ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಅಯೋಧ್ಯೆಯಲ್ಲಿ ಪ್ರಭು ಶ್ರೀರಾಮಚಂದ್ರನ ಪ್ರಾಣ ಪ್ರತಿಷ್ಠೆ: ವಿಜಯ ಕುಮಾರ್ ಜೈನ್ ಹಾಗೂ ಅರುಣ್ ಕುಮಾರ್ ಜೈನ್ ರವರಿಂದ ಒಂದೇ ದಿನ 22 ದೇವಸ್ಥಾನ, ಬಸದಿ, ದೈವಸ್ಥಾನ ಹಾಗೂ ಮಂದಿರ ಭೇಟಿ

ಅಳದಂಗಡಿ : ಅಯೋಧ್ಯೆಯಲ್ಲಿ ಪ್ರಭು ಶ್ರೀರಾಮಚಂದ್ರನ ಪ್ರಾಣ ಪ್ರತಿಷ್ಠೆ ದಿನದಂದು 22 ಕ್ಷೇತ್ರ ಸಂದರ್ಶನ ಇದಾಗಿದ್ದು ಆಮಂತ್ರಣ ಪರಿವಾರದ ವಿಜಯ ಕುಮಾರ್ ಜೈನ್ ಮತ್ತು ಅಳದಂಗಡಿ ಮಹಾವೀರಧಾಮದ ಅರುಣ್ ಕುಮಾರ್ ಜೈನ್ ರವರು ಸುಮಾರು 22 ದೈವ ದೇವರು ಹಾಗೂ ಮಂದಿರ ಭೇಟಿ ನೀಡಿದರು.

ಮುಂಜಾನೆ ಅಳದಂಗಡಿ ಭಗವಾನ್ ಆದಿನಾಥ ಸ್ವಾಮೀ ಬಸದಿ ಸಂದರ್ಶನ ಮಾಡಿ ಅಲ್ಲಿ ದೇವರಿಗೆ ವಿಶೇಷ ಪೂಜೆ ಸಲ್ಲಿಸಿ, ನಂತರ ಕ್ರಮವಾಗಿ ದೇವಸ್ಥಾನಗಳು, ಬಸದಿಗಳು, ದೈವಸ್ಥಾನ, ಮಾರಿಗುಡಿ, ಮಂದಿರಗಳ ಸಂದರ್ಶನ ಮಾಡಿ ಕೊನೆಯಲ್ಲಿ ಶ್ರೀ ಧರ್ಮಸ್ಥಳ ಮಂಜುನಾಥ ಸ್ವಾಮೀ ದೇವರ ಆಶೀರ್ವಾದ ಪಡೆದು ನಂತರ ಕನ್ಯಾಡಿ ಶ್ರೀರಾಮ ಮಂದಿರಕ್ಕೆ ತೆರಳಿ ಪ್ರಾರ್ಥನೆ ಸಲ್ಲಿಸಿ ಇಲ್ಲಿಯ ಸ್ವಾಮೀಜಿಯವರ ಆಶೀರ್ವಾದ ಪಡೆದು ಕೊಳ್ಳಲಾಯಿತು.


ವಿಶೇಷ ದಿನದ 22 ಕ್ಷೇತ್ರಗಳ ಸಂದರ್ಶನ ಮಾಡಿ ಲೋಕಕ್ಕೆ ಒಳ್ಳೇಯದಾಗಲಿ ಎಲ್ಲರೂ ಆರೋಗ್ಯವಂತರಾಗಿ ಪ್ರೀತಿ ಸಹಬಾಳ್ವೆ ನೆಮ್ಮದಿಯಿಂದ ಬದುಕಬೇಕು ಎಂದು ಪ್ರಾರ್ಥಿಸಿದರು..

Related posts

ಸೋಷಿಯಲ್ ಡೆಮೋಕ್ರಾಟಿಕ್ ಪಾರ್ಟಿ ಆಫ್ ಇಂಡಿಯ ಮದ್ದಡ್ಕ ಬೂತ್ ಸಮಿತಿ ವತಿಯಿಂದ ಸ್ವಾತಂತ್ರ್ಯೋತ್ಸವ ದಿನಾಚರಣೆ

Suddi Udaya

ಶಾಸಕ ಹರೀಶ್ ಪೂಂಜರವರನ್ನು ಭೇಟಿ ಮಾಡಿದ ಸ್ಪಂದನ ಆಟೋ ಚಾಲಕ- ಮಾಲಕ ಸಂಘದ ಸದಸ್ಯರು: ರಸ್ತೆ ದುರಸ್ತಿ ಬಗ್ಗೆ ಮನವಿ, ಶಾಸಕರಿಂದ ಶೀಘ್ರ ಸರಿಪಡಿಸುವ ಭರವಸೆ

Suddi Udaya

ಧರ್ಮಸ್ಥಳ ಶ್ರೀ ಮಂ.ಸ್ವಾ.ಅ.ಹಿ.ಪ್ರಾ. ಶಾಲೆಯಲ್ಲಿ ವಾರ್ಷಿಕ ಪ್ರತಿಭಾ ದಿನಾಚರಣೆ

Suddi Udaya

ಕೊಕ್ಕಡ ಸಂಗಮ್ ಯುವಕ ಮಂಡಲದ ಸದಸ್ಯರ ಮಹಾಸಭೆ ಹಾಗೂ ನೂತನ ಪದಾಧಿಕಾರಿಗಳ ಆಯ್ಕೆ

Suddi Udaya

ರಾಜ್ಯಮಟ್ಟದ ಸ್ಪೆಲ್ ಬೀ ಸ್ಪರ್ಧೆ: ಹೋಲಿ ರಿಡೀಮರ್ ಆಂ.ಮಾ. ಶಾಲೆಯ ವಿದ್ಯಾರ್ಥಿಗಳು ರಾಷ್ಟ್ರ ಮಟ್ಟಕ್ಕೆ ಆಯ್ಕೆ

Suddi Udaya

ಉಜಿರೆ ರುಡ್ ಸೆಟ್ ಸಂಸ್ಥೆಯಲ್ಲಿ ಮಹಿಳಾ ಬ್ಯೂಟೀಪಾರ್ಲರ್ ನಿರ್ವಹಣೆ ತರಬೇತಿಯ ಸಮಾರೋಪ ಸಮಾರಂಭ

Suddi Udaya
error: Content is protected !!