾಮ ಗೌಡ ನಿಧನ

Suddi Udaya

ಬೆಳ್ತಂಗಡಿ ವಿಧಾನ ಸಭಾ ಕ್ಷೇತ್ರದ ಮತ ಎಣಿಕೆ : 3781 ಮತಗಳ ಮೂಲಕ ಬಿಜೆಪಿ ಅಭ್ಯರ್ಥಿ ಹರೀಶ್ ಪೂಂಜ ಮುನ್ನಡೆ

Suddi Udaya

ಹಲ್ಲೆಗೊಳಗಾಗಿ ಆಸ್ಪತ್ರೆಯಲ್ಲಿ ದಾಖಲಾಗಿರುವ ಯೂಟ್ಯೂಬರ್‌ಗಳ ಆರೋಗ್ಯ ವಿಚಾರಿಸಿದ ಬೆಳ್ತಂಗಡಿ ಡಿ.ಎಸ್.ಎಸ್(ಅಂಬೇಡ್ಕರ್‌ವಾದ) ನಿಯೋಗ

Suddi Udaya
error: Content is protected !!