ಬೆಳ್ತಂಗಡಿ ತಾಲೂಕು ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿ ವತಿಯಿಂದ ಬೆಳ್ತಂಗಡಿ ತಾಲೂಕು ಮಟ್ಟದಲ್ಲಿ ಗಣರಾಜ್ಯೋತ್ಸವ ದಿನಾಚರಣೆ

Suddi Udaya

ಬೆಳ್ತಂಗಡಿ ತಾಲೂಕು ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿ ವತಿಯಿಂದ ಬೆಳ್ತಂಗಡಿ ತಾಲೂಕು ಮಟ್ಟದ ಗಣರಾಜ್ಯೋತ್ಸವ ದಿನಾಚರಣೆಯನ್ನು ಇಂದು ಬೆಳ್ತಂಗಡಿ ತಾಲೂಕು ಆಡಳಿತ ಸೌಧದಲ್ಲಿ ಆಚರಿಸಲಾಯಿತು.

ಬೆಳ್ತಂಗಡಿ ತಹಶೀಲ್ದಾರು ಪೃಥ್ವಿ ಸಾನಿಕಂ ರವರು ಧ್ವಜರೋಹಣ ಮಾಡಿ ಶುಭ ಸಂದೇಶವನ್ನು ನೀಡಿದರು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ಬೆಳ್ತಂಗಡಿ ಶಾಸಕ ಹರೀಶ್ ಪೂಂಜ ವಹಿಸಿ , ಶುಭಹಾರೈಸಿದರು. ಪ್ರದಾನ ಭಾಷಣಕಾರರಾಗಿ ನಡ ಸ.ಪ.ಪೂ. ಕಾಲೇಜಿನ ಉಪನ್ಯಾಸಕ ಮೋಹನ್ ಗೌಡ ಭಾಗವಹಿಸಿದರು.

ಮುಖ್ಯ ಅತಿಥಿಗಳಾಗಿ ವಿಧಾನ ಪರಿಷತ್ ಶಾಸಕ ಪ್ರತಾಪ್ ಸಿಂಹ ನಾಯಕ್ ಭಾಗವಹಿಸಿದ್ದರು. ವೇದಿಕೆಯಲ್ಲಿ ಗೃಹರಕ್ಷಕದಳ ಘಟಕಾಧಿಕಾರಿ ಜಯಾನಂದ ಲಾಯಿಲ, ಕ್ಷೇತ್ರ ಶಿಕ್ಷಣಾಧಿಕಾರಿ ತಾರಾಕೇಸರಿ, ಬಿಸಿಎಂ ಇಲಾಖೆಯ ಜೋಸೆಫ್,ಸಮಾಜಕಲ್ಯಾಣಾಧಿಕಾರಿ ಹೇಮಚಂದ್ರ, ಪಶುಸಂಗೋಪಣಾ ಇಲಾಖೆ ಅಧಿಕಾರಿ ಮಂಜುನಾಯ್ಕ, ಬಿಸಿಎಂ ಇಲಾಖೆ ಜೋಸೆಫ್, ಕ್ಷೇತ್ರ ಶಿಕ್ಷಣಾಧಿಕಾರಿ ತಾರಾಕೇಸರಿ, ನ.ಪಂ. ಮುಖ್ಯಾಧಿಕಾರಿ ರಾಜೇಶ್, ತೋಟಗಾರಿಕೆ ಇಲಾಖೆಯ ಚಂದ್ರಶೇಖರ್, ವೇಣೂರು ಐಟಇಐಯ ಜಾಕೋಬ್, ಎಲ್ಲಾ ಗ್ರಾ.ಪಂ. ಅಧ್ಯಕ್ಷರು, ಉಪಾಧ್ಯಕ್ಷರು. ಸದಸ್ಯರು ಹಾಗೂ ತಾಲೂಕಿನ ವಿವಿಧ ಸಂಘ ಸಂಸ್ಥೆಗಳ ಪದಾಧಿಕಾರಿಗಳು ಉಪಸ್ಥಿತರಿದ್ದರು.

ಕಾರ್ಯಕ್ರಮದಲ್ಲಿ ಶಾಲಾ ಮಕ್ಕಳ ಸಾಂಸ್ಕೃತಿಕ ಕಾರ್ಯಕ್ರಮವು ನಡೆಯಿತು.
ತಾ.ಪಂ. ಕಾರ್‍ಯನಿರ್ವಹಣಾಧಿಕಾರಿ ಭವಾನಿ ಶಂಕರ್ ಸ್ವಾಗತಿಸಿದರು. ಶಿಕ್ಷಕರಾದ ರಾಜೇಶ್ ಮತ್ತು ಮಂಗಳಾ ಕಾಯ೯ಕ್ರಮ ನಿರೂಪಿಸಿದರು.

Leave a Comment

error: Content is protected !!