25.5 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಸ್ಯಾಮ್ಸಂಗ್ ಕಂಪೆನಿಯ ಹೊಸ ವಿನ್ಯಾಸದ ನವೀನ ಮಾದರಿಯ ಗ್ಯಾಲಕ್ಸಿ S24 ಅಲ್ಟ್ರಾ ಮಾರುಕಟ್ಟೆಗೆ ಬಿಡುಗಡೆ

ಉಜಿರೆ :ಸ್ಯಾಮ್ಸಂಗ್ ಕಂಪೆನಿಯ ಹೊಸ ವಿನ್ಯಾಸದ ನವೀನ ಮಾದರಿಯ ಗ್ಯಾಲಕ್ಸಿ S24 Family ಜ.24ರಂದು ಉಜಿರೆ ಓಶನ್ ಪಾರ್ಲ್ ನಲ್ಲಿ ಮಾರುಕಟ್ಟೆಗೆ ಅನಾವರಣಗೊಳಿಸಲಾಯಿತು.

ದೀಪ ಬೆಳಗುವುದರೊಂದಿಗೆ ಕಾರ್ಯಕ್ರಮಕ್ಕೆ ಚಾಲನೆ ನೀಡಲಾಯಿತು.

ಮೊಬೈಲ್ ನ ಬಿಡುಗಡೆಗೊಳಿಸಿ ಮಾತನಾಡಿದ ಝೋನಲ್ ಸೇಲ್ಸ್ ಮ್ಯಾನೇಜರ್ ಇಸ್ಮಾಯಿಲ್ ಶರೀಫ್ ರವರು ಮೊಬೈಲ್ ನ ವೈಶಿಷ್ಟ್ಯಗಳ ಬಗ್ಗೆ ಮಾಹಿತಿ ನೀಡಿದರು. ಕಾರ್ಯಕ್ರಮದಲ್ಲಿ ಮೊಬೈಲ್ ನ ಮುಂಗಡ ಕಾಯ್ದಿರಿಸಿದ್ದ ಬೆನಕ ಹಾಸ್ಪಿಟಲ್ ವೈದ್ಯರಾದ ಗೋಪಾಲಕೃಷ್ಣ, ದಿಶಾ ಫುಡ್ ಕಾರ್ನರ್ ನ ಅಕ್ಷಯ್, ಉದ್ಯಮಿ ಜಗದೀಶ್ ಆಚಾರ್ಯ, ದುಬೈನ ಉದ್ಯಮಿ ಅಕ್ಷಯ್, ದಿಶಾ ಬೇಕರಿಯ ದಿನೇಶ್ , ಮೊಬೈಲ್ ಶಾಪ್ ನ ಮಾಲಕರಾದ ರಿಶಾದ್, ಪವರ್ ಆನ್ ಬ್ಯಾಟರಿಯ ಮಾಲಕರಾದ ಶೀತಲ್ ಜೈನ್ ಹಾಗೂ ಲ್ಯಾಡಿಂಗ್ ಡೀಲರ್ ಸಾಹುಲ್ ಹಮೀದ್ ರವರಿಗೆ ಹೊಸ ಮೊಬೈಲನ್ನು ಹಸ್ತಾಂತರಿಸಲಾಯಿತು.

ಕಾರ್ಯಕ್ರಮದಲ್ಲಿ ಏರಿಯಾ ಬಿಸಿನೆಸ್ ಮ್ಯಾನೇಜರ್ ನಾಗೇಂದ್ರ ಪ್ರಭು, ಏರಿಯಾ ಬಿಸಿನೆಸ್ ಸೇಲ್ಸ್ ಆಫೀಸರ್ ವಿಜಯ್ ದಾಸ್, ಅಜಯ್ ಬಿ.ಎಮ್, ತಾಲೂಕಿನ ಅಧಿಕೃತ ವಿತರಕರಾದ ಕಲ್ಲಾರಿ ಕಮ್ಯುನಿಕೇಶನ್ ಮಾಲಕರಾದ ಜಗದೀಶ್ ಆಚಾರ್ಯ ಉಪಸ್ಥಿತರಿದ್ದರು.

ಕಾರ್ಯಕ್ರಮದಲ್ಲಿ ರಿಟೇಲರುಗಳಾದ ಫಾಲ್ಸ್ ಮೊಬೈಲ್ ಮಾಲಕರಾದ ರಾಘವೇಂದ್ರ, ಹೈಟೆಕ್ ಮೊಬೈಲ್ ಮಾಲಕರಾದ ಶರೀಫ್, ಅಯಾನ್ಶ್ ಎಂಟರ್‌ಪ್ರೈಸಸ್ ನ ಮಾಲಕರಾದ ಅರಿಯಂತ್ ಜೈನ್, ಸ್ಮಾರ್ಟ್ ಮೊಬೈಲ್ ಮಾಲಕರಾದ ಅಕ್ಷತ್ ಉಪಸ್ಥಿತರಿದ್ದು ಅವರನ್ನು ಗೌರವಿಸಲಾಯಿತು. ಕಾರ್ಯಕ್ರಮದಲ್ಲಿ ಕಲ್ಲಾರಿ ಕಮ್ಯುನಿಕೇಶನ್ ನ ಸಿಬ್ಬಂದಿಗಳು ಉಪಸ್ಥಿತರಿದ್ದರು. ಅತಿಥಿಗಳನ್ನು ಸ್ಮರಣಿಕೆ ನೀಡಿ ಗೌರವಿಸಲಾಯಿತು. ಗಣೇಶ್ ಕಾರ್ಯಕ್ರಮ ನಿರೂಪಿಸಿ, ಧನ್ಯವಾದವಿತ್ತರು.

Related posts

ಪಡುಮಲೆ ಎರುಕೊಟ್ಟದ ಕೋಟಿ ಚೆನ್ನಯರ ಜನ್ಮಸ್ಥಾನಕ್ಕೆ ನಟ ಶನಿಲ್ ಗೌತಮ್ ಭೇಟಿ

Suddi Udaya

ಉಜಿರೆಯ ಎಸ್.ಡಿ.ಎಂ ಕಾಲೇಜಿನ ಅಮಿತ್‌ ಕೆ ಜೈನ್ ಅವರಿಗೆ ಪಿ.ಎಚ್.ಡಿ ಪದವಿ

Suddi Udaya

ಈದ್ ಹಬ್ಬದ ಪ್ರಯುಕ್ತ ಅಪ್ಸರಾ ಫ್ಯಾಶನ್ ಸೆಂಟರ್ ಹಾಗೂ ಮಿಷ್‌ಮಷ್ ಫ್ಯಾನ್ಸಿ & ಗಿಫ್ಟ್ ಸೆಂಟರಿನಲ್ಲಿ ಶೇ.20 ಡಿಸ್ಕೌಂಟ್ ಸೇಲ್: ಶಾಲಾ ಮಕ್ಕಳ ಬುಕ್ಸ್, ಬ್ಯಾಗ್‌ಗಳು, ಕೊಡೆ, ಸ್ಟೇಷನರಿ ವಸ್ತುಗಳು ರಿಯಾಯಿತಿ ದರದಲ್ಲಿ ಲಭ್ಯ

Suddi Udaya

ಎಸ್.ಎಸ್.ಎಲ್.ಸಿ ಫಲಿತಾಂಶ: ನಿಡ್ಲೆ ಸರಕಾರಿ ಪ್ರೌಢಶಾಲೆಗೆ ಶೇ. 95.65 ಫಲಿತಾಂಶ

Suddi Udaya

ಧರ್ಮಸ್ಥಳ: ದ್ವಿಸಹಸ್ರ ಮದ್ಯವರ್ಜನ ಶಿಬಿರದ ಸಹಸ್ರಾರು ಮದ್ಯವರ್ಜಿತರ ಸಮಾವೇಶ

Suddi Udaya

ನಾವೂರು: ಮುರ ಮುಹಿಯುದ್ದೀನ್ ಜುಮಾ ಮಸೀದಿಯಲ್ಲಿ ಮೀಲಾದ್ ಸ್ವಾಗತ ಸಮಿತಿ ರಚನೆ

Suddi Udaya
error: Content is protected !!