July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಧಾರ್ಮಿಕ

ನಾಳ ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದ ವಾರ್ಷಿಕ ಜಾತ್ರೆ: ದೇವರ ದರ್ಶನ ಬಲಿ, ಪಲ್ಲ ಪೂಜೆ

ಬೆಳ್ತಂಗಡಿ : ನಾಳ ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದಲ್ಲಿ ವಾರ್ಷಿಕ ಜಾತ್ರಾ ಮಹೋತ್ಸವ ಆರಂಭಗೊಂಡಿದ್ದು ಎರಡನೇ ದಿನವಾದ ಇಂದು (ಜ.25) ದೇವರಿಗೆ ದರ್ಶನ ಬಲಿ, ಪಲ್ಲ ಪೂಜೆ ಹಾಗೂ ಅನ್ನ ಸಂತರ್ಪಣೆ ನಡೆಯಿತು.

ದೇವಳದ ತಂತ್ರಿಗಳಾದ ಬ್ರಹ್ಮಶ್ರೀ ಬಾಲಕೃಷ್ಣ ಪಾಂಗಾಣ್ಣಾಯ ಮಾರ್ಗದರ್ಶನದಲ್ಲಿ ಹಾಗೂ ದೇವಸ್ಥಾನದ ಪ್ರಧಾನ ಅರ್ಚಕರಾದ ವೇ.ಮೂ. ರಾಘವೇಂದ್ರ ಅಸ್ರಣ್ಣರ ನೇತೃತ್ವದಲ್ಲಿ ಬೆಳಗ್ಗೆ ಉಷಾಕಾಲ ಪೂಜೆ, ಅಲಂಕಾರ ಪೂಜೆ, ಮಹಾಪೂಜೆ, ನಿತ್ಯ ಪೂಜೆ, ದೇವರ ಬಲಿ ನಡೆಯಿತು.

ದೇವಳದ ಟ್ರಸ್ಟಿ, ನಿವೃತ್ತ ಯೋಧ ದಿನೇಶ್ ಗೌಡ ಕಲಾಯಿತೊಟ್ಟು, ಪ್ರಸ್ತುತ ಸೇವೆಯಲ್ಲಿರುವ ಯೋಧರಾದ
ಬೇಬಿ ಗೌಡ ಪೇರಾಜೆ, ವಿಕ್ರಂ ಜೆ.ಎನ್. ವಂಜಾರೆ ಹಾಗೂ ಪ್ರಮೋದ್ ಗೌಡ ಬಾಕಿಮಾರು ಅವರ ಸೇವೆಯಾಗಿ ಅನ್ನದಾನ ನಡೆಯಿತು. ಈ ಸಂದರ್ಭ ಅನ್ನದಾನ ಸೇವಾರ್ಥಿಗಳ ಮನೆಯವರು ಉಪಸ್ಥಿತರಿದ್ದರು.

ಈ ಸಂದರ್ಭದಲ್ಲಿ ವ್ಯವಸ್ಥಾಪನ ಸಮಿತಿ ಅಧ್ಯಕ್ಷರು, ಸದಸ್ಯರು, ಅಭಿವೃದ್ಧಿ ಸಮಿತಿ ಅಧ್ಯಕ್ಷರು, ಪದಾಧಿಕಾರಿಗಳು, ಸದಸ್ಯರು, ಭಜನಾ ಮಂಡಳಿ ಅಧ್ಯಕ್ಷರು, ಪಸಾಧಿಕಾರಿಗಳು ಸದಸ್ಯರು, ಶ್ರೀ ದುರ್ಗಾ ಮಾತೃ ಮಂಡಳಿ ಅಧ್ಯಕ್ಷರು, ಪದಾಧಿಕಾರಿಗಳು, ಸದಸ್ಯರು, ದೇವಳದ ಸಿಬ್ಬಂದಿಗಳು, ಜಾತ್ರಾ ಮಹೋತ್ಸವದ ವಿವಿಧ ಸಮಿತಿ ಪದಾಧಿಕಾರಿಗಳು ಮತ್ತು ಭಕ್ತಾದಿಗಳು ಉಪಸ್ಥಿತರಿದ್ದರು.

ಇಂದು ಸಂಜೆ ದೇವರ ಬಲಿ ಹೊರಟು, ಕೆರೆಕಟ್ಟೆ ಉತ್ಸವ, ಮಹಾಪೂಜೆ, ನಿತ್ಯ ಬಲಿ, ದೀಪದ ಬಲಿ ಕಾರ್ಯಕ್ರಮ ಜರುಗಲಿದೆ.
ರಾತ್ರಿ ಧಾರ್ಮಿಕ ಸಭೆ, ನಾಳ ಅಂಗನವಾಡಿ ಕೇಂದ್ರ ಮತ್ತು ಸರಕಾರಿ ಹಿರಿಯ ಪ್ರಾಥಮಿಕ ಶಾಲಾ ವಿಧ್ಯಾರ್ಥಿಗಳಿಂದ ಸಾಂಸ್ಕೃತಿಕ ಕಾರ್ಯಕ್ರಮ ಹಾಗೂ ಕೇಸರಿ ಗೆಳೆಯರ ಬಳಗದ ಮೋಕೆದ ಕಲಾವಿದೆರ್ ತಂಡದ ಸದಸ್ಯರಿಂದ ತುಳು ಹಾಸ್ಯಮಯ ನಾಟಕ ಕಾಸ್ ದ ಕಸರತ್ತ್ ನಾಟಕ ನಡೆಯಲಿದೆ

Related posts

ಕಣಿಯೂರು ಗ್ರಾಮ ಪಂಚಾಯತ್‌ ಗ್ರಾಮ ಸಭೆ

Suddi Udaya

ಸೌಜನ್ಯಳಿಗೆ ನ್ಯಾಯ ಸಿಗಲೆಂದು ವಿಶ್ವ ಹಿಂದೂ ಪರಿಷತ್ ಬಜರಂಗದಳ ಹಾಗೂ ಶಾಸಕ ಹರೀಶ್ ಪೂಂಜರಿಂದ ಕುತ್ಯಾರು ದೇವಸ್ಥಾನದಲ್ಲಿ ವಿಶೇಷ ಪ್ರಾರ್ಥನೆ

Suddi Udaya

ರಾಷ್ಟ್ರಮಟ್ಟದ ಉರ್ದು ಭಾಷಣ ಸ್ಪರ್ಧೆ: ಸ್ಟಾರ್ ಲೈನ್ ಆಂ.ಮಾ. ಶಾಲೆಯ ವಿದ್ಯಾರ್ಥಿ ಸೈಯ್ಯದ್ ಮಹಮ್ಮದ್ ಉವೈಸ್ ಪ್ರಥಮ ಸ್ಥಾನ

Suddi Udaya

ಮದ್ದಡ್ಕ: ಚಾಲಕನ ನಿಯಂತ್ರಣ ತಪ್ಪಿ ಡಿವೈಡರ್ ಡಿಕ್ಕಿ ಹೊಡೆದ ಕಾರು

Suddi Udaya

ವಲಯ ಮಟ್ಟದ ಖೋ ಖೋ ಪಂದ್ಯಾಟ: ಶಿರ್ಲಾಲು ಸ.ಉ.ಹಿ.ಪ್ರಾ. ಶಾಲೆಯ ವಿದ್ಯಾರ್ಥಿಗಳು ತಾಲೂಕು ಮಟ್ಟಕ್ಕೆ ಆಯ್ಕೆ

Suddi Udaya

ಕುಕ್ಕೇಡಿ: ಶ್ರೀಮತಿ ಲಲಿತಾ ನಿಧನ

Suddi Udaya
error: Content is protected !!