26.3 C
ಪುತ್ತೂರು, ಬೆಳ್ತಂಗಡಿ
May 18, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಧಾರ್ಮಿಕ

ಧರ್ಮಸ್ಥಳ: ದೊಂಡೋಲೆ ಪರಶುರಾಮ ದೇವಸ್ಥಾನಕ್ಕೆ ಮುಖ್ಯಮಂತ್ರಿಯವರ ಕಾರ್ಯದರ್ಶಿ ಗೋಪಾಲ್ ಪಿ. ಎ ಭೇಟಿ

ಧರ್ಮಸ್ಥಳ : ಇಲ್ಲಿಯ ದೊಂಡೋಲೆ ಎಂಬಲ್ಲಿ ನೂತನವಾಗಿ ನಿರ್ಮಾಣವಾಗುತ್ತಿರುವ ಶ್ರೀ ಪರಶುರಾಮ ದೇವಸ್ಥಾನದ ವಠಾರದಲ್ಲಿ ನಡೆಯುತ್ತಿರುವ ಏಕಹ ಭಜನಾ ಕಾರ್ಯಕ್ರಮದ ಸಂದರ್ಭದಲ್ಲಿ ಮುಖ್ಯಮಂತ್ರಿ ಅವರ ಕಾರ್ಯದರ್ಶಿ ಹಾಗೂ ಮುಖ್ಯಮಂತ್ರಿ ಪರಿಹಾರ ನಿಧಿಯ ಕಾರ್ಯದರ್ಶಿಯವರಾದ ಗೋಪಾಲ್ ಪಿ. ಎ ಕುಟುಂಬಸ್ಥರು ಭೇಟಿ ನೀಡಿದರು.

ಇವರು ಚಾಮರಾಜನಗರ, ಮೈಸೂರು ಚಿಕ್ಕಬಳ್ಳಾಪುರ ಜಿಲ್ಲಾ ಪಂಚಾಯಿತಿ ಸಿ. ಇ. ಓ. ಹಾಗೂ ಮೈಸೂರು ದಸರಾ ಸಮಿತಿ ಅಧ್ಯಕ್ಷರಾಗಿ ಕಾರ್ಯನಿರ್ವಹಿಸಿದ್ದರು.

ನೂತನ ದೇವಸ್ಥಾನದ ಕಾರ್ಯಕ್ರಮ ಹಾಗೂ ಕಾಮಗಾರಿಯನ್ನು ವೀಕ್ಷಿಸಿ ಮೆಚ್ಚುಗೆ ವ್ಯಕ್ತಪಡಿಸಿದರು. ಸಹಕಾರವನ್ನು ನೀಡುವುದಾಗಿ ತಿಳಿಸಿದರು. ಜೊತೆಗೆ ಆರ್. ಡಿ. ಪಿ. ಆರ್. ನೌಕರ ಸಂಘದ ರಾಜ್ಯಾಧ್ಯಕ್ಷ ಡಾ. ದೇವಿಪ್ರಸಾದ್ ಬೊಲ್ಮ ಉಪಸ್ಥಿತರಿದ್ದರು.

ಕಾರ್ಯದರ್ಶಿಯವರಿಗೆ ದೇವಸ್ಥಾನದ ವತಿಯಿಂದ ಅನಂತರಾಮ್ ರಾವ್ , ರವಿ ಭಟ್, ಸೂರ್ಯನಾರಾಯಣ್ ರಾವ್, ಶ್ರೀನಿವಾಸ ಭಟ್, ಕಿರಣ್ ಕುಮಾರ್, ಅಜಯ್ ದೊಂಡೋಲೆ, ದಾಮೋದರ್ ದೊಂಡೋಲೆ, ಪ್ರಕಾಶ್, ಗೌರವಿಸಿದರು.

Related posts

ಕೊಕ್ಕಡ: ಡ್ರೈವರ್ ಮೂರ್ಛೆಕ್ಕೊಳಗಾಗಿ ಏಕಾಏಕಿ ಚಲಿಸಿದ ವಾಹನ : ಜಂಕ್ಷನ್ ನಲ್ಲಿ ನಿಂತಿದ್ದ ಮಹಿಳೆಗೆ ಡಿಕ್ಕಿ

Suddi Udaya

ಚಾರ್ಮಾಡಿ ಘಾಟ್ ನಲ್ಲಿ ಚಾಲಕನ ನಿಯಂತ್ರಣ ತಪ್ಪಿ ಮರದ ದಿಮ್ಮಿಗಳಿದ್ದ ಲಾರಿ ಪಲ್ಟಿ

Suddi Udaya

ಆರಂಬೋಡಿ ಹಾಲು ಉತ್ಪಾದಕರ ಸಹಕಾರ ಸಂಘದ ಅಧ್ಯಕ್ಷರಾಗಿ ಹೆಚ್. ಪ್ರಭಾಕರ, ಉಪಾಧ್ಯಕ್ಷರಾಗಿ ಪ್ರತಾಪ್ ಶೆಟ್ಟಿ ಆಯ್ಕೆ

Suddi Udaya

ಶಿಬಾಜೆಯಲ್ಲಿ ವಿದ್ಯುತ್ ಸ್ಪರ್ಶಿಸಿ ಯುವತಿ ಮೃತಪಟ್ಟ ಘಟನೆ : ತಕ್ಷಣ ಸ್ಪಂದಿಸಿದ ಶಾಸಕ ಹರೀಶ್ ಪೂಂಜ

Suddi Udaya

ಜೆಸಿಐ ಬೆಳ್ತಂಗಡಿ ಮಂಜುಶ್ರೀಯ 2023ನೇ ವರ್ಷದ ಚಟುವಟಿಕೆಗಳು ಸಂಪನ್ನ

Suddi Udaya

ಶಿರ್ಲಾಲು ಶ್ರೀ ದೈವ ಕೊಡಮಣಿತ್ತಾಯ ಮತ್ತು ಬೆರ್ಮೆರ್ ಬೈದೆರ್ಲೆ ಗರಡಿಯ ವಾರ್ಷಿಕ ಜಾತ್ರಾಮಹೋತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya
error: Content is protected !!