25.5 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಅಯೋಧ್ಯೆಯಲ್ಲಿ ಪ್ರಭು ಶ್ರೀರಾಮಚಂದ್ರನ ಪ್ರಾಣ ಪ್ರತಿಷ್ಠೆ: ವಿಜಯ ಕುಮಾರ್ ಜೈನ್ ಹಾಗೂ ಅರುಣ್ ಕುಮಾರ್ ಜೈನ್ ರವರಿಂದ ಒಂದೇ ದಿನ 22 ದೇವಸ್ಥಾನ, ಬಸದಿ, ದೈವಸ್ಥಾನ ಹಾಗೂ ಮಂದಿರ ಭೇಟಿ

ಅಳದಂಗಡಿ : ಅಯೋಧ್ಯೆಯಲ್ಲಿ ಪ್ರಭು ಶ್ರೀರಾಮಚಂದ್ರನ ಪ್ರಾಣ ಪ್ರತಿಷ್ಠೆ ದಿನದಂದು 22 ಕ್ಷೇತ್ರ ಸಂದರ್ಶನ ಇದಾಗಿದ್ದು ಆಮಂತ್ರಣ ಪರಿವಾರದ ವಿಜಯ ಕುಮಾರ್ ಜೈನ್ ಮತ್ತು ಅಳದಂಗಡಿ ಮಹಾವೀರಧಾಮದ ಅರುಣ್ ಕುಮಾರ್ ಜೈನ್ ರವರು ಸುಮಾರು 22 ದೈವ ದೇವರು ಹಾಗೂ ಮಂದಿರ ಭೇಟಿ ನೀಡಿದರು.

ಮುಂಜಾನೆ ಅಳದಂಗಡಿ ಭಗವಾನ್ ಆದಿನಾಥ ಸ್ವಾಮೀ ಬಸದಿ ಸಂದರ್ಶನ ಮಾಡಿ ಅಲ್ಲಿ ದೇವರಿಗೆ ವಿಶೇಷ ಪೂಜೆ ಸಲ್ಲಿಸಿ, ನಂತರ ಕ್ರಮವಾಗಿ ದೇವಸ್ಥಾನಗಳು, ಬಸದಿಗಳು, ದೈವಸ್ಥಾನ, ಮಾರಿಗುಡಿ, ಮಂದಿರಗಳ ಸಂದರ್ಶನ ಮಾಡಿ ಕೊನೆಯಲ್ಲಿ ಶ್ರೀ ಧರ್ಮಸ್ಥಳ ಮಂಜುನಾಥ ಸ್ವಾಮೀ ದೇವರ ಆಶೀರ್ವಾದ ಪಡೆದು ನಂತರ ಕನ್ಯಾಡಿ ಶ್ರೀರಾಮ ಮಂದಿರಕ್ಕೆ ತೆರಳಿ ಪ್ರಾರ್ಥನೆ ಸಲ್ಲಿಸಿ ಇಲ್ಲಿಯ ಸ್ವಾಮೀಜಿಯವರ ಆಶೀರ್ವಾದ ಪಡೆದು ಕೊಳ್ಳಲಾಯಿತು.


ವಿಶೇಷ ದಿನದ 22 ಕ್ಷೇತ್ರಗಳ ಸಂದರ್ಶನ ಮಾಡಿ ಲೋಕಕ್ಕೆ ಒಳ್ಳೇಯದಾಗಲಿ ಎಲ್ಲರೂ ಆರೋಗ್ಯವಂತರಾಗಿ ಪ್ರೀತಿ ಸಹಬಾಳ್ವೆ ನೆಮ್ಮದಿಯಿಂದ ಬದುಕಬೇಕು ಎಂದು ಪ್ರಾರ್ಥಿಸಿದರು..

Related posts

ನಿಡ್ಲೆ: ರಸ್ತೆಗೆ ಮರದ ಗೆಲ್ಲು ಬಿದ್ದು ಸಂಚಾರ ಅಸ್ತವ್ಯಸ್ಥ

Suddi Udaya

ಇಳಂತಿಲ : ಸಂವಿಧಾನ ಜಾಗೃತಿ ಜಾಥಾ

Suddi Udaya

ಚಂದ್ರಯಾನ-3 ಉಪಗ್ರಹ ಹೊತ್ತ ನೌಕೆ ಯಶಸ್ವಿ ಉಡಾವಣೆ

Suddi Udaya

ಕರು ಕೊಂದ ಚಿರತೆಯ ಸೆರೆ ಕಾರ್ಯ ಆರಂಭಿಸಿದ ಅರಣ್ಯ ಇಲಾಖೆ

Suddi Udaya

ಬರೆಂಗಾಯದಲ್ಲಿ ಅಡಿಕೆ ಮತ್ತು ಕಾಳುಮೆಣಸು ಖರೀದಿ ಉಪಕೇಂದ್ರ ಆರಂಭ

Suddi Udaya

ಬೆಳ್ತಂಗಡಿ ತಾಲೂಕಿನ ಮೂವರು ಶಿಕ್ಷಕರಿಗೆ ಜಿಲ್ಲಾ ಮಟ್ಟದ ಉತ್ತಮ ಶಿಕ್ಷಕ ಪ್ರಶಸ್ತಿ

Suddi Udaya
error: Content is protected !!