22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಪುಂಜಾಲಕಟ್ಟೆ ಕರ್ನಾಟಕ ಪಬ್ಲಿಕ್ ಸ್ಕೂಲ್ ಪ್ರೌಢಶಾಲಾ ವಿಭಾಗ ಹಾಗೂ ಪದವಿಪೂರ್ವ ಕಾಲೇಜು ಜಂಟಿಯಾಗಿ ಗಣರಾಜ್ಯೋತ್ಸವ ಆಚರಣೆ

ಪುಂಜಾಲಕಟ್ಟೆ : ಕರ್ನಾಟಕ ಪಬ್ಲಿಕ್ ಸ್ಕೂಲ್ ಪುಂಜಾಲಕಟ್ಟೆ ಪ್ರೌಢಶಾಲಾ ವಿಭಾಗ ಹಾಗೂ ಪದವಿಪೂರ್ವ ಕಾಲೇಜು ಜಂಟಿಯಾಗಿ 75ನೇ ಗಣರಾಜ್ಯೋತ್ಸವವನ್ನು ಆಚರಿಸಲಾಯಿತು.

ಧ್ವಜಾರೋಹಣವನ್ನು ಪುಂಜಾಲಕಟ್ಟೆ ಶಾಲೆಯ ಹಿರಿಯ ವಿದ್ಯಾರ್ಥಿ ಸಂಘದ ಅಧ್ಯಕ್ಷರಾದ ಶ್ಯಾಮಪ್ರಸಾದ್ ಸಂಪಿಗೆತ್ತಾಯ ನೆರವೇರಿಸಿ ದೇಶದ ಅಸ್ಮಿತೆ ಕಾಪಾಡಿಕೊಳ್ಳಬೇಕಾದದ್ದು ನಮ್ಮೆಲ್ಲರ ಕರ್ತವ್ಯ ಆ ಕಾರ್ಯವನ್ನು ಪ್ರತಿಯೊಬ್ಬರು ಕಾಯ ವಾಚ ಮಾನಸ ಮಾಡಿ, ಮಾತ್ರವಲ್ಲದೆ ಒಕ್ಕೂಟ ವ್ಯವಸ್ಥೆಯನ್ನು ಬಲಪಡಿಸುವಲ್ಲಿ ಪ್ರತಿಯೊಬ್ಬರೂ ಕೂಡ ಕರ್ತವ್ಯ ಪ್ರಜ್ಞೆಯನ್ನು ನೆನಪಿಟ್ಟುಕೊಂಡು ಮಾಡಬೇಕು ಎಂದು ಹೇಳಿದರು.

ಸಂಸ್ಥೆಯ ಪ್ರಾಂಶುಪಾಲರಾದ ಡಾ. ಸರೋಜಿನಿ ಆಚಾರ್ ಸಮಾರಂಭಕ್ಕೆ ಶುಭ ಹಾರೈಸಿದರು, ಉಪ ಪ್ರಾಂಶುಪಾಲರಾದ ಉದಯ್ ಕುಮಾರ್ ಬಿ ಇವರು ಸಂದರ್ಭೋಚಿತವಾಗಿ ಮಾತನಾಡಿದರು.

ಕಾರ್ಯಕ್ರಮವನ್ನು ಪ್ರೌಢಶಾಲಾ ಶಿಕ್ಷಕರಾದ ನಿರಂಜನ್ ಜೈನ್ ನಿರೂಪಿಸಿ, ಧರಣೇಂದ್ರ ಕೆ ಧನ್ಯವಾದ ಸಲ್ಲಿಸಿ ಸರ್ವ ಉಪನ್ಯಾಸಕರ ಹಾಗೂ ಶಿಕ್ಷಕ ಮತ್ತು ಶಿಕ್ಷಕೇತರ ಬಂಧುಗಳ ಸಹಕಾರದೊಂದಿಗೆ ಸರ್ವ ವಿದ್ಯಾರ್ಥಿಗಳ ಪಾಲ್ಗೊಳ್ಳುವಿಕೆಯೊಂದಿಗೆ ಮಾದರಿ ಆಗಿ ನಡೆಯಿತು.

Related posts

ಶ್ರೀ ಕ್ಷೇತ್ರ ಚಂದ್ರಪುರ ಶಿಶಿಲಕ್ಕೆ ಪಂಚಕಲ್ಯಾಣಗೊಂಡ 24 ತೀರ್ಥಂಕರರ ಜಿನ ಬಿಂಬಗಳಿಗೆ ಅಭಿಷೇಕ

Suddi Udaya

ಸೌತಡ್ಕ ಶ್ರೀ ಮಹಾಗಣಪತಿ ದೇವಸ್ಥಾನದಲ್ಲಿ ಒಂದೇ ದಿನ 4300ರಷ್ಟು ಅವಲಕ್ಕಿ ಪಂಚಕಜ್ಜಾಯದ ಸೇವೆ

Suddi Udaya

ಅಡ್ಡ ಮತದಾನ ವಿವಾದ: ಬೇಲೂರು ಶಾಸಕ ಹೆಚ್. ಕೆ. ಸುರೇಶ್ ಧರ್ಮಸ್ಥಳದಲ್ಲಿ ಆಣೆ ಪ್ರಮಾಣ

Suddi Udaya

ಜಿಲ್ಲಾ ಒಕ್ಕಲಿಗರ ಗೌಡರ ಸೇವಾ ಸಂಘಕ್ಕೆ ಬೆಳ್ತಂಗಡಿಯಿಂದ ಐದು ಜನ ಆಯ್ಕೆ

Suddi Udaya

ಮಡಂತ್ಯಾರು ಗ್ರಾ.ಪಂ. ನ ಪ್ರಥಮ ಹಂತದ ಗ್ರಾಮ ಸಭೆ

Suddi Udaya

ಮದ್ದಡ್ಕ ಬಸ್ ನಿಲ್ದಾಣದ ಬದಿಯ ಚರಂಡಿಯಲ್ಲಿ ಕೊಳಚೆ ನೀರು ಶೇಖರಣೆ: ಸಂಬಂಧಪಟ್ಟವರು ಕೂಡಲೇ ಗಮನಹರಿಸುವಂತೆ ಸಾರ್ವಜನಿಕರ ಒತ್ತಾಯ

Suddi Udaya
error: Content is protected !!