September 6, 2026
Uncategorizedಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಮಲವಂತಿಗೆ: ಉಮೇಶ್ ರವರಿಗೆ ಹಲ್ಲೆ, ಬೆದರಿಕೆ: ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು

ಬೆಳ್ತಂಗಡಿ: ಮಲವಂತಿಗೆ ನಿವಾಸಿ ಉಮೇಶ್‌ ರವರು ರಾತ್ರಿ ಮೋಟಾರ್ ಸೈಕಲ್ ನಲ್ಲಿ ಮನೆಗೆ ಹೋಗುವ ಸಂದರ್ಭ ಉಕ್ಕುಡ ಎಂಬಲ್ಲಿ ಗುಂಪೊಂದು ಹಲ್ಲೆ ನಡೆಸಿ, ಬೆದರಿಕೆ ಹಾಕಿದ ಘಟನೆ ಜ.23 ರಂದು ನಡೆದಿದೆ.

ಮಲವಂತಿಗೆ ನಿವಾಸಿ ಉಮೇಶ್‌ (35) ಎಂಬವರ ದೂರಿನಂತೆ, ಜ. 23 ರಂದು ರಾತ್ರಿ ಉಮೇಶ್ ರವರು ಬಾಬ್ತು ಮೋಟಾರ್‌ ಸೈಕಲ್‌ ನಲ್ಲಿ ಮನೆಗೆ ಹೋಗುತ್ತಾ ಉಕ್ಕುಡ ಎಂಬಲ್ಲಿಗೆ ತಲುಪಿದಾಗ, ಆರೋಪಿಗಳಾದ ರಮೇಶ್‌ ನಾಯ್ಕ, ದಯಾನಂದ, ರವಿ,ಸುರೇಶ, ಸಂತೋಷ್‌, ಪ್ರವೀಣ್‌ ಕುಮಾರ್‌ , ಅರುಣ್‌ , ಆದಿ ಜೈನ್‌, ಅನಿಲ್‌ ಜೈನ್‌, ಸಾವಂತ್‌ ,ಸುನೀಲ್‌,ಪ್ರಕಾಶ್‌ ಕುಮಾರ್‌, ಮತ್ತು ಯೂಸುಫ್‌ ರವರು ಉಮೇಶ್ ರವರನ್ನು ತಡೆದು ನಿಲ್ಲಿಸಿ, ಆರೋಪಿಗಳ ಪೈಕಿ ರಮೇಶ್‌ ನಾಯ್ಕ ರವರ ಮನೆಯ ಅಂಗಳಕ್ಕೆ ಎಳೆದುಕೊಂಡು ಹೋಗಿದ್ದು, ಅವಾಚ್ಯ ಶಬ್ದಗಳಿಂದ ಬೈದು ಅವಮಾನ ಪಡಿಸಿರುತ್ತಾರೆ.

ಆರೋಪಿಗಳ ಪೈಕಿ ರಮೇಶ್‌ ನಾಯ್ಕ , ದಯಾನಂದ, ರವಿ ಮತ್ತು ಸುರೇಶ್‌ ರವರು ಪಿರ್ಯಾದಿದಾರರಿಗೆ ಹಲ್ಲೆ ನಡೆಸಿ, ಮೆಣಸಿನ ಹುಡಿ ಎರಚಿದ್ದು, ಬಳಿಕ‌ ಆರೋಪಿಗಳು ಜೀವ ಬೆದರಿಕೆ ಹಾಕಿ ಹೊರಟು ಹೋಗಿರುತ್ತಾರೆ ಎಂಬುದಾಗಿ ನೀಡಿದ ದೂರಿನಂತೆ ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ಅಕ್ರ. ನಂ: 06/2024 ಕಲಂ: 143,147,148,341,324,504,506, ಜೊತೆಗೆ 149 ಐಪಿಸಿ ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸಲಾಗುತ್ತಿದೆ.

Related posts

ಕೊಯ್ಯೂರು ಸ.ಹಿ.ಪ್ರಾ. ಶಾಲೆಯ ಹಳೆ ವಿದ್ಯಾರ್ಥಿ ಸಂಘ ರಚನೆ

Suddi Udaya

ಮುಂಡ್ರುಪಾಡಿ ವಸಂತಿರವರ ಮನೆಯ ಮೇಲೆ ಬಿದ್ದ ಮರ: ಧರ್ಮಸ್ಥಳ ಘಟಕದ ಶೌರ್ಯ ವಿಪತ್ತು ನಿರ್ವಹಣಾ ತಂಡದಿಂದ ತೆರವು ಕಾರ್ಯ

Suddi Udaya

ಕ್ಯಾನ್ಸರ್ ಪೀಡಿತರಿಗೆ ಕೇಶದಾನಗೈದು ಮಾದರಿಯಾದ ಶಿರ್ಲಾಲುವಿನ ರಾಜಶ್ರೀ ಜಗದೀಶ್

Suddi Udaya

ರಸ್ತೆಯಲ್ಲೇ ಹರಿದ ಮಳೆ ನೀರು: ಶಾಸಕ ಹರೀಶ್ ಪೂಂಜರಿಂದ ತುರ್ತು ಸ್ಪಂದನೆ , ಚರಂಡಿ ದುರಸ್ತಿ

Suddi Udaya

ನಾಲ್ಕೂರು: ಗಾಳಿ ಮಳೆಗೆ ಬಾಕ್ಯರಡ್ಡದಲ್ಲಿ ಹಟ್ಟಿ ಕುಸಿತ

Suddi Udaya

ಲಾಯಿಲದ ಯುವಕ ನೇಣುಬಿಗಿದು ಆತ್ಮಹತ್ಯೆಗೆ ಶರಣು

Suddi Udaya
error: Content is protected !!