ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿಶಾಲಾ ಕಾಲೇಜುಶಿಕ್ಷಣ ಸಂಸ್ಥೆ

ಕೊಯ್ಯೂರು: ಸರಕಾರಿ ಪ್ರೌಢಶಾಲೆಯಲ್ಲಿ 75ನೇ ಗಣರಾಜ್ಯೋತ್ಸವ ಆಚರಣೆ

ಕೊಯ್ಯೂರು: ಸರಕಾರಿ ಪ್ರೌಢಶಾಲೆಯಲ್ಲಿ 75ನೇ ಗಣರಾಜ್ಯೋತ್ಸವ ಕಾರ್ಯಕ್ರಮ ನಡೆಯಿತು.

ಕೊಯ್ಯೂರು ಗ್ರಾಮ ಪಂಚಾಯತ್ ನಿಕಟಪೂರ್ವ ಅಧ್ಯಕ್ಷ ಜಗನ್ನಾಥ ಮಲೆಬೆಟ್ಟು ಧ್ವಜಾರೋಹಣ ನೆರವೇರಿಸಿ ಮಾತನಾಡಿ ನಾವು ಸಂವಿಧಾನದ ಆಶಯದಂತೆ ನಡೆದುಕೊಳ್ಳಬೇಕೆಂದರು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ಶಾಲಾ ಮುಖ್ಯೋಪಾಧ್ಯಾಯ ರಾಧಾಕೃಷ್ಣ ತಚ್ಚಮೆ ವಹಿಸಿ ಸಂವಿಧಾನ ಶಿಲ್ಪಿ ಅಂಬೇಡ್ಕರವರು ತನ್ನ ಛಲ ಮತ್ತು ಹಠದಿಂದ ಅಧ್ಯಯನ ಮಾಡಿ ಜ್ಞಾನ ಸಂಪಾದನೆ ಮಾಡಿರುವುದರಿಂದ ನಮ್ಮ ರಾಷ್ಟ್ರಕ್ಕೆ ಪರಿಪೂರ್ಣ ಸಂವಿಧಾನ ನೀಡುವಂತಾಯಿತು ಆದುದರಿಂದ ವಿದ್ಯಾರ್ಥಿಗಳು ಜ್ಞಾನ ಸಂಪಾದನೆಗೆ ಅಂಬೇಡ್ಕರವರ ಹಾದಿ ಹಿಡಿದರೆ ಸಂವಿಧಾನಕ್ಕೆ ನೀಡುವ ದೊಡ್ಡ ಗೌರವ ಎಂದರು.

ಮೋಹಾನಂದ ಗಣರಾಜ್ಯೋತ್ಸವದ ಬಗ್ಗೆ ಮಾಹಿತಿ ನೀಡಿದರು.

ಶಿಕ್ಷಕರಾದ ಶ್ರೀಮತಿ ಬೇಬಿ, ಶ್ರೀಮತಿ ದೀಪ್ತಿ ಹೆಗ್ಡೆ ,ಗೀತಾ ಉಡುಪಿ, ಸುಧಾಕರ ಶೆಟ್ಟಿ,ರಾಮಚಂದ್ರ ದೊಡಮನಿ, ಪ್ರವೀಣ್ ಕುಮಾರ್ ಹೆಚ್. ಉಪಸ್ಥಿತರಿದ್ದರು.

ವಿದ್ಯಾರ್ಥಿಗಳಾದ ಕು. ಮನೋಜ್ ಮತ್ತು ದನ್ವಿತ್ ಕಾರ್ಯಕ್ರಮ ನಿರೂಪಿಸಿದರು. ಸಂಜನಾ ಸ್ವಾಗತಿಸಿದರು. ನುಜೈರಾ ವಂದಿಸಿದರು.

Related posts

ಬೆಳ್ತಂಗಡಿಯಲ್ಲಿ ಸಂವಿಧಾನ ಜಾಗೃತಿ ಜಾಥದ ಅಂಗವಾಗಿ ಬೈಕ್ ರ್ಯಾಲಿ

Suddi Udaya

ಶಿಬಾಜೆ ಶ್ರೀ ಕ್ಷೇತ್ರ ಮೊಂಟೆತ್ತಡ್ಕ ದುರ್ಗಾಪರಮೇಶ್ವರೀ ದೇವಸ್ಥಾನದಲ್ಲಿ ಶತಚಂಡಿಕಾ ಯಾಗ: ಡಾ. ಡಿ ವೀರೇಂದ್ರ ಹೆಗ್ಗಡೆಯವರಿಗೆ ಆಹ್ವಾನ

Suddi Udaya

ನ.14: ಮಡಂತ್ಯಾರು ಪ್ರಾ.ಕೃ.ಪ. ಸಹಕಾರ ಸಂಘ ನೇತೃತ್ವದಲ್ಲಿ ಜಿಲ್ಲಾ ಮಟ್ಟದ 72ನೇ ಅಖಿಲ ಭಾರತ ಸಹಕಾರ ಸಪ್ತಾಹದ ಉದ್ಘಾಟನೆ

Suddi Udaya

ಬೆಳ್ತಂಗಡಿ : ಅಕ್ರಮವಾಗಿ ಲಾರಿಯಲ್ಲಿ ಮರ ಸಾಗಾಟ ಪತ್ತೆ : ಮಂಗಳೂರು ಅರಣ್ಯ ಸಂಚಾರಿ ದಳದಿಂದ ಕಾರ್ಯಾಚರಣೆ

Suddi Udaya

ಉಜಿರೆ ಎಸ್.ಡಿ.ಎಮ್ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಶಾಲಾ ವಿದ್ಯಾರ್ಥಿ ಸಂಸತ್ತಿನ ಉದ್ಘಾಟನಾ ಕಾರ್ಯಕ್ರಮ

Suddi Udaya

ಪ್ರಧಾನಮಂತ್ರಿ ಬಗ್ಗೆ ಅವಹೇಳನಕಾರಿ ಹೇಳಿಕೆ ಖಂಡಿಸಿ ಪ್ರತಿಭಟನೆ

Suddi Udaya
error: Content is protected !!