23.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿ

ದೆಹಲಿಯ ಗಣರಾಜ್ಯೋತ್ಸವ: ಉಜಿರೆ ಎಸ್.ಡಿ.ಎಂ ಎನ್.ಸಿ.ಸಿಯ 3 ಕೆಡೆಟ್‌ಗಳ ಆಯ್ಕೆ

ಉಜಿರೆ: 75 ನೇ ಗಣರಾಜ್ಯೋತ್ಸವದ ಪ್ರಯುಕ್ತ ದೆಹಲಿಯಲ್ಲಿ ನಡೆಯಲಿರುವ ಗಣರಾಜ್ಯೋತ್ಸವ ಪಥ ಸಂಚಲನಕ್ಕೆ ಉಜಿರೆಯ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಪದವಿ ಕಾಲೇಜಿನ ಮೂರು ಎನ್‌ಸಿಸಿ ಕೆಡೆಟ್‌ಗಳು ಆಯ್ಕೆಯಾಗಿದ್ದಾರೆ.

ಗಣರಾಜ್ಯೋತ್ಸವದ ಪಥಸಂಚಲನ, ಗಾರ್ಡ್ ಆಫ್ ಹಾನರ್, ಪ್ರಧಾನ ಮಂತ್ರಿ ರ್ಯಾಲಿಯ ಉದ್ದೇಶಕ್ಕಾಗಿ ಆಯ್ಕೆಯಾಗಿರುವ ತಂಡಗಳಲ್ಲಿ ಕಾಲೇಜಿನ ಎನ್‌ಸಿಸಿ ಕೆಡೆಟ್‌ಗಳು ಪ್ರಾಶಸ್ಯ ಪಡೆದಿದ್ದು. ನೇವಲ್ ವಿಭಾಗದಿಂದ ಕೆಡೆಟ್ ತರುಣ್ ಎಸ್, ಆರ್ಮಿ ವಿಭಾಗದಿಂದ ಕೆಡೆಟ್ ಉದೀತ್ ಯು.ವಿ ಹಾಗು ಕೆಡೆಟ್ ರಾಧಿಕಾ ಸಿ . ಎಸ್ ಆಯ್ಕೆಯಾಗದ್ದಾರೆ.ಗಣರಾಜ್ಯೋತ್ಸವ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳುವ ಉದ್ದೇಶಕ್ಕಾಗಿ ಎನ್‌ಸಿಸಿ ಕೆಡೆಟ್‌ಗಳನ್ನು ಆಯ್ಕೆ ಮಾಡಲು ರಾಜ್ಯದ ವಿವಿಧ ಭಾಗಗಳ್ಲಲಿ ಕ್ಯಾಂಪ್‌ನಡೆಸಲಾಗಿತ್ತು. ತದನಂತರ ಬೆಂಗಳೂರಿನಲ್ಲಿ ಐಜಿಸಿ ಶಿಬಿರ ಮತ್ತು ಮೂರು ಪ್ರಿ ಆರ್ ಡಿಸಿ ಮತ್ತು ಕೊನೆಯಲ್ಲಿ ಕಿಟಿಂಗ್ ಕ್ಯಾಂಪ್ ಸೇರಿದಂತೆ ಒಟ್ಟು ಎಂಟು ಬಗೆಯು ಕಠಿಣ ಆಯ್ಕೆ ಪ್ರಕ್ರಿಯೆಯ ಶಿಬಿರಗಳನ್ನು ನಡೆಸಲಾಗಿತ್ತು. ಈ ಶಿಬಿರಗಳ ವಿವಿಧ ಹಂತಗಳಲ್ಲಿ ಯಶಸ್ವಿಯಾಗಿ ಕಾಲೇಜಿನ ಎನ್‌ಸಿಸಿ ವಿಭಾಗದ ಒಟ್ಟು 3 ಕೆಡೆಟ್‌ಗಳು ಆಯ್ಕೆಯಾಗಿದ್ದಾರೆ. ಪ್ರತಿ ವರ್ಷ ದೆಹಲಿಯಲ್ಲಿ ಆಯೋಜಿತವಾಗುವ ಗಣರಾಜ್ಯೋತ್ಸವದ ಪಥಸಂಚಲನ ಕಾರ್ಯಕ್ರಮಕ್ಕಾಗಿ ಕಾಲೇಜಿನ ಕೆಡೆಟ್‌ಗಳು ನಿಯೋಜಿತರಾಗಿರುವುದು ವಿಶೇಷ. ಈವರೆಗೆ ಕಾಲೇಜಿನ ನೆವಲ್ ಹಾಗು ಆರ್ಮಿ ವಿಭಾಗದಿಂದ ಒಟ್ಟು 50ಕ್ಕೂ ಹೆಚ್ಚು ಕೆಡೆಟ್ ಗಳು ಗಣರಾಜ್ಯೋತ್ಸವ ಪರೇಡ್ ನಲ್ಲಿ ಭಾಗವಹಿಸಿರುವುದು ವಿಶೇಷವಾಗಿದೆ.

ಎಸ್.ಡಿ.ಎಂ ಕಾಲೇಜಿನ ನೌಕಾ ವಿಭಾಗದ ಎನ್.ಸಿ.ಸಿ ಹಿರಿಯ ಅಧಿಕಾರಿ ಲೆಫ್ಟಿನೆಂಟ್ ಕಮಾಂಡರ್ ಡಾ. ಶ್ರೀಧರ್ ಭಟ್, ಕೇರ್ ಟೇಕರ್ ಹರೀಶ ಶೆಟ್ಟಿ , ಆರ್ಮಿ ಎನ್.ಸಿ.ಸಿ ಅಧಿಕಾರಿಗಳಾದ ಲೆಫ್ಟಿನೆಂಟ್ ಭಾನುಪ್ರಕಾಶ್ ಮತ್ತು ಲೆಫ್ಟಿನೆಂಟ್ ಶುಭಾ ರಾಣ ಹಾಗೂ ಹಿರಿಯ ಎನ್.ಸಿ.ಸಿ ಕೆಡೆಟ್‌ಗಳು ತರಬೇತಿ ನೀಡಿದ್ದರು.

Related posts

ನಡ: ಸಿಡಿಲು ಬಡಿದು 2 ವರ್ಷದ ಮಗು ಅಸ್ವಸ್ತ

Suddi Udaya

ಬೆಳ್ತಂಗಡಿ ಮುಳಿಯ ಜ್ಯುವೆಲ್ಸ್ ನಲ್ಲಿ ಜು. 24 ರಿಂದ ಮುಳಿಯ ಮಾನ್ಸೂನ್ ಧಮಾಕ: ಮುಂಗಾರಿನ ಸಂಭ್ರಮವನ್ನು ಇಮ್ಮಡಿಗೊಳಿಸಲು ಗ್ರಾಹಕರಿಗೆ ಆಕರ್ಷಕ ರಿಯಾಯಿತಿ: ಆ. 5 ಮುಳಿಯದಲ್ಲಿ ಆಟಿಡೊಂಜಿ ದಿನ ಕಾರ್ಯಕ್ರಮ,ಗ್ರಾಹಕರ ಸಮಾಗಮ,

Suddi Udaya

ಪೋಟೋವನ್ನು ಆಶ್ಲೀಲವಾಗಿ ಎಡಿಟ್ ಮಾಡಿ ಸಾಮಾಜಿಕ ಜಾಲತಾಣದಲ್ಲಿ ಹಾಕಿದ ಆರೋಪ: ಮಹಿಳೆಯಿಂದ ಪೊಲೀಸ್ ದೂರು: ಆರೋಪಿ ಮೇಲೆ ಪ್ರಕರಣ ದಾಖಲು

Suddi Udaya

ಆ.17: ಬೆಳ್ತಂಗಡಿ ಲಯನ್ಸ್‌ ಕ್ಲಬ್ ವತಿಯಿಂದ ಶ್ರೀ ಕೃಷ್ಣ ಜನ್ಮಾಷ್ಟಮಿ ಪ್ರಯುಕ್ತ ತಾಲೂಕು ಮಟ್ಟದ ಶಟಲ್ ಬ್ಯಾಡ್ಮಿಂಟನ್ ಪಂದ್ಯಾಟ

Suddi Udaya

ಪುಂಜಾಲಕಟ್ಟೆ ಕರ್ನಾಟಕ ಪಬ್ಲಿಕ್ ಸ್ಕೂಲ್, ಪದವಿ ಪೂರ್ವ ಹಾಗೂ ಪ್ರೌಢಶಾಲಾ ವಿಭಾಗದ ಜಂಟಿ ಆಶ್ರಯದಲ್ಲಿ ಸ್ವಾತಂತ್ರ್ಯೋತ್ಸವ ಆಚರಣೆ

Suddi Udaya

ಮದ್ದಡ್ಕ ಸಾರ್ವಜನಿಕ ಶ್ರೀ ಗಣೇಶೋತ್ಸವ ಸೇವಾ ಸಮಿತಿ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya
error: Content is protected !!