September 6, 2026
ತಾಲೂಕು ಸುದ್ದಿ

ಮದಡ್ಕದಲ್ಲಿ ಸರಕಾರಿ ಜಾಗದಲ್ಲಿ ಅಕ್ರಮವಾಗಿ ನಿರ್ಮಾಣ ಮಾಡಿದ್ದ ಶೆಡ್:ಬೆಳ್ತಂಗಡಿ ತಹಶೀಲ್ದಾ‌ರ್ ಪೃಥ್ವಿ ಸಾನಿಕಂ ನೇತೃತ್ವದ ತಂಡದಿಂದ ನೆಲಸಮ

ಬೆಳ್ತಂಗಡಿ : ಮದಡ್ಕದಲ್ಲಿ ಸರಕಾರಿ ಜಾಗದಲ್ಲಿ ಅಕ್ರಮವಾಗಿ ನಿರ್ಮಾಣ ಮಾಡಿದ್ದ ಶೆಡ್ ನ್ನು ಜೆಸಿಬಿ ಮೂಲಕ ಬೆಳ್ತಂಗಡಿ ತಹಶೀಲ್ದಾ‌ರ್ ಪೃಥ್ವಿ ಸಾನಿಕಂ ನೇತೃತ್ವದ ತಂಡ ನೆಲಸಮಗೊಳಿಸಿದ್ದಾರೆ.

ಪ್ರಕರಣದ ವಿವರ:ಬೆಳ್ತಂಗಡಿ ತಾಲೂಕಿನ ಕುವೆಟ್ಟು ಗ್ರಾಮದ ಮದಡ್ಕ ಹಾಲಿನ ಡೈರಿ ಹಿಂಭಾಗದ ಸರ್ವೆ ನಂಬರ್ 149/3A ನಲ್ಲಿ 11 ಸೆನ್ಸ್ ಖಾಲಿ ಜಾಗದಲ್ಲಿ ಅಬುಸಾಲಿ ಮಕ್ಕಳಾದ ರೌಫ್ ಮತ್ತು ನಿಸರ್ ಸಹೋದರರು ಅಕ್ರಮವಾಗಿ ಶೆಡ್ ನಿರ್ಮಾಣ ಮಾಡಿದ್ದರು. ಈ ಬಗ್ಗೆ ಬೆಳ್ತಂಗಡಿ ಕಂದಾಯ ಇಲಾಖೆಗೆ ದೂರು ಬಂದಿತ್ತು. ಅದರಂತೆ ಬೆಳ್ತಂಗಡಿ ತಹಶೀಲ್ದಾರ್ ಪೃಥ್ವಿ ಸಾನಿಕಂ ಮತ್ತು ಕಂದಾಯ ಇಲಾಖೆಯ ಸಿಬ್ಬಂದಿ ಜ.18 ಕ್ಕೆ ಜಾಗದ

ಪರಿಶೀಲನೆಗೆ ತೆರಳಿದ್ದರು. ಈ ವೇಳೆ ರೌಫ್ ಮತ್ತು ನಿಸರ್ ತಹಶೀಲ್ದಾ‌ರ್ ಮೇಲೆ ಹಲ್ಲೆಗೆ ಯತ್ನಿಸಿದ್ದರು.ಬಳಿಕ ಕಂದಾಯ ನಿರೀಕ್ಷಕರಿಗೂ ಬೆದರಿಕೆ ಹಾಕಿ ಕರ್ತವ್ಯಕ್ಕೆ ಅಡ್ಡಿ ಪಡಿಸಿದ್ದರು. ಈ ಬಗ್ಗೆ ತಹಶೀಲ್ದಾ‌ರ್ ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ಜ.19 ರಂದು ದೂರು ದಾಖಲಿಸಿದ್ದರು.

ಬೆಳ್ತಂಗಡಿ ತಹಶೀಲ್ದಾರ್ ಪೃಥ್ವಿ ಸಾನಿಕಂ ನೇತೃತ್ವದ ಕಂದಾಯ ಇಲಾಖೆಯ ಸಿಬ್ಬಂದಿ ಜ.25 ರಂದು ಸಂಜೆ (ಇಂದು) ಜೆಸಿಬಿ ಬಳಸಿ ಅಕ್ರಮ ಶೆಡ್ ನೆಲಸಮ ಮಾಡಲಾಯಿತು. ಈ ವೇಳೆ ಅಹಿತಕರ ಘಟನೆ ನಡೆಯದಂತೆ ಬೆಳ್ತಂಗಡಿ ಪೊಲೀಸರು ಭದ್ರತೆ ವಹಿಸಿದ್ದರು.

Related posts

ಕರ್ನಾಟಕ ರಾಜ್ಯದ ವೃತ್ತಿಪರ ಸಿವಿಲ್ ಇಂಜಿನಿಯರುಗಳ ಪರಿಷತ್ತಿನ ಚೊಚ್ಚಲ ಸಮಿತಿಗೆ ಜಗದೀಶ ಪ್ರಸಾದ್ ಆಯ್ಕೆ

Suddi Udaya

ಕೊಕ್ಕಡದಲ್ಲಿ ಎನ್ ಎಸ್ ಎಸ್ ಶಿಬಿರ ಸಮಾರೋಪ

Suddi Udaya

ಎಸ್.ಡಿ.ಎಂ ಕಾಲೇಜಿನಲ್ಲಿ “ಎಸ್.ಡಿ.ಎಂ ನೆನಪಿನಂಗಳ” ಕಾರ್ಯಕ್ರಮ

Suddi Udaya

ಮೊಗ್ರು : ಬುಳೇರಿ ಮೊಗ್ರು ಪ್ರೌಢಶಾಲೆಯಲ್ಲಿ ನೀರಿನ ಸಮಸ್ಯೆ – ಶಾಸಕ ಹರೀಶ್ ಪೂಂಜಾ ರಿಂದ ತಕ್ಷಣ ಸ್ಪಂದನೆ, ಬೋರ್‌ವೆಲ್ ಸೌಲಭ್ಯ

Suddi Udaya

ಕುವೆಟ್ಟು: ಅಪಘಾತವಾಗಿದ್ದ ವಿಠಲ ಶೆಟ್ಟಿರವರು ಚಿಕಿತ್ಸೆ ಫಲಕಾರಿಯಾಗದೆ ಸಾವು

Suddi Udaya

ಬಿ.ಜೆ.ಪಿ ಅಭ್ಯರ್ಥಿ ಭಾರೀ ಮುನ್ನಡೆಯಿಂದ ಗೆಲುವಿನ ಜಯಭೇರಿ ಭಾರಿಸಲಿದ್ದಾರೆ, ಬಿಜೆಪಿ 400ರ ಗಡಿ ದಾಟಲಿದೆ-ಪ್ರಭಾಕರ ಬಂಗೇರ ಪತ್ರಿಕಾಗೋಷ್ಠಿ

Suddi Udaya
error: Content is protected !!