25.7 C
ಪುತ್ತೂರು, ಬೆಳ್ತಂಗಡಿ
May 17, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಮರೋಡಿ ಶ್ರೀ ಉಮಾಮಹೇಶ್ವರ ದೇವಸ್ಥಾನದ ವರ್ಷಾವಧಿ ಜಾತ್ರೆಗೆ ಚಾಲನೆ: ಧ್ವಜಾರೋಹಣ, ಉತ್ಸವ ಬಲಿ, ಭಕ್ತರಿಂದ ಹಸಿರುವಾಣಿ ಹೊರೆಕಾಣಿಕೆ ಸಮರ್ಪಣೆ

ಮರೋಡಿ : ಮರೋಡಿ ಶ್ರೀ ಉಮಾಮಹೇಶ್ವರ ದೇವಸ್ಥಾನದ ವರ್ಷಾವಧಿ ಆಯನ ಮತ್ತು ಸಿರಿಗಳ ಜಾತ್ರೆ ಹಾಗೂ ಧಾರ್ಮಿಕ ಕಾರ್ಯಕ್ರಮವು ಜ.25ರಿಂದ ಪ್ರಾರಂಭಗೊಂಡು ಜ.29 ರವರೆಗೆ ಕ್ಷೇತ್ರದ ತಂತ್ರಿಗಳಾದ ಬ್ರಹ್ಮಶ್ರೀ ವೇದಮೂರ್ತಿ ಬಾಲಕೃಷ್ಣ ಪಾಂಗಾಣ್ಣಾಯರ ಹಾಗೂ ಪ್ರಧಾನ ಅರ್ಚಕ ಸುಬ್ರಹ್ಮಣ್ಯ ಪ್ರಸಾದ್ ರವರ ನೇತೃತ್ವದಲ್ಲಿ ನಡೆಯಲಿದೆ.

ಇಂದು ಬೆಳಿಗ್ಗೆ ದೇವತಾ ಪ್ರಾರ್ಥನೆ, ತೋರಣ ಮೂಹೂರ್ತ , ನವಕ ಪ್ರಧಾನ ಹೋಮ, ಕಲಶಾಭಿಷೇಕ, ಅಲಂಕಾರ ಪೂಜೆ, ಧ್ವಜಾರೋಹಣ , ಪ್ರಸಾದ ವಿತರಣೆ, ಅನ್ನಸಂತರ್ಪಣೆ ನಡೆಯಿತು. ಭಕ್ತರು ಶ್ರೀಕ್ಷೇತ್ರಕ್ಕೆ ಹಸಿರುವಾಣಿ ಹೊರೆಕಾಣಿಕೆ ಸಮರ್ಪಿಸಿದರು.

ಈ ಸಂದರ್ಭದಲ್ಲಿ ದೇವಸ್ಥಾನದ ಆಡಳಿತ ಮೊಕ್ತೇಸರ ದೇವೇಂದ್ರ ಹೆಗ್ಡೆ ಕೊಕ್ರಾಡಿ ಕೊಡಂಗೆಗುತ್ತು,ಕಾರ್ಯದರ್ಶಿ ಜಯಂತ್ ಕೋಟ್ಯಾನ್,ಆಡಳಿತ ಮಂಡಳಿ ಸದಸ್ಯರಾದ ರತ್ನಾಕರ ಬುಣ್ಣನ್, ವಿಜಯ ಅರಿಗ, ಎಂ.ಎಸ್ ಪೂಜಾರಿ, ದಿವಾಕರ ಹೆಗ್ಡೆ, ವಿಜಯ್ ಕುಮಾರ್ ಬಂಗ, ಎಂ. ಅಣ್ಣಪ್ಪ ಹೆಗ್ಡೆ, ರಾಧಕೃಷ್ಣ ಹೆಗ್ಡೆ, ಸುಜಯ ಹೆಗ್ಡೆ, ಶ್ರೀಧರ ಆಚಾರ್ಯ, ಸುರೇಂದ್ರ ಪೂಜಾರಿ, ಶ್ರೀಧರ ಪೂಜಾರಿ ಹಾಗೂ ಭಕ್ತರು, ಊರವರು ಉಪಸ್ಥಿತರಿದ್ದರು.

ಇಂದು ರಾತ್ರಿ ದೊಡ್ಡ ರಂಗಪೂಜೆ, ನಂತರ ಬಲಿ ಉತ್ಸವ, ಮಹಾಪೂಜೆ, ನಿತ್ಯಬಲಿ, ವ್ಯಾಘ್ರ ಚಾಮುಂಡಿ ಸಹಿತ ರಕ್ತೇಶ್ವರಿ, ಮೈಸಂದಾಯ ದೈವಗಳಿಗೆ ಗಗ್ಗರ ಸೇವೆ ಹಾಗೂ ಕುಣಿತ ಭಜನಾ ಕಾರ್ಯಕ್ರಮ ನಡೆಯಲಿದೆ.

Related posts

ಕುಂಟಾಲಪಳಿಕೆ ಅಂಗನವಾಡಿ ಕೇಂದ್ರದ 28ನೇ ವರ್ಷದ ಸಂಭ್ರಮ “ಮಕ್ಕಳ ಹಬ್ಬ

Suddi Udaya

8 ವರ್ಷದ ಹಿಂದೆ ನಿಗೂಢವಾಗಿ ನಾಪತ್ತೆಯಾದ ಗುರುವಾಯನಕರೆಯ ಏಕನಾಥ ಶೆಟ್ಟಿ ಸಹಿತ 29 ಸೈನಿಕರಿದ್ದ ಭಾರತೀಯ ಏರ್ ಫೋರ್ಸ್ ವಿಮಾನದ ಕುರುಹು ಪತ್ತೆ ವರದಿ

Suddi Udaya

ಸುಲ್ಕೇರಿ ಅ.ಹಿ. ಪ್ರಾ. ಶಾಲೆ, ಶ್ರೀರಾಮ ಪ್ರೌಢ ಶಾಲೆಯಲ್ಲಿ ವಿದ್ಯಾರ್ಥಿಗಳ ಪ್ರವೇಶೋತ್ಸವ ಕಾರ್ಯಕ್ರಮ

Suddi Udaya

ಮಾಸ್ತಿಕಲ್ಲು ಮಜಲು ಶ್ರೀ ಪಿಲಿಚಾಮುಂಡಿ ಹಾಗೂ ಸಹ ಪರಿವಾರ ದೈವಗಳ ನೇಮೋತ್ಸವ: ದೈವದ ಪಾತ್ರಿ ಸೇವೆಯಿಂದ ನಿವೃತ್ತಿ ಹೊಂದಿದ್ದ ಪೂವಾಜೆ ರುಕ್ಮಯ್ಯ ಗೌಡರಿಗೆ ಸನ್ಮಾನ

Suddi Udaya

ಶ್ರೀ ಕ್ಷೇತ್ರ ಓಡೀಲು ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಶರನ್ನವರಾತ್ರಿ ಪ್ರಯುಕ್ತ ಚಂಡಿಕಾ ಹೋಮ, ದುರ್ಗಾಪೂಜೆ

Suddi Udaya

ಬದುಕು ಕಟ್ಟೋಣ ಬನ್ನಿ ತಂಡದ ಸಂಚಾಲಕ ಮೋಹನ್ ಕುಮಾರ್ ನೇತೃತ್ವದಲ್ಲಿ “ಕೊಳಂಬೆ” ಕಿರುಚಿತ್ರ ನಿರ್ಮಾಣ: ವಿಕೆ ಸ್ಟುಡಿಯೋಸ್ ಕನ್ನಡ ಕಿರುಚಿತ್ರೋತ್ಸವ 2025, ‘ಕೊಳಂಬೆ’ ಬೆಸ್ಟ್ ಕಿರುಚಿತ್ರ ಡಬಲ್ ಪ್ರಶಸ್ತಿ,ಅನೀಶ್ ಅಮೀನ್ ಗೆ ಅತ್ಯುತ್ತಮ ನಿರ್ದೇಶಕ ಪ್ರಶಸ್ತಿ

Suddi Udaya
error: Content is protected !!