ಫೆ.15 ರಿಂದ 22: ಕೊರಿಂಜ ಶ್ರೀ ಪಂಚಲಿಂಗೇಶ್ವರ ದೇವಸ್ಥಾನದ ಬ್ರಹ್ಮಕಲಶೋತ್ಸವ: ಧರ್ಮಸ್ಥಳ ಹೇಮಾವತಿ ವೀ. ಹೆಗ್ಗಡೆಯವರಿಂದ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

Updated on:

ಉರುವಾಲು :ಕೊರಿಂಜ ಶ್ರೀ ಪಂಚಲಿಂಗೇಶ್ವರ ದೇವಸ್ಥಾನದಲ್ಲಿ ಫೆ.15 ರಿಂದ 22 ರವರಗೆ ನಡೆಯಲಿರುವ ಬ್ರಹ್ಮಕಲಶೋತ್ಸವದ ಆಮಂತ್ರಣ ಪತ್ರಿಕೆಯನ್ನು ಧರ್ಮಸ್ಥಳದ ಹೇಮಾವತಿ ವೀ. ಹೆಗ್ಗಡೆಯವರಿಂದ ಜ.26 ರಂದು ಬಿಡುಗಡೆಗೊಳಿಸಿದರು.

ಈ ಸಂದರ್ಭದಲ್ಲಿ ದೇವಸ್ಥಾನದ ಆಡಳಿತ ಮೋಕ್ತೇಸರರು ಯೋಗೀಶ್ ಪೂಜಾರಿ ಕಡ್ತಿಲ, ಜೀರ್ಣೋದ್ಧಾರ ಸಮಿತಿ ಗೌರವಾಧ್ಯಕ್ಷ ಡಾ| ಶ್ರೀ ಕೃಷ್ಣರಾಜ ಉರುವಾಲು, ಅಧ್ಯಕ್ಷ ದಾಸಪ್ಪ ಗೌಡ, ಕಾರ್ಯದರ್ಶಿ ಸುನೀಲ್ ಅಣಾವು, ಪ್ರಧಾನ ಕಾರ್ಯದರ್ಶಿ ಪ್ರಸಾದ್ ಕಡ್ತಿಲ, ಕಾರ್ಯದರ್ಶಿ ವಿಜಯ ಕುಮಾರ್ ಕಲ್ಲಳಿಕೆ, ಕೋಶಾಧಿಕಾರಿ ಉದಯ ಕಾಳಿಂಜ, ಬ್ರಹ್ಮಕಲಶೋತ್ಸವ ಸಮಿತಿ, ಜೀರ್ಣೋದ್ಧಾರ ಸಮಿತಿಯ ಸದಸ್ಯರು ಉಪಸ್ಥಿತರಿದ್ದರು.

Leave a Comment

error: Content is protected !!