July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಗೇರುಕಟ್ಟೆ: ಮನ್ ಶರ್ ವಿದ್ಯಾಸಂಸ್ಥೆಯಲ್ಲಿ 75ನೇ ವರ್ಷದ ಗಣರಾಜ್ಯೋತ್ಸವ ಆಚರಣೆ

ಬೆಳ್ತಂಗಡಿ : “ಹೃದಯ ಹಾಗೂ ಮನಸ್ಸಿನಿಂದ ನಾವೆಲ್ಲ ಒಂದಾಗೋಣ, ಯಾರೂ ನಮ್ಮನ್ನು ಮುರಿಯಲು ಬಿಡದಿರೋಣ, ಆಗ ಮಾತ್ರ ನಾವು ಸ್ವಾತಂತ್ರ್ಯರು ಎಂದು ಅನಿಸಿಕೊಳ್ಳುವುದು”. ತತ್ವದ ಅಡಿಯಲ್ಲಿ ಮನ್ ಶರ್ ವಿದ್ಯಾ ಸಂಸ್ಥೆ ಗೇರುಕಟ್ಟೆ ಇಲ್ಲಿ 75ನೇ ವರ್ಷದ ಗಣರಾಜ್ಯೋತ್ಸವ ದಿನಾಚರಣೆಯನ್ನು ವಿಜೃಂಭಣೆಯಿಂದ ಆಚರಿಸಲಾಯಿತು.

ವಿದ್ಯಾರ್ಥಿಗಳ ಪರೇಡ್ ಮುಖೇನ ವಿದ್ಯಾಸಂಸ್ಥೆಯ ಜನರಲ್ ಮ್ಯಾನೇಜರ್ ಆದ ಹೈದರ್ ಮರ್ದಾಳ ಇವರು ಧ್ವಜಾರೋಹಣವನ್ನು ನೆರವೇರಿಸಿ, ಭಾರತ ಗಣರಾಜ್ಯದ ಸಂಪೂರ್ಣ ಸವಿವರವನ್ನು ವಿದ್ಯಾರ್ಥಿಗಳ ಮನಮುಟ್ಟುವಂತೆ ತಿಳಿಸಿದರು. ಪದವಿಪೂರ್ವ ಕಾಲೇಜಿನ ಪ್ರಾಂಶುಪಾಲರಾದ ಕೌಸರ್ ಪಲ್ಲಾದೆ ಇವರು ಸಂವಿಧಾನ ಪೀಠಿಕೆಯ ಪ್ರತಿಜ್ಞಾ ವಿಧಿ ಕಾರ್ಯವನ್ನು ನಿರ್ವಹಿಸಿದರು. ಹಾಗೆಯೇ ಪುಟಾಣಿ ಮಕ್ಕಳಿಂದ ಕಲರವಭರಿತ ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆಯಿತು.


ಪ್ರೌಢಶಾಲಾ ವಿಭಾಗದ ಮುಖ್ಯೋಪಾಧ್ಯಾಯರಾದ ಉಷಾ ಸ್ವಾಗತಿಸಿದರು, ಕೌಸರ್ ಪಲ್ಲಾದೆ ವಂದಿಸಿದರು. ಪಿಯುಸಿ ಉಪನ್ಯಾಸಕರಾದ ಹಂಸಶ್ರೀ ಬಿ.ಆರ್ ಕಾರ್ಯಕ್ರಮ ನಿರೂಪಿಸಿದರು.

Related posts

ವಾಣಿ ಕಾಲೇಜು: ಅಕ್ಷರವಾಣಿ ಭಿತ್ತಿಪತ್ರಿಕೆ ಅನಾವರಣ

Suddi Udaya

ಉಜಿರೆ ಗ್ರಾಮ ಪಂಚಾಯತ್ ದ್ವಿತೀಯ ಹಂತದ ಗ್ರಾಮ ಸಭೆ

Suddi Udaya

ಸಿಯೋನ್ ಆಶ್ರಮದಲ್ಲಿ ಓಣಂ ಹಬ್ಬ ಆಚರಣೆ

Suddi Udaya

ತೋಟತ್ತಾಡಿ ಶ್ರೀ ಉಳ್ಳಾಳ್ತಿ ಭಜನಾ ಮಂದಿರದಲ್ಲಿ 9ನೇ ವರ್ಷದ ನವರಾತ್ರಿ ಪ್ರಯುಕ್ತ ಭಜನಾ ಕಾರ್ಯಕ್ರಮ

Suddi Udaya

ಬೆಳಾಲು ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಅಧ್ಯಕ್ಷರಾಗಿ ಹೆಚ್. ಪದ್ಮಗೌಡ, ಉಪಾಧ್ಯಕ್ಷರಾಗಿ ದಿನೇಶ್ ಕೋಟ್ಯಾನ್

Suddi Udaya

ಸವಣಾಲು ಶ್ರೀ ಭೈರವ ಕ್ಷೇತ್ರಕ್ಕೆ ನೂತನ ಶಿಲಾಮಯ ಗಭ೯ಗುಡಿಯ ಶಿಲೆಗಳ ಮೆರವಣಿಗೆ

Suddi Udaya
error: Content is protected !!