23.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಕೊಕ್ಕಡ: ಕಾವು ತ್ರಿಗುಣಾತ್ಮಿಕ ಶ್ರೀ ದುರ್ಗಾಪರಮೇಶ್ವರೀ ದೇವಸ್ಥಾನದಲ್ಲಿ “ಶ್ರೀ ಲಲಿತಾ ಸಹಸ್ರನಾಮ ಯಾಗ: ಧಾರ್ಮಿಕ ಸಭೆ, ಸನ್ಮಾನ

ಕೊಕ್ಕಡ: ಯುವ ಕೇಸರಿ, ಕಾವು ಇವರ ಆಶ್ರಯದೊಂದಿಗೆ ಮೋದಿ ಮತ್ತೊಮ್ಮೆ ಎಂಬ ಮಹಾ ಸಂಕಲ್ಪದೊಂದಿಗೆ, ವೇ.ಮೂ. ಕಶೆಕೋಡಿ ಸೂರ್ಯನಾರಾಯಣ ಭಟ್ ಇವರ ಪೌರೋಹಿತ್ಯದಲ್ಲಿ “ಶ್ರೀ ಲಲಿತಾ ಸಹಸ್ರನಾಮ ಯಾಗ”ವು ಜ.25 ರಂದು ಕಾವು ತ್ರಿಗುಣಾತ್ಮಿಕ ಶ್ರೀ ದುರ್ಗಾಪರಮೇಶ್ವರೀ ದೇವಸ್ಥಾನದಲ್ಲಿ ನಡೆಯಿತು.


ಬೆಳಿಗ್ಗೆ ಯಾಗ ಪ್ರಾರಂಭಗೊಂಡು, ಯಾಗ ಪೂರ್ಣಾಹುತಿ ನಂತರ ಧಾರ್ಮಿಕ ಸಭಾ ಕಾರ್ಯಕ್ರಮ ನಡೆಯಿತು.

ಶ್ರೀ ಕ್ಷೇತ್ರ ಸೌತಡ್ಕ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಹರೀಶ್ ರಾವ್ ಮುಂಡ್ರುಪ್ಪಾಡಿ ಅಧ್ಯಕ್ಷತೆ ವಹಿಸಿದರು.


ದಿಕ್ಸೂಚಿ ಭಾಷಣವನ್ನು ಬಾಲವಾಗ್ಮಿ ಕು| ಹಾರಿಕಾ ಮಂಜುನಾಥ್ ರವರು ನೆರವೇರಿಸಿದರು. ತ್ರಿಗುಣಾತ್ಮಿಕ ಶ್ರೀ ದುರ್ಗಾಪರಮೇಶ್ವರೀ ಆಡಳಿತ ಟ್ರಸ್ಟ್‌ನ ಅಧ್ಯಕ್ಷ ಕುಶಾಲಪ್ಪ ಗೌಡ ಪೂವಾಜೆ ಪ್ರಾಸ್ತಾವಿಕ ಮಾತುಗಳನ್ನಾಡಿದರು.

ಈ ಸಂದರ್ಭದಲ್ಲಿ ನಿವೃತ್ತ ಯೋಧರಾದ ಕೆ. ಮಹಾಬಲ ಮತ್ತು ಜಿ. ದೇವಪ್ಪ ಗೌಡ ಇವರಿಗೆ ಸನ್ಮಾನ ಕಾರ್ಯಕ್ರಮ ನಡೆಯಿತು. ಮಧ್ಯಾಹ್ನ ಮಹಾಪೂಜೆ, ಪ್ರಸಾದ ವಿತರಣೆ ನಂತರ ಅನ್ನಸಂತರ್ಪಣೆ ನಡೆಯಿತು.

ಕು. ಧಾತ್ರಿ ಗೋಖಲೆ ಪ್ರಾರ್ಥಿಸಿ, ಅರ್ಚಕ ಮಂಜುನಾಥ್ ಭಟ್ ಸ್ವಾಗತಿಸಿದರು. ವೃಶಾಂಕ್ ಖಾಡಿಲ್ಕರ್ ಅರಸಿನಮಕ್ಕಿ ಕಾರ್ಯಕ್ರಮ ನಿರೂಪಿಸಿ, ಡಾ| ಗಣೇಶ್ ಪ್ರಸಾದ್ ಕೊಕ್ಕಡ ಧನ್ಯವಾದವಿತ್ತರು. ಕಾರ್ಯಕ್ರಮದ ಯಶಸ್ವಿಗೆ ಯುವ ಕೇಸರಿ ಬಳಗ ಸಹಕರಿಸಿದರು.

Related posts

ಕುಪ್ಪೆಟ್ಟಿ ದ.ಕ.ಜಿ.ಪಂ. ಹಿರಿಯ ಪ್ರಾಥಮಿಕ ಶಾಲೆಗೆ ಸೌಂಡ್ ಸಿಸ್ಟಮ್ ಕೊಡುಗೆ

Suddi Udaya

ಉಜಿರೆ ಎಸ್‌ಡಿಎಂ ಆಂ.ಮಾ. ಶಾಲೆಯಲ್ಲಿ ಮಕ್ಕಳ ದಿನಾಚರಣೆ

Suddi Udaya

ಕನ್ನಡ ರಾಜ್ಯೋತ್ಸವದಲ್ಲಿ ಸಂಸ್ಕೃತಿ ಸುವಾಸನೆ ಚೆಲ್ಲಿದ “ಕಾಯೌ ಶ್ರೀಗೌರಿ” ಉಜಿರೆ ಎಸ್‌ಡಿಎಂ ಪ್ರಕೃತಿ ಚಿಕಿತ್ಸಾ ಮಹಾವಿದ್ಯಾಲಯದಲ್ಲಿ ಭವ್ಯ ಕಾರ್ಯಕ್ರಮ

Suddi Udaya

ಉಜಿರೆಯಲ್ಲಿ ಡಿ.ಡಿ ಮೆನ್ಸ್ & ವಿಮೆನ್ಸ್ ಸೆಂಟರ್ ಮಲ್ಟಿ‌ ಶೋರೂಮ್ ಅದ್ದೂರಿ ಉದ್ಘಾಟನೆ

Suddi Udaya

ಶಿಶಿಲ: ಉಮ್ಮಂತಿಮಾರು ಕಿಂಡಿ ಅಣೆಕಟ್ಟು ಹಾಗೂ ಕಾಲುವೆ ಅಭಿವೃದ್ಧಿ ಕಾಮಗಾರಿಗೆ ರೂ.2.50 ಕೋಟಿ ಅನುದಾನ ಮಂಜೂರು: ಶಾಸಕ ಹರೀಶ್ ಪೂಂಜ

Suddi Udaya

ವಾಲಿಬಾಲ್ ಪಂದ್ಯಾಟ: ಬೆಂದ್ರಾಳ ಸೈಂಟ್ ಸಾವಿಯೋ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿಗಳು ಪ್ರಥಮ

Suddi Udaya
error: Content is protected !!