July 23, 2026
Uncategorizedಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಮಲವಂತಿಗೆ: ಉಮೇಶ್ ರವರಿಗೆ ಹಲ್ಲೆ, ಬೆದರಿಕೆ: ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು

ಬೆಳ್ತಂಗಡಿ: ಮಲವಂತಿಗೆ ನಿವಾಸಿ ಉಮೇಶ್‌ ರವರು ರಾತ್ರಿ ಮೋಟಾರ್ ಸೈಕಲ್ ನಲ್ಲಿ ಮನೆಗೆ ಹೋಗುವ ಸಂದರ್ಭ ಉಕ್ಕುಡ ಎಂಬಲ್ಲಿ ಗುಂಪೊಂದು ಹಲ್ಲೆ ನಡೆಸಿ, ಬೆದರಿಕೆ ಹಾಕಿದ ಘಟನೆ ಜ.23 ರಂದು ನಡೆದಿದೆ.

ಮಲವಂತಿಗೆ ನಿವಾಸಿ ಉಮೇಶ್‌ (35) ಎಂಬವರ ದೂರಿನಂತೆ, ಜ. 23 ರಂದು ರಾತ್ರಿ ಉಮೇಶ್ ರವರು ಬಾಬ್ತು ಮೋಟಾರ್‌ ಸೈಕಲ್‌ ನಲ್ಲಿ ಮನೆಗೆ ಹೋಗುತ್ತಾ ಉಕ್ಕುಡ ಎಂಬಲ್ಲಿಗೆ ತಲುಪಿದಾಗ, ಆರೋಪಿಗಳಾದ ರಮೇಶ್‌ ನಾಯ್ಕ, ದಯಾನಂದ, ರವಿ,ಸುರೇಶ, ಸಂತೋಷ್‌, ಪ್ರವೀಣ್‌ ಕುಮಾರ್‌ , ಅರುಣ್‌ , ಆದಿ ಜೈನ್‌, ಅನಿಲ್‌ ಜೈನ್‌, ಸಾವಂತ್‌ ,ಸುನೀಲ್‌,ಪ್ರಕಾಶ್‌ ಕುಮಾರ್‌, ಮತ್ತು ಯೂಸುಫ್‌ ರವರು ಉಮೇಶ್ ರವರನ್ನು ತಡೆದು ನಿಲ್ಲಿಸಿ, ಆರೋಪಿಗಳ ಪೈಕಿ ರಮೇಶ್‌ ನಾಯ್ಕ ರವರ ಮನೆಯ ಅಂಗಳಕ್ಕೆ ಎಳೆದುಕೊಂಡು ಹೋಗಿದ್ದು, ಅವಾಚ್ಯ ಶಬ್ದಗಳಿಂದ ಬೈದು ಅವಮಾನ ಪಡಿಸಿರುತ್ತಾರೆ.

ಆರೋಪಿಗಳ ಪೈಕಿ ರಮೇಶ್‌ ನಾಯ್ಕ , ದಯಾನಂದ, ರವಿ ಮತ್ತು ಸುರೇಶ್‌ ರವರು ಪಿರ್ಯಾದಿದಾರರಿಗೆ ಹಲ್ಲೆ ನಡೆಸಿ, ಮೆಣಸಿನ ಹುಡಿ ಎರಚಿದ್ದು, ಬಳಿಕ‌ ಆರೋಪಿಗಳು ಜೀವ ಬೆದರಿಕೆ ಹಾಕಿ ಹೊರಟು ಹೋಗಿರುತ್ತಾರೆ ಎಂಬುದಾಗಿ ನೀಡಿದ ದೂರಿನಂತೆ ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ಅಕ್ರ. ನಂ: 06/2024 ಕಲಂ: 143,147,148,341,324,504,506, ಜೊತೆಗೆ 149 ಐಪಿಸಿ ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸಲಾಗುತ್ತಿದೆ.

Related posts

ಮಡಂತ್ಯಾರಿನಲ್ಲಿ ಕ್ಲಾಸಿಕ್ ಮೆನ್ಸ್ ವೇರ್ ಶುಭಾರಂಭ

Suddi Udaya

ಸೌತಡ್ಕ ಮಹಾಗಣಪತಿ ಕ್ಷೇತ್ರಕ್ಕೆ ಕೃಷಿ ಸಚಿವ ಚೆಲುವರಾಯಸ್ವಾಮಿ ಭೇಟಿ : ವಿಶೇಷ ಪೂಜೆ ಸಲ್ಲಿಸಿದ ಸಚಿವ ದಂಪತಿ

Suddi Udaya

ಕಲ್ಮಂಜ: ಅಲೆಕ್ಕಿ ನಿವಾಸಿ ಗೀತಾ ನಿಧನ

Suddi Udaya

ಆಳ್ವಾಸ್ ಆಯುರ್ವೇದ ವೈದ್ಯಕೀಯ ಕಾಲೇಜಿನಲ್ಲಿ ‘ಸಂಪನ್ನಮ್–2026’ ಬೀಳ್ಕೊಡುಗೆ ಸಮಾರಂಭ

Suddi Udaya

ಲಯನ್ಸ್ ಕ್ಲಬ್ ವತಿಯಿಂದ ಸವಣಾಲು ಶಾಲಾ ವಿದ್ಯಾರ್ಥಿಗಳಿಗೆ ಉಚಿತ ನೋಟ್ ಪುಸ್ತಕ ವಿತರಣೆ

Suddi Udaya

ಕೊಲ್ಲಿ: ಸೂರ್ಯ – ಚಂದ್ರ ಜೋಡುಕರೆ ಕಂಬಳ ಸಮಿತಿಗೆ ಡಾ. ಹೆಗ್ಗಡೆಯವರು ಮಂಜೂರು ಮಾಡಿದ 2 ಲಕ್ಷದ ಚೆಕ್ ಹಸ್ತಾಂತರ

Suddi Udaya
error: Content is protected !!