ಕುಕ್ಕೇಡಿ: ಚಿರತೆ ದಾಳಿಗೆ ಹಸು ಬಲಿ

Suddi Udaya

ಬೆಳ್ತಂಗಡಿ: ಕುಕ್ಕೇಡಿ ಗ್ರಾಮದ ಗೋಳಿಯಂಗಡಿಯಲ್ಲಿ ಚಿರತೆ ಹಸುವನ್ನು ಕೊಂದು ಹಾಕಿರುವ ಘಟನೆ ನಡೆದಿದೆ.

ಹುಸೇನ್ ಎಂಬವರ ಮನೆ ಸಮೀಪ ಹಸುವಿನ ಕಳೇಬರ ಕಂಡುಬಂದಿದ್ದು ಹಸು ಚಿರತೆ ದಾಳಿಯಿಂದ ಮೃತಪಟ್ಟಿರುವುದು ದೃಢಪಟ್ಟಿದೆ. ಘಟನೆಯಿಂದ ಪರಿಸರದಲ್ಲಿ ಆತಂಕದ ಸ್ಥಿತಿ ಏರ್ಪಟ್ಟಿದೆ.

ವೇಣೂರು ವಲಯ ಅರಣ್ಯಾಧಿಕಾರಿ ಸುಬ್ರಹ್ಮಣ್ಯ ಆಚಾರ್, ಉಪವಲಯ ಅರಣ್ಯಾಧಿಕಾರಿ ಸುನೀಲ್ ಕುಮಾರ್, ಸಿಬ್ಬಂದಿ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದು ಸಾರ್ವಜನಿಕರ ಸಹಕಾರದಲ್ಲಿ ಇಲಾಖೆ ವತಿಯಿಂದ ಬೋನನ್ನು ಇರಿಸಲಾಗಿದೆ.

Leave a Comment

error: Content is protected !!