23.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಗೇರುಕಟ್ಟೆ: ಮನ್ ಶರ್ ವಿದ್ಯಾಸಂಸ್ಥೆಯಲ್ಲಿ 75ನೇ ವರ್ಷದ ಗಣರಾಜ್ಯೋತ್ಸವ ಆಚರಣೆ

ಬೆಳ್ತಂಗಡಿ : “ಹೃದಯ ಹಾಗೂ ಮನಸ್ಸಿನಿಂದ ನಾವೆಲ್ಲ ಒಂದಾಗೋಣ, ಯಾರೂ ನಮ್ಮನ್ನು ಮುರಿಯಲು ಬಿಡದಿರೋಣ, ಆಗ ಮಾತ್ರ ನಾವು ಸ್ವಾತಂತ್ರ್ಯರು ಎಂದು ಅನಿಸಿಕೊಳ್ಳುವುದು”. ತತ್ವದ ಅಡಿಯಲ್ಲಿ ಮನ್ ಶರ್ ವಿದ್ಯಾ ಸಂಸ್ಥೆ ಗೇರುಕಟ್ಟೆ ಇಲ್ಲಿ 75ನೇ ವರ್ಷದ ಗಣರಾಜ್ಯೋತ್ಸವ ದಿನಾಚರಣೆಯನ್ನು ವಿಜೃಂಭಣೆಯಿಂದ ಆಚರಿಸಲಾಯಿತು.

ವಿದ್ಯಾರ್ಥಿಗಳ ಪರೇಡ್ ಮುಖೇನ ವಿದ್ಯಾಸಂಸ್ಥೆಯ ಜನರಲ್ ಮ್ಯಾನೇಜರ್ ಆದ ಹೈದರ್ ಮರ್ದಾಳ ಇವರು ಧ್ವಜಾರೋಹಣವನ್ನು ನೆರವೇರಿಸಿ, ಭಾರತ ಗಣರಾಜ್ಯದ ಸಂಪೂರ್ಣ ಸವಿವರವನ್ನು ವಿದ್ಯಾರ್ಥಿಗಳ ಮನಮುಟ್ಟುವಂತೆ ತಿಳಿಸಿದರು. ಪದವಿಪೂರ್ವ ಕಾಲೇಜಿನ ಪ್ರಾಂಶುಪಾಲರಾದ ಕೌಸರ್ ಪಲ್ಲಾದೆ ಇವರು ಸಂವಿಧಾನ ಪೀಠಿಕೆಯ ಪ್ರತಿಜ್ಞಾ ವಿಧಿ ಕಾರ್ಯವನ್ನು ನಿರ್ವಹಿಸಿದರು. ಹಾಗೆಯೇ ಪುಟಾಣಿ ಮಕ್ಕಳಿಂದ ಕಲರವಭರಿತ ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆಯಿತು.


ಪ್ರೌಢಶಾಲಾ ವಿಭಾಗದ ಮುಖ್ಯೋಪಾಧ್ಯಾಯರಾದ ಉಷಾ ಸ್ವಾಗತಿಸಿದರು, ಕೌಸರ್ ಪಲ್ಲಾದೆ ವಂದಿಸಿದರು. ಪಿಯುಸಿ ಉಪನ್ಯಾಸಕರಾದ ಹಂಸಶ್ರೀ ಬಿ.ಆರ್ ಕಾರ್ಯಕ್ರಮ ನಿರೂಪಿಸಿದರು.

Related posts

ಉಜಿರೆ : ಎಸ್.ಡಿ.ಎಂ. ಮಹಿಳಾ ಐಟಿಐಯಲ್ಲಿ ‘ಕೌಶಲ್ಯಾಭಿವೃದ್ಧಿ ಕಾರ್ಯಾಗಾರ’

Suddi Udaya

ಬೆಳ್ತಂಗಡಿ ಬ್ಲಾಕ್ ಕಾಂಗ್ರೆಸ್ ನಗರ ಸಮಿತಿಯಿಂದ ಬಿಎಲ್ಎ 2 ಹಾಗೂ ಪಕ್ಷದ ಮುಖಂಡರುಗಳಿಗೆ ಎಸ್‌ಐಆರ್, ವೋಟ್ ಮ್ಯಾಪಿಂಗ್ ಬಗ್ಗೆ ಮಾಹಿತಿ ಕಾರ್ಯಾಗಾರ

Suddi Udaya

ಉಜಿರೆ ಶ್ರೀ ಧ.ಮಂ. ಪಾಲಿಟೆಕ್ನಿಕ್ ನಲ್ಲಿ ಡಾ. ಬಿ. ಯಶೋವರ್ಮರವರ ಸವಿನೆನಪಿನಲ್ಲಿ ತಾಂತ್ರಿಕ ವಿಷಯಗಳ ವಿನಿಮಯ ವಿಶೇಷ ಉಪನ್ಯಾಸ

Suddi Udaya

ಭಗವದ್ಗೀತೆಯ 700 ಶ್ಲೋಕದ ಕಂಠಪಾಠ ಪರೀಕ್ಷೆ: ಸುರ್ಯ ಪಡ್ಪುವಿನ ಅದ್ವಿತಿ ರಾವ್ ಪ್ರಥಮ ಶ್ರೇಣಿ

Suddi Udaya

ಧರ್ಮಸ್ಥಳ: ಅಕ್ರಮ ಕೂಟ ಸೇರಿ ಗಲಾಟೆ ಪ್ರಕರಣ6 ಜನರ ಬಂಧನ: ಜಮೀನು ಮಂಜೂರು

Suddi Udaya

ಬೆಂಗಳೂರಿನ ಬಾಷ್ ಕಂಪೆನಿಯ ತಂಡ ಸೇವಾನಿಕೇತನಕ್ಕೆ ಭೇಟಿ

Suddi Udaya
error: Content is protected !!