April 2, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಅಯೋಧ್ಯೆಯಲ್ಲಿ ಪ್ರಭು ಶ್ರೀರಾಮಚಂದ್ರನ ಪ್ರಾಣ ಪ್ರತಿಷ್ಠೆ: ವಿಜಯ ಕುಮಾರ್ ಜೈನ್ ಹಾಗೂ ಅರುಣ್ ಕುಮಾರ್ ಜೈನ್ ರವರಿಂದ ಒಂದೇ ದಿನ 22 ದೇವಸ್ಥಾನ, ಬಸದಿ, ದೈವಸ್ಥಾನ ಹಾಗೂ ಮಂದಿರ ಭೇಟಿ

ಅಳದಂಗಡಿ : ಅಯೋಧ್ಯೆಯಲ್ಲಿ ಪ್ರಭು ಶ್ರೀರಾಮಚಂದ್ರನ ಪ್ರಾಣ ಪ್ರತಿಷ್ಠೆ ದಿನದಂದು 22 ಕ್ಷೇತ್ರ ಸಂದರ್ಶನ ಇದಾಗಿದ್ದು ಆಮಂತ್ರಣ ಪರಿವಾರದ ವಿಜಯ ಕುಮಾರ್ ಜೈನ್ ಮತ್ತು ಅಳದಂಗಡಿ ಮಹಾವೀರಧಾಮದ ಅರುಣ್ ಕುಮಾರ್ ಜೈನ್ ರವರು ಸುಮಾರು 22 ದೈವ ದೇವರು ಹಾಗೂ ಮಂದಿರ ಭೇಟಿ ನೀಡಿದರು.

ಮುಂಜಾನೆ ಅಳದಂಗಡಿ ಭಗವಾನ್ ಆದಿನಾಥ ಸ್ವಾಮೀ ಬಸದಿ ಸಂದರ್ಶನ ಮಾಡಿ ಅಲ್ಲಿ ದೇವರಿಗೆ ವಿಶೇಷ ಪೂಜೆ ಸಲ್ಲಿಸಿ, ನಂತರ ಕ್ರಮವಾಗಿ ದೇವಸ್ಥಾನಗಳು, ಬಸದಿಗಳು, ದೈವಸ್ಥಾನ, ಮಾರಿಗುಡಿ, ಮಂದಿರಗಳ ಸಂದರ್ಶನ ಮಾಡಿ ಕೊನೆಯಲ್ಲಿ ಶ್ರೀ ಧರ್ಮಸ್ಥಳ ಮಂಜುನಾಥ ಸ್ವಾಮೀ ದೇವರ ಆಶೀರ್ವಾದ ಪಡೆದು ನಂತರ ಕನ್ಯಾಡಿ ಶ್ರೀರಾಮ ಮಂದಿರಕ್ಕೆ ತೆರಳಿ ಪ್ರಾರ್ಥನೆ ಸಲ್ಲಿಸಿ ಇಲ್ಲಿಯ ಸ್ವಾಮೀಜಿಯವರ ಆಶೀರ್ವಾದ ಪಡೆದು ಕೊಳ್ಳಲಾಯಿತು.


ವಿಶೇಷ ದಿನದ 22 ಕ್ಷೇತ್ರಗಳ ಸಂದರ್ಶನ ಮಾಡಿ ಲೋಕಕ್ಕೆ ಒಳ್ಳೇಯದಾಗಲಿ ಎಲ್ಲರೂ ಆರೋಗ್ಯವಂತರಾಗಿ ಪ್ರೀತಿ ಸಹಬಾಳ್ವೆ ನೆಮ್ಮದಿಯಿಂದ ಬದುಕಬೇಕು ಎಂದು ಪ್ರಾರ್ಥಿಸಿದರು..

Related posts

ಉಜಿರೆ : ಎಸ್. ಡಿ. ಎಂ. ಪದವಿ ಪೂರ್ವ ಕಾಲೇಜಿನಲ್ಲಿ ರೋವರ್ಸ್ ರೇಂಜರ್ಸ್ ವಿದ್ಯಾರ್ಥಿಗಳಿಗೆ ಒಂದು ದಿನದ ಪುನಶ್ಚೇತನ ಶಿಬಿರ

Suddi Udaya

ತಾಲೂಕು ಮಟ್ಟದ ಕರಾಟೆ ಸ್ಪರ್ಧೆಯಲ್ಲಿ ಸಂಜನಾ ಎಂ.ಡಿ ಪ್ರಥಮ ಸ್ಥಾನ ಪಡೆದು ಜಿಲ್ಲಾ ಮಟ್ಟಕ್ಕೆ ಆಯ್ಕೆ

Suddi Udaya

ಗೇರು ಕಟ್ಟೆ ಹಾಲು ಉತ್ಪಾದಕರ ಸಹಕಾರ ಸಂಘದ ನೂತನ ಕಟ್ಟಡ ಶಿಲನ್ಯಾಸ

Suddi Udaya

ಬೆಳಾಲು ಪೆರಿಯಡ್ಕ ಶಾಲಾ ಅಭಿವೃದ್ದಿಗೆ ಸಕಲ ಸೌಲಭ್ಯಗಳನ್ನು ಒದಗಿಸಿದ ಬದುಕು ಕಟ್ಟೋಣ ಬನ್ನಿ ಸೇವಾ ಟ್ರಸ್ಟ್ ನ ಸಂಚಾಲಕ ಮೋಹನ್ ಕುಮಾರ್ ಅವರಿಗೆ ಸನ್ಮಾನ

Suddi Udaya

ಎ.3ರಿಂದ ಎ.7: ಮೇಲಂತಬೆಟ್ಟು ಶ್ರೀ ದೇವಿ ಭಗವತಿ ಅಮ್ಮನವರ ದೇವಸ್ಥಾನದ ಪುನರ್ ಪ್ರತಿಷ್ಠಾ ಅಷ್ಟಬಂಧ ಬ್ರಹ್ಮಕಲಶೋತ್ಸವ

Suddi Udaya

ಬೆಳ್ತಂಗಡಿ ತಾಲೂಕು ಮಹಿಳಾ ಸಹಕಾರಿ ಸಂಘದ ವಾರ್ಷಿಕ ಮಹಾಸಭೆ

Suddi Udaya
error: Content is protected !!