25.5 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಲಾಯಿಲ: ಪಡ್ಲಾಡಿ ಶಾಲೆಯಲ್ಲಿ ಗಣರಾಜ್ಯೋತ್ಸವ ಆಚರಣೆ

ಲಾಯಿಲ : ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಲಾಯಿಲದಲ್ಲಿ 75ನೇ ಗಣರಾಜ್ಯೋತ್ಸವವನ್ನುಸಂಭ್ರಮದಿಂದ ಆಚರಿಸಲಾಯಿತು.

ಶಾಲಾ ಎಸ್.ಡಿ.ಎಮ್.ಸಿ, ನಾಮ ನಿರ್ದೇಶಕರು ಹಾಗೂ ಲಾಯಿಲ ಪಂಚಾಯತ್ ಸದಸ್ಯ ಪ್ರಸಾದ್ , ಮತ್ತು ಶಾಲಾ ಹಳೇ ವಿದ್ಯಾರ್ಥಿ ಶೇಖರ್ ಲಾಯಿಲ ಇವರು ಧ್ವಜಾರೋಹಣವನ್ನು ನೆರವೇರಿಸಿ, ಗಣರಾಜ್ಯೋತ್ಸವದ ಮಹತ್ವ ಮತ್ತು ಸಂವಿಧಾನದ ಬಗ್ಗೆ ಮಾಹಿತಿ ಕೊಟ್ಟರು.

ಹಳೆ ವಿದ್ಯಾರ್ಥಿಗಳಾದ ಅಚ್ಯುತ ಗೌಡ, ಮ್ಯಾಕ್ಸಿಂ, ಎಸ್.ಕೆಡಿ.ಆರ್.ಡಿಪಿ ಯೋಜನೆ ಸಂಯೋಜಕರಾದ ಶ್ರೀಮತಿ ಗೀತಾ ಮೇಡಂ, ಶಾಲಾ ಶಿಕ್ಷಕರು, ಅಡುಗೆ ಸಿಬ್ಬಂದಿಗಳು, ಊರವರು, ಹಾಗೂ ಮುದ್ದು ಪುಟಾಣಿಗಳು ಭಾಗವಹಿಸಿದ್ದರು.

ಶಾಲಾ ಮುಖ್ಯ ಶಿಕ್ಷಕಿ ರಾಜೇಶ್ವರಿ ಬಿಎಸ್ ಯವರು ಸ್ವಾಗತಿಸಿದ್ದ ಕಾರ್ಯಕ್ರಮಕ್ಕೆ ಸಹ ಶಿಕ್ಷಕ ಯೋಗೀಶ್ ಕಾರ್ಯಕ್ರಮ ನಿರೂಪಣೆ ಮಾಡಿ, ಧನ್ಯವಾದವಿತ್ತರು.


ಕಾರ್ಯಕ್ರಮಕ್ಕೆ ಲಾಯಿಲ ನ್ಯಾಯವಾದಿ ನೋಟರಿ ಪಬ್ಲಿಕ್ ಹಾಗೂ ಕರ್ನಾಟಕ ಅಭಿವೃದ್ಧಿ ಕಾರ್ಯಕ್ರಮಗಳ ಪರಿಣಾಮಕಾರಿ ಅನುಷ್ಠಾನ ಸಮಿತಿ ( ಕೆ ಡಿ ಪಿ ) ದಕ್ಷಿಣ ಕನ್ನಡ ಜಿಲ್ಲಾ ಸಮಿತಿ ಸದಸ್ಯ ಸಂತೋಷ್ ಕುಮಾರ್ ಸಿಹಿ ತಿಂಡಿ ವ್ಯವಸ್ಥೆಯನ್ನು ಮಾಡಿದರು.

Related posts

ಸೌತಡ್ಕ ಶ್ರೀ ಮಹಾಗಣಪತಿ ಕ್ಷೇತ್ರದಲ್ಲಿ ಆರಿಕೋಡಿಯ ಧರ್ಮದರ್ಶಿ ಹರೀಶ್ ಗೌಡರಿಂದ ರಂಗಪೂಜೆ

Suddi Udaya

ಮಿತ್ತಬಾಗಿಲು ಬಿ.ಕೆ ದೇವರಾಯರಿಗೆ ರೈತಪೀಠ ಪ್ರಶಸ್ತಿ

Suddi Udaya

ಜಿಲ್ಲಾ ಮಟ್ಟದ ಕ್ರೀಡಾಕೂಟ: ನಡ ಕಾಲೇಜಿಗೆ ತೃತೀಯ ಸ್ಥಾನ

Suddi Udaya

ಉಜಿರೆ- ಬೆಳಾಲು ರಸ್ತೆಯ ಕಿರಿಯಾಡಿ ಕ್ರಾಸ್ ಬಳಿ ಧರೆಗುರುಳಿದ 33 ಕೆವಿ ವಿದ್ಯುತ್ ಟವರ್ ದೊಂಡೋಲೆ ಪವರ್ ಪ್ರಾಜೆಕ್ಟ್ ನವರಿಗೆ ಸೇರಿದ ಕಾರು – ಬೈಕ್ ಜಖಂ: ಕಾರಿನೊಳಗೆ ಇದ್ದ ‌ಪವರ್ ಪ್ರಾಜೆಕ್ಟ್ ನ ಸಿಬ್ಬಂದಿ ಗಣೇಶ್ ಅಪಾಯದಿಂದ ಪಾರು

Suddi Udaya

ತೆಂಕಕಾರಂದೂರು ಆಲಡ್ಕ ಬಿಕ್ಕಿರ ನಿವಾಸಿ ದೇವದಾಸ ನಿಧನ

Suddi Udaya

ತುರ್ತು ಕರೆಗೆ ಸ್ಪಂದಿಸಿದ ಉಜಿರೆ-ಬೆಳಾಲು ಶೌರ್ಯ ವಿಪತ್ತು ನಿರ್ವಹಣಾ ಘಟಕದ ಸ್ವಯಂಸೇವಕರು

Suddi Udaya
error: Content is protected !!