September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಬೆಳ್ತಂಗಡಿ : ಇನ್ಸ್ಪೆಕ್ಟರ್ ಗಂಗ್ಗಿರೆಡ್ಡಿಯನ್ನು ಸುಳ್ಳು ಪ್ರಕರಣದಲ್ಲಿ ಟ್ರ್ಯಾಪ್ ಮಾಡಿಸಿದ್ದ ದೂರುದಾರ ಹಾಗೂ ಚೆಕ್ ಬೌನ್ಸ್ ಪ್ರಕರಣದಲ್ಲಿ ತಲೆಮರೆಸಿಕೊಂಡಿದ್ದ ಆರೋಪಿಯನ್ನು ಬಂಧಿಸಿದ ಬೆಳ್ತಂಗಡಿ ಪೊಲೀಸರು

ಬೆಳ್ತಂಗಡಿ : ಬೆಳ್ತಂಗಡಿ ಸರ್ಕಲ್‌‌‌ ಇನ್ಸ್ಪೆಕ್ಟರ್ ಅಗಿದ್ದ ಗಂಗ್ಗಿರೆಡ್ಡಿಯನ್ನು ಲಂಚ ಪಡೆದ ಸುಳ್ಳು ಆರೋಪದಲ್ಲಿ ಲೋಕಾಯಕ್ತ ಪೊಲೀಸರಿಗೆ ಟ್ರ್ಯಾಪ್ ಮಾಡಿಸಿದ ದೂರುದಾರ ಇದೀಗ ಚೆಕ್ ಬೌನ್ಸ್ ಪ್ರಕರಣದಲ್ಲಿ ತಲೆಮರೆಸಿಕೊಂಡಿದ್ದ ಆರೋಪಿಯನ್ನು ಬೆಳ್ತಂಗಡಿ ಪೊಲೀಸರು ಬಂಧಿಸಿ ಜೈಲಿಗಟ್ಟಿದ್ದಾರೆ.

ಚೆಕ್ ಬೌನ್ಸ್ ಪ್ರಕರಣ: ಬೆಳ್ತಂಗಡಿ ನ್ಯಾಯಲಯದ ಸಿ.ಸಿ ನಂಬ್ರ 118/2021 ಕಲಂ.138 NI Act (ಚೆಕ್ ಬೌನ್ಸ್) ಪ್ರಕರಣದಲ್ಲಿ ವಾರಂಟು ಆರೋಪಿ ಶ್ರೀನಿವಾಸ್ ಪ್ರಸಾದ್(50) ಎಂಬಾತನನ್ನು ಜ.24 ರಂದು ಬೆಳ್ತಂಗಡಿ ಪೊಲೀಸ್ ಠಾಣೆಯ ಸಬ್ ಇನ್ಸ್ಪೆಕ್ಟರ್ ಮುರುಳಿಧರ್ ನಾಯ್ಕ್ ನೇತೃತ್ವದಲ್ಲಿ ಸಿಬ್ಬಂದಿ ವ್ರಷಭ ಮತ್ತು ಬಸವರಾಜ್ ರವರು ಬೆಳ್ತಂಗಡಿ ತಾಲೂಕಿನ ಇಂದಬೆಟ್ಟುನಿಂದ ವಶಕ್ಕೆ ಪಡೆದು ಮಾನ್ಯ ಬೆಳ್ತಂಗಡಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದು ಆರೋಪಿಗೆ ಬೆಳ್ತಂಗಡಿ ನ್ಯಾಯಾಂಗ ಬಂಧನ ವಿಧಿಸಲಾಗಿದೆ.

ಟ್ಯಾಪ್ ಪ್ರಕರಣ: ಬೆಳ್ತಂಗಡಿ ಸರ್ಕಲ್ ಇನ್ಸ್ಪೆಕ್ಟರ್ ಅಗಿದ್ದ ಗಂಗ್ಗಿರೆಡ್ಡಿ ಅವರನ್ನು ಸುಳ್ಳು ಪ್ರಕರಣದಲ್ಲಿ ಲೋಕಾಯುಕ್ತ ಪೊಲೀಸರಿಗೆ ದೂರು ನೀಡಿ ಟ್ರ್ಯಾಪ್ ಮಾಡಿಸಿದ್ದ ದೂರುದಾರ ಶ್ರೀನಿವಾಸ್ ಪ್ರಸಾದ್. ಮಂಗಳೂರು ನ್ಯಾಯಾಲಯ ಇನ್ಸ್ಪೆಕ್ಟರ್ ಅವರ ಆರೋಪ ಸಾಭಿತಾಗಿ ಶಿಕ್ಷೆ ಹಾಗೂ ದಂಡ ವಿಧಿಸಿದ್ದರು. ನಂತರ 2022 ರಲ್ಲಿ ಹೈಕೋರ್ಟ್ ನಲ್ಲಿ ಇನ್ಸ್ಪೆಕ್ಟರ್ ಗಂಗ್ಗಿರೆಡ್ಡಿ ಅವರ ಆರೋಪ ಪ್ರಕರಣ ಸುಳ್ಳು ಎಂದು ರದ್ದಾಗಿತ್ತು. ಇದೀಗ ಇನ್ಸ್ಪೆಕ್ಟರ್ ಗಂಗ್ಗಿರೆಡ್ಡಿ ಗುಪ್ತಚರ ಇಲಾಖೆಯಿಂದ ಕರ್ತವ್ಯದಿಂದ ನಿವೃತ್ತ ರಾಗಿದ್ದಾರೆ.

Related posts

ಬೆಳ್ತಂಗಡಿಗೆ ಎರಡು ನ್ಯಾಯಾಧೀಶರನ್ನು ನೇಮಕಗೊಳಿಸಿ ಹೈಕೋರ್ಟ್ ಆದೇಶ

Suddi Udaya

ರೇಣುಕಾ ಪ್ರಸಾದ್ ರವರಿಂದ ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವರ ಸನ್ನಿಧಾನಕ್ಕೆ ಬೆಳ್ಳಿ ರಥ ಸಮರ್ಪಣೆ: ಬೆಳ್ತಂಗಡಿ ತಾಲೂಕು ಗೌಡರ ಯಾನೆ ಒಕ್ಕಲಿಗರ ಸೇವಾ ಸಂಘದಿಂದ ಗೌರವಾರ್ಪಣೆ

Suddi Udaya

ಉಜಿರೆಯಿಂದ ಬೆಳಾಲು ಕೊಯ್ಯೂರು ಕೆಎಸ್ಆರ್ ಟಿ. ಸಿ ಬಸ್ ಸಂಚಾರ ಉದ್ಘಾಟನೆ

Suddi Udaya

ಉಜಿರೆ:ಅನಾಥ ಶವವನ್ನು ಪೊಲೀಸರಿಗೆ ಒಪ್ಪಿಸಿದ ಸ್ವಯಂಸೇವಕರು

Suddi Udaya

ಶಿರ್ಲಾಲು: ಬಿಲ್ಲವ ಸಂಘದ ಮಾಜಿ ಅಧ್ಯಕ್ಷ ಅಶೋಧರ ಸಾಲಿಯಾನ್ ನಿಧನ

Suddi Udaya

ಮೇ.3 : ಪುಂಜಾಲಕಟ್ಟೆಯಲ್ಲಿ ಹೆಸರಾಂತ ಬಿ.ಪುಂಡಲೀಕ ಬಾಳಿಗಾ & ಸನ್ಸ್ ಜ್ಯುವೆಲ್ಲರ್‍ಸ್ ವಿಸ್ತೃತ ನೂತನ ಮಳಿಗೆಯ ಶುಭಾರಂಭ

Suddi Udaya
error: Content is protected !!