ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಮರೋಡಿ ಶ್ರೀ ಉಮಾಮಹೇಶ್ವರ ದೇವಸ್ಥಾನದ ವರ್ಷಾವಧಿ ಜಾತ್ರೆಗೆ ಚಾಲನೆ: ಧ್ವಜಾರೋಹಣ, ಉತ್ಸವ ಬಲಿ, ಭಕ್ತರಿಂದ ಹಸಿರುವಾಣಿ ಹೊರೆಕಾಣಿಕೆ ಸಮರ್ಪಣೆ

ಮರೋಡಿ : ಮರೋಡಿ ಶ್ರೀ ಉಮಾಮಹೇಶ್ವರ ದೇವಸ್ಥಾನದ ವರ್ಷಾವಧಿ ಆಯನ ಮತ್ತು ಸಿರಿಗಳ ಜಾತ್ರೆ ಹಾಗೂ ಧಾರ್ಮಿಕ ಕಾರ್ಯಕ್ರಮವು ಜ.25ರಿಂದ ಪ್ರಾರಂಭಗೊಂಡು ಜ.29 ರವರೆಗೆ ಕ್ಷೇತ್ರದ ತಂತ್ರಿಗಳಾದ ಬ್ರಹ್ಮಶ್ರೀ ವೇದಮೂರ್ತಿ ಬಾಲಕೃಷ್ಣ ಪಾಂಗಾಣ್ಣಾಯರ ಹಾಗೂ ಪ್ರಧಾನ ಅರ್ಚಕ ಸುಬ್ರಹ್ಮಣ್ಯ ಪ್ರಸಾದ್ ರವರ ನೇತೃತ್ವದಲ್ಲಿ ನಡೆಯಲಿದೆ.

ಇಂದು ಬೆಳಿಗ್ಗೆ ದೇವತಾ ಪ್ರಾರ್ಥನೆ, ತೋರಣ ಮೂಹೂರ್ತ , ನವಕ ಪ್ರಧಾನ ಹೋಮ, ಕಲಶಾಭಿಷೇಕ, ಅಲಂಕಾರ ಪೂಜೆ, ಧ್ವಜಾರೋಹಣ , ಪ್ರಸಾದ ವಿತರಣೆ, ಅನ್ನಸಂತರ್ಪಣೆ ನಡೆಯಿತು. ಭಕ್ತರು ಶ್ರೀಕ್ಷೇತ್ರಕ್ಕೆ ಹಸಿರುವಾಣಿ ಹೊರೆಕಾಣಿಕೆ ಸಮರ್ಪಿಸಿದರು.

ಈ ಸಂದರ್ಭದಲ್ಲಿ ದೇವಸ್ಥಾನದ ಆಡಳಿತ ಮೊಕ್ತೇಸರ ದೇವೇಂದ್ರ ಹೆಗ್ಡೆ ಕೊಕ್ರಾಡಿ ಕೊಡಂಗೆಗುತ್ತು,ಕಾರ್ಯದರ್ಶಿ ಜಯಂತ್ ಕೋಟ್ಯಾನ್,ಆಡಳಿತ ಮಂಡಳಿ ಸದಸ್ಯರಾದ ರತ್ನಾಕರ ಬುಣ್ಣನ್, ವಿಜಯ ಅರಿಗ, ಎಂ.ಎಸ್ ಪೂಜಾರಿ, ದಿವಾಕರ ಹೆಗ್ಡೆ, ವಿಜಯ್ ಕುಮಾರ್ ಬಂಗ, ಎಂ. ಅಣ್ಣಪ್ಪ ಹೆಗ್ಡೆ, ರಾಧಕೃಷ್ಣ ಹೆಗ್ಡೆ, ಸುಜಯ ಹೆಗ್ಡೆ, ಶ್ರೀಧರ ಆಚಾರ್ಯ, ಸುರೇಂದ್ರ ಪೂಜಾರಿ, ಶ್ರೀಧರ ಪೂಜಾರಿ ಹಾಗೂ ಭಕ್ತರು, ಊರವರು ಉಪಸ್ಥಿತರಿದ್ದರು.

ಇಂದು ರಾತ್ರಿ ದೊಡ್ಡ ರಂಗಪೂಜೆ, ನಂತರ ಬಲಿ ಉತ್ಸವ, ಮಹಾಪೂಜೆ, ನಿತ್ಯಬಲಿ, ವ್ಯಾಘ್ರ ಚಾಮುಂಡಿ ಸಹಿತ ರಕ್ತೇಶ್ವರಿ, ಮೈಸಂದಾಯ ದೈವಗಳಿಗೆ ಗಗ್ಗರ ಸೇವೆ ಹಾಗೂ ಕುಣಿತ ಭಜನಾ ಕಾರ್ಯಕ್ರಮ ನಡೆಯಲಿದೆ.

Related posts

ರೈತರ ಕೃಷಿ ಪಂಪು ಸೆಟ್ ಸ್ಥಾವರಗಳಿಗೆ ವಿದ್ಯುತ್ ಸಂಪರ್ಕ ಕಲ್ಪಿಸುವಂತೆ ಶಾಸಕ ಹರೀಶ್ ಪೂಂಜರಿಗೆ ಮನವಿ

Suddi Udaya

ಅಳದಂಗಡಿ ಗ್ರಾ.ಪಂ. ವತಿಯಿಂದ ವಿಶ್ವ ಪರಿಸರ ದಿನಾಚರಣೆ

Suddi Udaya

ಕುದ್ಯಾಡಿ ಶಾಲಾ ಮಕ್ಕಳಿಗೆ ಬ್ಯಾಗ್, ಸಮವಸ್ತ್ರ, ಕೊಡೆ ವಿತರಣೆ

Suddi Udaya

ಬೆಳಾಲು: ದಿ| ದಿನೇಶ್ ಪೂಜಾರಿ ಉಪ್ಪಾರು ಸ್ಮರಣಾರ್ಥವಾಗಿ ನಿರ್ಮಾಣಗೊಂಡಿರುವ ಅನಂತೋಡಿ ವೃತ್ತ ಲೋಕಾರ್ಪಣೆ

Suddi Udaya

ಉಜಿರೆ ಶ್ರೀ ಧ.ಮಂ. ಪ.ಪೂ. ಕಾಲೇಜಿನಲ್ಲಿ ಸಂಸ್ಕೃತ ಸಂಘ ಹಾಗೂ ಸಂಸ್ಕೃತ ಅಂತರಾಧ್ಯಯನ ವೃತ್ತಮ್ ಇವುಗಳ ಪದಾಧಿಕಾರಿಗಳ ಪದಪ್ರದಾನ ಸಮಾರಂಭ

Suddi Udaya

ಕೊಯ್ಯೂರು ಗೌಡರ ಯಾನೆ ಒಕ್ಕಲಿಗರ ಸೇವಾ ಸಮಿತಿಯ ಮಹಾಸಭೆ ಹಾಗೂ ಪದಾಧಿಕಾರಿಗಳ ಆಯ್ಕೆ

Suddi Udaya
error: Content is protected !!