September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಗೇರುಕಟ್ಟೆ: ಮನ್ ಶರ್ ವಿದ್ಯಾಸಂಸ್ಥೆಯಲ್ಲಿ 75ನೇ ವರ್ಷದ ಗಣರಾಜ್ಯೋತ್ಸವ ಆಚರಣೆ

ಬೆಳ್ತಂಗಡಿ : “ಹೃದಯ ಹಾಗೂ ಮನಸ್ಸಿನಿಂದ ನಾವೆಲ್ಲ ಒಂದಾಗೋಣ, ಯಾರೂ ನಮ್ಮನ್ನು ಮುರಿಯಲು ಬಿಡದಿರೋಣ, ಆಗ ಮಾತ್ರ ನಾವು ಸ್ವಾತಂತ್ರ್ಯರು ಎಂದು ಅನಿಸಿಕೊಳ್ಳುವುದು”. ತತ್ವದ ಅಡಿಯಲ್ಲಿ ಮನ್ ಶರ್ ವಿದ್ಯಾ ಸಂಸ್ಥೆ ಗೇರುಕಟ್ಟೆ ಇಲ್ಲಿ 75ನೇ ವರ್ಷದ ಗಣರಾಜ್ಯೋತ್ಸವ ದಿನಾಚರಣೆಯನ್ನು ವಿಜೃಂಭಣೆಯಿಂದ ಆಚರಿಸಲಾಯಿತು.

ವಿದ್ಯಾರ್ಥಿಗಳ ಪರೇಡ್ ಮುಖೇನ ವಿದ್ಯಾಸಂಸ್ಥೆಯ ಜನರಲ್ ಮ್ಯಾನೇಜರ್ ಆದ ಹೈದರ್ ಮರ್ದಾಳ ಇವರು ಧ್ವಜಾರೋಹಣವನ್ನು ನೆರವೇರಿಸಿ, ಭಾರತ ಗಣರಾಜ್ಯದ ಸಂಪೂರ್ಣ ಸವಿವರವನ್ನು ವಿದ್ಯಾರ್ಥಿಗಳ ಮನಮುಟ್ಟುವಂತೆ ತಿಳಿಸಿದರು. ಪದವಿಪೂರ್ವ ಕಾಲೇಜಿನ ಪ್ರಾಂಶುಪಾಲರಾದ ಕೌಸರ್ ಪಲ್ಲಾದೆ ಇವರು ಸಂವಿಧಾನ ಪೀಠಿಕೆಯ ಪ್ರತಿಜ್ಞಾ ವಿಧಿ ಕಾರ್ಯವನ್ನು ನಿರ್ವಹಿಸಿದರು. ಹಾಗೆಯೇ ಪುಟಾಣಿ ಮಕ್ಕಳಿಂದ ಕಲರವಭರಿತ ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆಯಿತು.


ಪ್ರೌಢಶಾಲಾ ವಿಭಾಗದ ಮುಖ್ಯೋಪಾಧ್ಯಾಯರಾದ ಉಷಾ ಸ್ವಾಗತಿಸಿದರು, ಕೌಸರ್ ಪಲ್ಲಾದೆ ವಂದಿಸಿದರು. ಪಿಯುಸಿ ಉಪನ್ಯಾಸಕರಾದ ಹಂಸಶ್ರೀ ಬಿ.ಆರ್ ಕಾರ್ಯಕ್ರಮ ನಿರೂಪಿಸಿದರು.

Related posts

ಕೊಲ್ಲಿ ಶ್ರೀ ದುರ್ಗಾಪರಮೇಶ್ವರಿ/ ದುರ್ಗಾದೇವಿ ದೇವಸ್ಥಾನದ ನಾಗನ ಕಟ್ಟೆಯ ಶಿಲಾನ್ಯಾಸ ಕಾರ್ಯಕ್ರಮ

Suddi Udaya

ಅಂತರಾಷ್ಟ್ರೀಯ ಮಟ್ಟದ ಕರಾಟೆ ಪಂದ್ಯಾಟ: ಉಜಿರೆಯ ಪ್ರತೀಕ್ ಶೆಟ್ಟಿ ರಿಗೆ ಕುಮಿಟೆ ವಿಭಾಗದಲ್ಲಿ ಚಿನ್ನದ ಪದಕ ಹಾಗೂ ಕಟಾ ವಿಭಾಗದಲ್ಲಿ ಕಂಚಿನ ಪದಕ

Suddi Udaya

ಚಾರ್ಮಾಡಿ ಘಾಟ್ ನಲ್ಲಿ ಎರಡು ಅಪಘಾತ: ಇಬ್ಬರಿಗೆ ಗಾಯ

Suddi Udaya

ರಾಷ್ಟ್ರ ಮಟ್ಟದ ಕರಾಟೆ ಸ್ಪರ್ಧೆ : ಮೊಹಮ್ಮದ್ ಅಫ್ಹಾನ್ ಕಟಾ ವಿಭಾಗದಲ್ಲಿ ಪ್ರಥಮ ಸ್ಥಾನ ಪಡೆದು ಚಿನ್ನದ ಪದಕ

Suddi Udaya

ಉಜಿರೆ ಎಸ್.ಡಿ.ಎಮ್ ಸಿ.ಬಿ.ಎಸ್.ಇ ಶಾಲೆಯಲ್ಲಿ ಸಂಸ್ಕೃತೋತ್ಸವ

Suddi Udaya

ಪುತ್ತೂರು : ರಾಧಾ’ಸ್‌ನಲ್ಲಿ ಆಫರ್‌ಗಳ ಬಿಗ್‌ಬಾಸ್‌ ರಾಧಾ’ಸ್ ಉತ್ಸವದ 11ನೇ ವಾರದ ಡ್ರಾ. ವಿಜೇತರು

Suddi Udaya
error: Content is protected !!