26.7 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಮರೋಡಿ ಶ್ರೀ ಉಮಾಮಹೇಶ್ವರ ದೇವಸ್ಥಾನದ ವರ್ಷಾವಧಿ ಜಾತ್ರೆಗೆ ಚಾಲನೆ: ಧ್ವಜಾರೋಹಣ, ಉತ್ಸವ ಬಲಿ, ಭಕ್ತರಿಂದ ಹಸಿರುವಾಣಿ ಹೊರೆಕಾಣಿಕೆ ಸಮರ್ಪಣೆ

ಮರೋಡಿ : ಮರೋಡಿ ಶ್ರೀ ಉಮಾಮಹೇಶ್ವರ ದೇವಸ್ಥಾನದ ವರ್ಷಾವಧಿ ಆಯನ ಮತ್ತು ಸಿರಿಗಳ ಜಾತ್ರೆ ಹಾಗೂ ಧಾರ್ಮಿಕ ಕಾರ್ಯಕ್ರಮವು ಜ.25ರಿಂದ ಪ್ರಾರಂಭಗೊಂಡು ಜ.29 ರವರೆಗೆ ಕ್ಷೇತ್ರದ ತಂತ್ರಿಗಳಾದ ಬ್ರಹ್ಮಶ್ರೀ ವೇದಮೂರ್ತಿ ಬಾಲಕೃಷ್ಣ ಪಾಂಗಾಣ್ಣಾಯರ ಹಾಗೂ ಪ್ರಧಾನ ಅರ್ಚಕ ಸುಬ್ರಹ್ಮಣ್ಯ ಪ್ರಸಾದ್ ರವರ ನೇತೃತ್ವದಲ್ಲಿ ನಡೆಯಲಿದೆ.

ಇಂದು ಬೆಳಿಗ್ಗೆ ದೇವತಾ ಪ್ರಾರ್ಥನೆ, ತೋರಣ ಮೂಹೂರ್ತ , ನವಕ ಪ್ರಧಾನ ಹೋಮ, ಕಲಶಾಭಿಷೇಕ, ಅಲಂಕಾರ ಪೂಜೆ, ಧ್ವಜಾರೋಹಣ , ಪ್ರಸಾದ ವಿತರಣೆ, ಅನ್ನಸಂತರ್ಪಣೆ ನಡೆಯಿತು. ಭಕ್ತರು ಶ್ರೀಕ್ಷೇತ್ರಕ್ಕೆ ಹಸಿರುವಾಣಿ ಹೊರೆಕಾಣಿಕೆ ಸಮರ್ಪಿಸಿದರು.

ಈ ಸಂದರ್ಭದಲ್ಲಿ ದೇವಸ್ಥಾನದ ಆಡಳಿತ ಮೊಕ್ತೇಸರ ದೇವೇಂದ್ರ ಹೆಗ್ಡೆ ಕೊಕ್ರಾಡಿ ಕೊಡಂಗೆಗುತ್ತು,ಕಾರ್ಯದರ್ಶಿ ಜಯಂತ್ ಕೋಟ್ಯಾನ್,ಆಡಳಿತ ಮಂಡಳಿ ಸದಸ್ಯರಾದ ರತ್ನಾಕರ ಬುಣ್ಣನ್, ವಿಜಯ ಅರಿಗ, ಎಂ.ಎಸ್ ಪೂಜಾರಿ, ದಿವಾಕರ ಹೆಗ್ಡೆ, ವಿಜಯ್ ಕುಮಾರ್ ಬಂಗ, ಎಂ. ಅಣ್ಣಪ್ಪ ಹೆಗ್ಡೆ, ರಾಧಕೃಷ್ಣ ಹೆಗ್ಡೆ, ಸುಜಯ ಹೆಗ್ಡೆ, ಶ್ರೀಧರ ಆಚಾರ್ಯ, ಸುರೇಂದ್ರ ಪೂಜಾರಿ, ಶ್ರೀಧರ ಪೂಜಾರಿ ಹಾಗೂ ಭಕ್ತರು, ಊರವರು ಉಪಸ್ಥಿತರಿದ್ದರು.

ಇಂದು ರಾತ್ರಿ ದೊಡ್ಡ ರಂಗಪೂಜೆ, ನಂತರ ಬಲಿ ಉತ್ಸವ, ಮಹಾಪೂಜೆ, ನಿತ್ಯಬಲಿ, ವ್ಯಾಘ್ರ ಚಾಮುಂಡಿ ಸಹಿತ ರಕ್ತೇಶ್ವರಿ, ಮೈಸಂದಾಯ ದೈವಗಳಿಗೆ ಗಗ್ಗರ ಸೇವೆ ಹಾಗೂ ಕುಣಿತ ಭಜನಾ ಕಾರ್ಯಕ್ರಮ ನಡೆಯಲಿದೆ.

Related posts

ತೆಕ್ಕಾರು ಬ್ರಹ್ಮಕಲಶೋತ್ಸವದಲ್ಲಿ ಶಾಸಕ ಹರೀಶ್ ಪೂಂಜರವರು ಮುಸ್ಲಿಂರನ್ನು ನಿಂದಿಸಿರುವುದು ಸಮುದಾಯಕ್ಕೆ ನೋವು ತಂದಿದೆ: ಮುಸ್ಲಿಂ ಮುಖಂಡರಿಂದ ಪತ್ರಿಕಾಗೋಷ್ಠಿ

Suddi Udaya

ಕುಂಬಾರರ ಸೇವಾ ಸಂಘದ ಮಾಸಿಕ ಸಭೆ: ಸಂಘದ ಅಧ್ಯಕ್ಷ ಹೆಚ್. ಪದ್ಮಕುಮಾರ್ ಅಧ್ಯಕ್ಷತೆ

Suddi Udaya

ಶ್ರೀ ಕ್ಷೇತ್ರ ಧರ್ಮಸ್ಥಳ ಭಜನಾ ಪರಿಷತ್ ಮಡಂತ್ಯಾರು ವಲಯ ಭಜನಾ ಮಂಡಳಿಗಳ ಸಭೆ

Suddi Udaya

ಅಪ್ರಾಪ್ತೆಗೆ ಲೈಂಗಿಕ ದೌರ್ಜನ್ಯ: ಆರೋಪಿ ನಾರಾವಿಯ ಯುವಕನಿಗೆ ನ್ಯಾಯಾಂಗ ಬಂಧನ

Suddi Udaya

ಬೆಳ್ತಂಗಡಿ: ಅಯೋಧ್ಯೆ ಬಾಲರಾಮ ಮೂರ್ತಿ ಕೆತ್ತನೆ ಕೆಲಸದಲ್ಲಿ ಭಾಗಿಯಾದ ಶಿಲ್ಪಿ ಜಯಚಂದ್ರ ನಾಳ

Suddi Udaya

ಮೇಲಂತಬೆಟ್ಟು ಶ್ರೀ ನಾಗಬ್ರಹ್ಮ ದೇವಸ್ಥಾನದ ಅಭಿವೃದ್ಧಿ ಕಾಮಗಾರಿಗಳ ವಿಧಾನ ಪರಿಷತ್ ಮಾಜಿ ಶಾಸಕ ಕೆ.ಹರೀಶ್ ಕುಮಾರ್ ರವರಿಂದ ಉದ್ಘಾಟನೆ

Suddi Udaya
error: Content is protected !!