25.5 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿ

ದೆಹಲಿಯ ಗಣರಾಜ್ಯೋತ್ಸವ: ಉಜಿರೆ ಎಸ್.ಡಿ.ಎಂ ಎನ್.ಸಿ.ಸಿಯ 3 ಕೆಡೆಟ್‌ಗಳ ಆಯ್ಕೆ

ಉಜಿರೆ: 75 ನೇ ಗಣರಾಜ್ಯೋತ್ಸವದ ಪ್ರಯುಕ್ತ ದೆಹಲಿಯಲ್ಲಿ ನಡೆಯಲಿರುವ ಗಣರಾಜ್ಯೋತ್ಸವ ಪಥ ಸಂಚಲನಕ್ಕೆ ಉಜಿರೆಯ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಪದವಿ ಕಾಲೇಜಿನ ಮೂರು ಎನ್‌ಸಿಸಿ ಕೆಡೆಟ್‌ಗಳು ಆಯ್ಕೆಯಾಗಿದ್ದಾರೆ.

ಗಣರಾಜ್ಯೋತ್ಸವದ ಪಥಸಂಚಲನ, ಗಾರ್ಡ್ ಆಫ್ ಹಾನರ್, ಪ್ರಧಾನ ಮಂತ್ರಿ ರ್ಯಾಲಿಯ ಉದ್ದೇಶಕ್ಕಾಗಿ ಆಯ್ಕೆಯಾಗಿರುವ ತಂಡಗಳಲ್ಲಿ ಕಾಲೇಜಿನ ಎನ್‌ಸಿಸಿ ಕೆಡೆಟ್‌ಗಳು ಪ್ರಾಶಸ್ಯ ಪಡೆದಿದ್ದು. ನೇವಲ್ ವಿಭಾಗದಿಂದ ಕೆಡೆಟ್ ತರುಣ್ ಎಸ್, ಆರ್ಮಿ ವಿಭಾಗದಿಂದ ಕೆಡೆಟ್ ಉದೀತ್ ಯು.ವಿ ಹಾಗು ಕೆಡೆಟ್ ರಾಧಿಕಾ ಸಿ . ಎಸ್ ಆಯ್ಕೆಯಾಗದ್ದಾರೆ.ಗಣರಾಜ್ಯೋತ್ಸವ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳುವ ಉದ್ದೇಶಕ್ಕಾಗಿ ಎನ್‌ಸಿಸಿ ಕೆಡೆಟ್‌ಗಳನ್ನು ಆಯ್ಕೆ ಮಾಡಲು ರಾಜ್ಯದ ವಿವಿಧ ಭಾಗಗಳ್ಲಲಿ ಕ್ಯಾಂಪ್‌ನಡೆಸಲಾಗಿತ್ತು. ತದನಂತರ ಬೆಂಗಳೂರಿನಲ್ಲಿ ಐಜಿಸಿ ಶಿಬಿರ ಮತ್ತು ಮೂರು ಪ್ರಿ ಆರ್ ಡಿಸಿ ಮತ್ತು ಕೊನೆಯಲ್ಲಿ ಕಿಟಿಂಗ್ ಕ್ಯಾಂಪ್ ಸೇರಿದಂತೆ ಒಟ್ಟು ಎಂಟು ಬಗೆಯು ಕಠಿಣ ಆಯ್ಕೆ ಪ್ರಕ್ರಿಯೆಯ ಶಿಬಿರಗಳನ್ನು ನಡೆಸಲಾಗಿತ್ತು. ಈ ಶಿಬಿರಗಳ ವಿವಿಧ ಹಂತಗಳಲ್ಲಿ ಯಶಸ್ವಿಯಾಗಿ ಕಾಲೇಜಿನ ಎನ್‌ಸಿಸಿ ವಿಭಾಗದ ಒಟ್ಟು 3 ಕೆಡೆಟ್‌ಗಳು ಆಯ್ಕೆಯಾಗಿದ್ದಾರೆ. ಪ್ರತಿ ವರ್ಷ ದೆಹಲಿಯಲ್ಲಿ ಆಯೋಜಿತವಾಗುವ ಗಣರಾಜ್ಯೋತ್ಸವದ ಪಥಸಂಚಲನ ಕಾರ್ಯಕ್ರಮಕ್ಕಾಗಿ ಕಾಲೇಜಿನ ಕೆಡೆಟ್‌ಗಳು ನಿಯೋಜಿತರಾಗಿರುವುದು ವಿಶೇಷ. ಈವರೆಗೆ ಕಾಲೇಜಿನ ನೆವಲ್ ಹಾಗು ಆರ್ಮಿ ವಿಭಾಗದಿಂದ ಒಟ್ಟು 50ಕ್ಕೂ ಹೆಚ್ಚು ಕೆಡೆಟ್ ಗಳು ಗಣರಾಜ್ಯೋತ್ಸವ ಪರೇಡ್ ನಲ್ಲಿ ಭಾಗವಹಿಸಿರುವುದು ವಿಶೇಷವಾಗಿದೆ.

ಎಸ್.ಡಿ.ಎಂ ಕಾಲೇಜಿನ ನೌಕಾ ವಿಭಾಗದ ಎನ್.ಸಿ.ಸಿ ಹಿರಿಯ ಅಧಿಕಾರಿ ಲೆಫ್ಟಿನೆಂಟ್ ಕಮಾಂಡರ್ ಡಾ. ಶ್ರೀಧರ್ ಭಟ್, ಕೇರ್ ಟೇಕರ್ ಹರೀಶ ಶೆಟ್ಟಿ , ಆರ್ಮಿ ಎನ್.ಸಿ.ಸಿ ಅಧಿಕಾರಿಗಳಾದ ಲೆಫ್ಟಿನೆಂಟ್ ಭಾನುಪ್ರಕಾಶ್ ಮತ್ತು ಲೆಫ್ಟಿನೆಂಟ್ ಶುಭಾ ರಾಣ ಹಾಗೂ ಹಿರಿಯ ಎನ್.ಸಿ.ಸಿ ಕೆಡೆಟ್‌ಗಳು ತರಬೇತಿ ನೀಡಿದ್ದರು.

Related posts

ಯಕ್ಷಧ್ರುವ ಪಟ್ಣ ಫೌಂಡೇಶನ್ ಬೆಳ್ತಂಗಡಿ ಘಟಕದ ನೇತೃತ್ವ ಡಿ.2: ಉಜಿರೆ ರಥಬೀದಿಯಲ್ಲಿ ” ಯಕ್ಷ ಸಂಭ್ರಮ-2023″

Suddi Udaya

ಬೆಳ್ತಂಗಡಿ ತಾಲೂಕು ಸಾರ್ವಜನಿಕ ಆಸ್ಪತ್ರೆ ಮತ್ತು ರಾಜ ಕೇಸರಿ ಸಂಘಟನೆ ವತಿಯಿಂದ ಬೆಳ್ತಂಗಡಿ ಆಸ್ಪತ್ರೆಯ ಹೊರಾಂಗಣದಲ್ಲಿ ಸ್ವಚ್ಛತಾ ಕಾರ್ಯಕ್ರಮ

Suddi Udaya

ರಾಜ್ಯದ ಅಡಿಕೆ ಲಾರಿಗಳು ಮಹಾರಾಷ್ಟ್ರದಲ್ಲಿ ಜಪ್ತಿ,ಕರಾವಳಿಯಲ್ಲಿ ಅಡಿಕೆ ಧಾರಣೆ ಕುಸಿತದ ಆತಂಕ

Suddi Udaya

ದ್ವಿತೀಯ ಪಿಯುಸಿ ಮರು ಮೌಲ್ಯಮಾಪನ: ವಿದ್ವತ್ ಪಿಯು ಕಾಲೇಜಿಗೆ ಮತ್ತೊಂದು ಗರಿ

Suddi Udaya

ಶಿರ್ಲಾಲು ನಲ್ಲಿ ಮೂಲ್ಯರ ಯಾನೆ ಕುಲಾಲರ ಸಂಘದಿಂದ ಕೆಸರುಡೊಂಜಿ ದಿನ

Suddi Udaya

ನ್ಯೂ ರೋಹಿಣಿ ಜ್ಯೂಸ್ ಸೆಂಟರ್ ಮಾಲಕ ಧನಂಜಯ ಹೃದಯಾಘಾತದಿಂದ ನಿಧನ: ಕೊಕ್ಕಡ ಆರೋಗ್ಯ ಕೇಂದ್ರದಲ್ಲಿ ಆಂಬುಲೆನ್ಸ್ ಇದ್ದರೂ ದೊರೆಯದ ಸೌಲಭ್ಯ: ಸಾರ್ವಜನಿಕರ ಆಕ್ರೋಶ

Suddi Udaya
error: Content is protected !!