July 23, 2026
ಗ್ರಾಮಾಂತರ ಸುದ್ದಿತಾಲೂಕು ಸುದ್ದಿ

ಮಹಿಳೆಯೊಂದಿಗೆ ಅನುಚಿತ ವರ್ತನೆ ಹಾಗೂ ಹಲ್ಲೆ ಆರೋಪ: ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು

ಬೆಳ್ತಂಗಡಿ: ಮಹಿಳೆಯೊಂದಿಗೆ ಅನುಚಿತ ವರ್ತನೆ ಹಾಗೂ ಹಲ್ಲೆ ಆರೋಪ ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ಜ.23 ರಂದು ಪ್ರಕರಣ ದಾಖಲಾಗಿದೆ.

ಸಂತ್ರಸ್ಥ ಮಹಿಳೆಯ ದೂರಿನಂತೆ, ಜ.23 ರಂದು ರಾತ್ರಿ, ಬೆಳ್ತಂಗಡಿ ಠಾಣಾ ವ್ಯಾಪ್ತಿಯಲ್ಲಿರುವ ಮಹಿಳೆಯ ಪತಿ ಮನೆಯಲ್ಲಿದ್ದಾಗ, ಆರೋಪಿ ಉಮೇಶ ಗೌಡರವರು ಮನೆಯೊಳಗಡೆ ಮಹಿಳೆಯೊಂದಿಗೆ ಅನುಚಿತವಾಗಿ ವರ್ತಿಸಿದ್ದು, ಈ ವೇಳೆ ತಡೆದ ಮಹಿಳೆಯ ಪತಿ, ಉಮೇಶ ಗೌಡ ಈತನ ಕಡೆಯವರಾದ ಹೋಮ್ ಸ್ಟೇ ಮಹೇಶ್, ರತೀಶ, ಅಶೋಕ, ಗಣೇಶ, ರವಿ, ಲೋಕಪ್ಪ ಗೌಡ ಮತ್ತು ಶಾಂತಪ್ಪ ಗೌಡ ಎಂಬವರುಗಳು ಹಲ್ಲೆ ನಡೆಸಿರುತ್ತಾರೆ. ಬಳಿಕ ಅವಾಚ್ಯ ಶಬ್ಧಗಳಿಂದ ಬೈದು, ಅವಮಾನಪಡಿಸಿ, ಕೊಲೆ ಬೆದರಿಕೆ ಹಾಕಿ ಹೊರಟು ಹೋಗಿರುತ್ತಾರೆ ಎಂಬುದಾಗಿ ನೀಡಿದ ದೂರಿನ ಮೇರೆಗೆ,‌ ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ಅಕ್ರ ನಂ 07/2024 ಕಲಂ: 143,147,148,447,354(ಎ),323, 504,506, ಜೊತೆಗೆ 149 ಐಪಿಸಿ ಕಲಂ: 3(2)(v)(a),3(1)(w)(1) SC/ST ACT 2015 ರಂತೆ ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸಲಾಗುತ್ತಿದೆ.

Related posts

ಲೋಕೋಪಯೋಗಿ ಇಲಾಖೆಯಿಂದ ಅಳವಡಿಸಿದ ಬ್ಯಾನರ್‌ನಲ್ಲಿ ಎಡವಟ್ಟು

Suddi Udaya

10 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿಯನ್ನು ಬಂಧಿಸಿದ ಬೆಳ್ತಂಗಡಿ ಪೊಲೀಸರು

Suddi Udaya

ಬೆಳ್ತಂಗಡಿ:ರಸ್ತೆ ಅಪಘಾತದಲ್ಲಿ ಗಂಭೀರ ಗಾಯಗೊಂಡು ಚಿಕಿತ್ಸೆ ಪಡೆಯುತ್ತಿದ್ದ ಪ್ರತಿಭಾನ್ವಿತ ವಿದ್ಯಾರ್ಥಿ ಸಾವು

Suddi Udaya

ಸಾಮಾಜಿಕ ಜಾಲತಾಣದಲ್ಲಿ ಎಸ್‌ಡಿಪಿಐ ವಿರುದ್ಧ ಅವಹೇಳನಕಾರಿ ಪೋಸ್ಟ್: ಬೆಳ್ತಂಗಡಿ ಕ್ಷೇತ್ರ ಸಮಿತಿ ವತಿಯಿಂದ ಧರ್ಮಸ್ಥಳ ಠಾಣೆಗೆ ದೂರು

Suddi Udaya

ಓಡಿಲ್ನಾಳ: ಮೈರಲ್ಕೆ ಪಶುಪತಿ ಕೃಪಾ ಯಕ್ಷಗಾನ ಬಯಲಾಟ ಸಮಿತಿ ವತಿಯಿಂದ ಮಾಜಿ ಶಾಸಕ ಕೆ ವಸಂತ ಬಂಗೇರರ ಪ್ರಾಯೋಜಕತ್ವದಲ್ಲಿ “ಕುಮಾರ ವಿಜಯ” ಯಕ್ಷಗಾನ ಹಾಗೂ ಕಿರಾತ ಮೂರ್ತಿ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಜೀರ್ಣೋದ್ಧಾರ ಕಾರ್ಯದಲ್ಲಿ ಸೇವೆಸಲ್ಲಿಸಿದ ಕರಸೇವಕರಿಗೆ ಗೌರವಾರ್ಪಣೆ

Suddi Udaya

ಗುರುವಾಯನಕೆರೆ ಬಳಿ ಡಿವೈಡರ್‌ಗೆ ಬೈಕ್ ಡಿಕ್ಕಿ: ಯುವಕ ಸ್ಥಳದಲ್ಲಿ ಸಾವು

Suddi Udaya
error: Content is protected !!