25.5 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿಶಾಲಾ ಕಾಲೇಜುಶಿಕ್ಷಣ ಸಂಸ್ಥೆ

ಕೊಯ್ಯೂರು: ಸರಕಾರಿ ಪ್ರೌಢಶಾಲೆಯಲ್ಲಿ 75ನೇ ಗಣರಾಜ್ಯೋತ್ಸವ ಆಚರಣೆ

ಕೊಯ್ಯೂರು: ಸರಕಾರಿ ಪ್ರೌಢಶಾಲೆಯಲ್ಲಿ 75ನೇ ಗಣರಾಜ್ಯೋತ್ಸವ ಕಾರ್ಯಕ್ರಮ ನಡೆಯಿತು.

ಕೊಯ್ಯೂರು ಗ್ರಾಮ ಪಂಚಾಯತ್ ನಿಕಟಪೂರ್ವ ಅಧ್ಯಕ್ಷ ಜಗನ್ನಾಥ ಮಲೆಬೆಟ್ಟು ಧ್ವಜಾರೋಹಣ ನೆರವೇರಿಸಿ ಮಾತನಾಡಿ ನಾವು ಸಂವಿಧಾನದ ಆಶಯದಂತೆ ನಡೆದುಕೊಳ್ಳಬೇಕೆಂದರು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ಶಾಲಾ ಮುಖ್ಯೋಪಾಧ್ಯಾಯ ರಾಧಾಕೃಷ್ಣ ತಚ್ಚಮೆ ವಹಿಸಿ ಸಂವಿಧಾನ ಶಿಲ್ಪಿ ಅಂಬೇಡ್ಕರವರು ತನ್ನ ಛಲ ಮತ್ತು ಹಠದಿಂದ ಅಧ್ಯಯನ ಮಾಡಿ ಜ್ಞಾನ ಸಂಪಾದನೆ ಮಾಡಿರುವುದರಿಂದ ನಮ್ಮ ರಾಷ್ಟ್ರಕ್ಕೆ ಪರಿಪೂರ್ಣ ಸಂವಿಧಾನ ನೀಡುವಂತಾಯಿತು ಆದುದರಿಂದ ವಿದ್ಯಾರ್ಥಿಗಳು ಜ್ಞಾನ ಸಂಪಾದನೆಗೆ ಅಂಬೇಡ್ಕರವರ ಹಾದಿ ಹಿಡಿದರೆ ಸಂವಿಧಾನಕ್ಕೆ ನೀಡುವ ದೊಡ್ಡ ಗೌರವ ಎಂದರು.

ಮೋಹಾನಂದ ಗಣರಾಜ್ಯೋತ್ಸವದ ಬಗ್ಗೆ ಮಾಹಿತಿ ನೀಡಿದರು.

ಶಿಕ್ಷಕರಾದ ಶ್ರೀಮತಿ ಬೇಬಿ, ಶ್ರೀಮತಿ ದೀಪ್ತಿ ಹೆಗ್ಡೆ ,ಗೀತಾ ಉಡುಪಿ, ಸುಧಾಕರ ಶೆಟ್ಟಿ,ರಾಮಚಂದ್ರ ದೊಡಮನಿ, ಪ್ರವೀಣ್ ಕುಮಾರ್ ಹೆಚ್. ಉಪಸ್ಥಿತರಿದ್ದರು.

ವಿದ್ಯಾರ್ಥಿಗಳಾದ ಕು. ಮನೋಜ್ ಮತ್ತು ದನ್ವಿತ್ ಕಾರ್ಯಕ್ರಮ ನಿರೂಪಿಸಿದರು. ಸಂಜನಾ ಸ್ವಾಗತಿಸಿದರು. ನುಜೈರಾ ವಂದಿಸಿದರು.

Related posts

ಮುಂಡಾಜೆ ಬಂಟರ ಗ್ರಾಮ ಸಮಿತಿ ಸಭೆ

Suddi Udaya

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯಿಂದ ಐತಿಹಾಸಿಕ ಕಾರ್ಯಕ್ರಮ: ಸ್ವಸಹಾಯ ಸಂಘಗಳಿಗೆ ರೂ.605 ಕೋಟಿ ಲಾಭಾಂಶ ವಿತರಿಸಿದ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್

Suddi Udaya

ಬಂದಾರು-ಕುರಾಯ ಶ್ರೀ ಸದಾಶಿವ ದೇವರ ವಾರ್ಷಿಕ ಜಾತ್ರೋತ್ಸವ: ಗೊನೆ ಮುಹೂರ್ತ, ತೋರಣ ಮುಹೂರ್ತ, ಧ್ವಜಾರೋಹಣ

Suddi Udaya

ಶಾಲಾ ಮಕ್ಕಳ ರಕ್ಷಣೆಗೆ ಬೇಕಿದೆ ಮಚ್ಚಿನಕ್ಕೊಂದು ಬ್ಯಾರಿಕೇಡ್

Suddi Udaya

ಉಜಿರೆ: ಹಳೆಪೇಟೆ ನಿವಾಸಿ ಜಿ. ವಿಠಲದಾಸ್ ಪ್ರಭು ನಿಧನ

Suddi Udaya

ಬದ್ಯಾರು ಶ್ರೀ ಲೋಕನಾಥೇಶ್ವರ ದೇವರ ವಾರ್ಷಿಕ ಮಹೋತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya
error: Content is protected !!