25.5 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಧಾರ್ಮಿಕ

ಧರ್ಮಸ್ಥಳ: ದೊಂಡೋಲೆ ಪರಶುರಾಮ ದೇವಸ್ಥಾನಕ್ಕೆ ಮುಖ್ಯಮಂತ್ರಿಯವರ ಕಾರ್ಯದರ್ಶಿ ಗೋಪಾಲ್ ಪಿ. ಎ ಭೇಟಿ

ಧರ್ಮಸ್ಥಳ : ಇಲ್ಲಿಯ ದೊಂಡೋಲೆ ಎಂಬಲ್ಲಿ ನೂತನವಾಗಿ ನಿರ್ಮಾಣವಾಗುತ್ತಿರುವ ಶ್ರೀ ಪರಶುರಾಮ ದೇವಸ್ಥಾನದ ವಠಾರದಲ್ಲಿ ನಡೆಯುತ್ತಿರುವ ಏಕಹ ಭಜನಾ ಕಾರ್ಯಕ್ರಮದ ಸಂದರ್ಭದಲ್ಲಿ ಮುಖ್ಯಮಂತ್ರಿ ಅವರ ಕಾರ್ಯದರ್ಶಿ ಹಾಗೂ ಮುಖ್ಯಮಂತ್ರಿ ಪರಿಹಾರ ನಿಧಿಯ ಕಾರ್ಯದರ್ಶಿಯವರಾದ ಗೋಪಾಲ್ ಪಿ. ಎ ಕುಟುಂಬಸ್ಥರು ಭೇಟಿ ನೀಡಿದರು.

ಇವರು ಚಾಮರಾಜನಗರ, ಮೈಸೂರು ಚಿಕ್ಕಬಳ್ಳಾಪುರ ಜಿಲ್ಲಾ ಪಂಚಾಯಿತಿ ಸಿ. ಇ. ಓ. ಹಾಗೂ ಮೈಸೂರು ದಸರಾ ಸಮಿತಿ ಅಧ್ಯಕ್ಷರಾಗಿ ಕಾರ್ಯನಿರ್ವಹಿಸಿದ್ದರು.

ನೂತನ ದೇವಸ್ಥಾನದ ಕಾರ್ಯಕ್ರಮ ಹಾಗೂ ಕಾಮಗಾರಿಯನ್ನು ವೀಕ್ಷಿಸಿ ಮೆಚ್ಚುಗೆ ವ್ಯಕ್ತಪಡಿಸಿದರು. ಸಹಕಾರವನ್ನು ನೀಡುವುದಾಗಿ ತಿಳಿಸಿದರು. ಜೊತೆಗೆ ಆರ್. ಡಿ. ಪಿ. ಆರ್. ನೌಕರ ಸಂಘದ ರಾಜ್ಯಾಧ್ಯಕ್ಷ ಡಾ. ದೇವಿಪ್ರಸಾದ್ ಬೊಲ್ಮ ಉಪಸ್ಥಿತರಿದ್ದರು.

ಕಾರ್ಯದರ್ಶಿಯವರಿಗೆ ದೇವಸ್ಥಾನದ ವತಿಯಿಂದ ಅನಂತರಾಮ್ ರಾವ್ , ರವಿ ಭಟ್, ಸೂರ್ಯನಾರಾಯಣ್ ರಾವ್, ಶ್ರೀನಿವಾಸ ಭಟ್, ಕಿರಣ್ ಕುಮಾರ್, ಅಜಯ್ ದೊಂಡೋಲೆ, ದಾಮೋದರ್ ದೊಂಡೋಲೆ, ಪ್ರಕಾಶ್, ಗೌರವಿಸಿದರು.

Related posts

ಡಿ.28: ಕೊಯ್ಯೂರಿನಲ್ಲಿ 19ನೇ ಬೆಳ್ತಂಗಡಿ ತಾಲೂಕು ಸಾಹಿತ್ಯ ಸಮ್ಮೇಳನ

Suddi Udaya

ಬೆಳ್ತಂಗಡಿ ತಾಲೂಕಿನಲ್ಲಿ ನೈತಿಕ ಪೊಲೀಸ್ ಗಿರಿ: ಸೂಕ್ತ ಕ್ರಮಕ್ಕೆ ಆಗ್ರಹಿಸಿ ಎಸ್‌ವೈಎಸ್ ಬೆಳ್ತಂಗಡಿ ಝೋನ್ ನಿಂದ ತಹಶೀಲ್ದಾರ ಮೂಲಕ ಮುಖ್ಯಮಂತ್ರಿ ಸಿದ್ದರಾಮಯ್ಯರವರಿಗೆ ಮನವಿ

Suddi Udaya

ಬೆಳ್ತಂಗಡಿ ಸ.ಪ್ರ.ದರ್ಜೆ ಕಾಲೇಜಿನಲ್ಲಿ ಉದ್ಯೋಗಾವಕಾಶಗಳ ಕಾರ್ಯಾಗಾರ

Suddi Udaya

ಬಳಂಜ: ಇಂದು (ಮಾ.2) ಶ್ರೀ ಬೊಳ್ಳಜ್ಜ ದೈವದ ಮೂಲಸ್ಥಾನದಲ್ಲಿ ಸಾರ್ವಜನಿಕ ಅಗೇಲು ಸೇವೆ

Suddi Udaya

ಕೊಕ್ಕಡ ಪ್ರೌಢ ಶಾಲೆಯಿಂದ ರೂ. 3.20 ಲಕ್ಷ ಮೌಲ್ಯದ ಬ್ಯಾಟರಿ ಕಳವು ಮಾಡಿದ ಮೂವರ ಬಂಧನ

Suddi Udaya

ನಾರಾವಿ ಗ್ರಾಮ ಪಂಚಾಯತ್ ಮಾಜಿ ಸದಸ್ಯೆ ಚಂದ್ರಾವತಿ ಆಚಾರ್ಯ ನಿಧನ

Suddi Udaya
error: Content is protected !!