25.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಗೇರುಕಟ್ಟೆ: ಮನ್ ಶರ್ ವಿದ್ಯಾಸಂಸ್ಥೆಯಲ್ಲಿ 75ನೇ ವರ್ಷದ ಗಣರಾಜ್ಯೋತ್ಸವ ಆಚರಣೆ

ಬೆಳ್ತಂಗಡಿ : “ಹೃದಯ ಹಾಗೂ ಮನಸ್ಸಿನಿಂದ ನಾವೆಲ್ಲ ಒಂದಾಗೋಣ, ಯಾರೂ ನಮ್ಮನ್ನು ಮುರಿಯಲು ಬಿಡದಿರೋಣ, ಆಗ ಮಾತ್ರ ನಾವು ಸ್ವಾತಂತ್ರ್ಯರು ಎಂದು ಅನಿಸಿಕೊಳ್ಳುವುದು”. ತತ್ವದ ಅಡಿಯಲ್ಲಿ ಮನ್ ಶರ್ ವಿದ್ಯಾ ಸಂಸ್ಥೆ ಗೇರುಕಟ್ಟೆ ಇಲ್ಲಿ 75ನೇ ವರ್ಷದ ಗಣರಾಜ್ಯೋತ್ಸವ ದಿನಾಚರಣೆಯನ್ನು ವಿಜೃಂಭಣೆಯಿಂದ ಆಚರಿಸಲಾಯಿತು.

ವಿದ್ಯಾರ್ಥಿಗಳ ಪರೇಡ್ ಮುಖೇನ ವಿದ್ಯಾಸಂಸ್ಥೆಯ ಜನರಲ್ ಮ್ಯಾನೇಜರ್ ಆದ ಹೈದರ್ ಮರ್ದಾಳ ಇವರು ಧ್ವಜಾರೋಹಣವನ್ನು ನೆರವೇರಿಸಿ, ಭಾರತ ಗಣರಾಜ್ಯದ ಸಂಪೂರ್ಣ ಸವಿವರವನ್ನು ವಿದ್ಯಾರ್ಥಿಗಳ ಮನಮುಟ್ಟುವಂತೆ ತಿಳಿಸಿದರು. ಪದವಿಪೂರ್ವ ಕಾಲೇಜಿನ ಪ್ರಾಂಶುಪಾಲರಾದ ಕೌಸರ್ ಪಲ್ಲಾದೆ ಇವರು ಸಂವಿಧಾನ ಪೀಠಿಕೆಯ ಪ್ರತಿಜ್ಞಾ ವಿಧಿ ಕಾರ್ಯವನ್ನು ನಿರ್ವಹಿಸಿದರು. ಹಾಗೆಯೇ ಪುಟಾಣಿ ಮಕ್ಕಳಿಂದ ಕಲರವಭರಿತ ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆಯಿತು.


ಪ್ರೌಢಶಾಲಾ ವಿಭಾಗದ ಮುಖ್ಯೋಪಾಧ್ಯಾಯರಾದ ಉಷಾ ಸ್ವಾಗತಿಸಿದರು, ಕೌಸರ್ ಪಲ್ಲಾದೆ ವಂದಿಸಿದರು. ಪಿಯುಸಿ ಉಪನ್ಯಾಸಕರಾದ ಹಂಸಶ್ರೀ ಬಿ.ಆರ್ ಕಾರ್ಯಕ್ರಮ ನಿರೂಪಿಸಿದರು.

Related posts

ಶ್ರೀ ಧ.ಮಂ. ಆಂಗ್ಲ ಮಾಧ್ಯಮ ಶಾಲೆಯಲ್ಲಿ ಎಸ್.ಎಸ್.ಎಲ್.ಸಿ ಯಲ್ಲಿ ರಾಜ್ಯಕ್ಕೆ ಪ್ರಥಮ ಸ್ಥಾನ ಗಳಿಸಿದ ಮಾಧುರ್ಯ ರವರಿಗೆ ಅಭಿನಂದನಾ ಸಮಾರಂಭ

Suddi Udaya

ಮೇ 20-22: ಸಾಲುಕಾಯೇರು ಶ್ರೀ ಮಹಮ್ಮಾಯಿ ಅಮ್ಮನವರ ಪ್ರತಿಷ್ಠಾ ಬ್ರಹ್ಮಕಲಶೋತ್ಸವ

Suddi Udaya

ಅಳದಂಗಡಿ ಶ್ರೀ ಸತ್ಯದೇವತಾ ದೈವಸ್ಥಾನಕ್ಕೆ ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಭೇಟಿ

Suddi Udaya

ನಿಡಿಗಲ್ ನೇತ್ರಾವತಿ ನದಿಯಲ್ಲಿ ಸಿಕ್ಕಿಹಾಕಿಕೊಂಡ ದನಗಳ ರಕ್ಷಣೆ

Suddi Udaya

ಕುವೆಟ್ಟು ಸ.ಉ.ಹಿ.ಪ್ರಾ.ಶಾಲೆಯಲ್ಲಿ ಮೆಟ್ರಿಕ್ ಮೇಳ

Suddi Udaya

ಕನ್ಯಾಡಿ ಶ್ರೀಗಳಿಂದ ರವೀಂದ್ರ ಪೂಜಾರಿ ಆರ್ಲರಿಗೆ ಗೌರವಾರ್ಪಣೆ

Suddi Udaya
error: Content is protected !!