July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಉಜಿರೆ: ಬೆನಕ ಆಸ್ಪತ್ರೆಯಲ್ಲಿ ರಕ್ತದಾನ ಶಿಬಿರ


ಉಜಿರೆ : ದಾನಗಳಲ್ಲಿ ಶ್ರೇಷ್ಠ ದಾನ ರಕ್ತದಾನ ಎಂಬ ಮಾತಿದೆ. ರಕ್ತಕ್ಕೆ ಜಾತಿ ಇಲ್ಲ. ಯಾವುದೇ ಓರ್ವ ರೋಗಿಗೆ ಅಗತ್ಯವಾಗಿ ರಕ್ತ ಬೇಕಾದಾಗ ಅವನ ಜಾತಿ ನೋಡಿ ರಕ್ತ ನೀಡಲಾಗುವುದಿಲ್ಲ. ನಾವು ಮಾಡುವ ರಕ್ತದಾನಕ್ಕೆ ಮತ್ತೊಬ್ಬರ ಜೀವವನ್ನು ಉಳಿಸುವ ಶಕ್ತಿಯಿದೆ ಎಂದು ಉಜಿರೆ ಬೆನಕ ಆಸ್ಪತ್ರೆಯ ವೈದ್ಯಕೀಯ ನಿರ್ದೇಶಕ ಡಾ.ಗೋಪಾಲಕೃಷ್ಣ ಕೆ. ಅಭಿಪ್ರಾಯಪಟ್ಟರು.


ಡಾ. ಗೋಪಾಲಕೃಷ್ಣ.ಕೆ ಅವರು ಉಜಿರೆಯ ಬೆನಕ ಹೆಲ್ತ್ ಸೆಂಟರ್, ಬೆಳ್ತಂಗಡಿ ರೋಟರಿ ಕ್ಲಬ್, ಸೇವಾಭಾರತಿ ಕನ್ಯಾಡಿ, ಹವ್ಯಕ ವಲಯ ಉಜಿರೆ ಹಾಗೂ ಬೆಳ್ತಂಗಡಿ ತಾಲೂಕು ಔಷಧಿ ವ್ಯಾಪಾರಸ್ಥರ ಸಂಘ ಇವರ ಸಂಯುಕ್ತ ಆಶ್ರಯದಲ್ಲಿ ಭಾರತೀಯ ರೆಡ್ ಕ್ರಾಸ್ ಸೊಸೈಟಿ ಹಾಗೂ ಲೇಡಿಗೋಶನ್ ಆಸ್ಪತ್ರೆ ಮಂಗಳೂರು ಇವರ ಸಹಯೋಗದಲ್ಲಿ ಗಣರಾಜ್ಯೋತ್ಸವದ ಶುಭವಸರದಲ್ಲಿ ಉಜಿರೆಯ ಬೆನಕ ಹೆಲ್ತ್ ಸೆಂಟರಿನಲ್ಲಿ ನಡೆದ ರಕ್ತದಾನ ಶಿಬಿರದ ಉದ್ಘಾಟನಾ ಸಮಾರಂಭದ ಅಧ್ಯಕ್ಷತೆ ವಹಿಸಿ ಮಾತನಾಡುತ್ತಿದ್ದರು.


ಡಾ.ಗೋಪಾಲಕೃಷ್ಣ ಅವರು ಮಾತನಾಡುತ್ತಾ ರಕ್ತದಾನ ಜೀವ ಹೋಗುವ ಸ್ಥಿತಿಯಲ್ಲಿರುವ ರೋಗಿಯನ್ನು ಹೆಚ್ಚು ಕಾಲ ಬದುಕಲು ಮತ್ತು ಉನ್ನತ ಮಟ್ಟದ ಜೀವನ ಸಾಗಿಸಲು ನೆರವಾಗುತ್ತದೆ. ಗಾಯಗೊಂಡವರಿಗೆ, ಶಸ್ತ್ರಚಿಕಿತ್ಸೆಗೆ ಒಳಗಾದವರಿಗೆ ಮತ್ತು ಮಾರಣಾಂತಿಕ ಕಾಯಿಲೆಯಿಂದ ಬಳಲುತ್ತಿರುವ ರೋಗಿಗಳಿಗೆ ಯಾವುದೇ ಪರಿಸ್ಥಿತಿಯಲ್ಲಿ ರಕ್ತದ ಅವಶ್ಯಕತೆ ಇರುತ್ತದೆ ಎಂದು ಅಭಿಪ್ರಾಯಪಟ್ಟರು.


ರಕ್ತದಾನ ಶಿಬಿರವನ್ನು ಉದ್ಘಾಟಿಸಿದ ಬೆಳ್ತಂಗಡಿ ರೋಟರಿ ಕ್ಲಬ್ ನ ಅಧ್ಯಕ್ಷ ಅನಂತ ಭಟ್ ಮಚ್ಚಿಮಲೆ ಅವರು ಮಾತನಾಡುತ್ತಾ ರಕ್ತದಾನ ಮಾಡುವುದರಿಂದ ಕೇವಲ ಸ್ವೀಕರಿಸಿದವರಿಗೆ ಮಾತ್ರ ಪ್ರಯೋಜನವಾಗುವುದಿಲ್ಲ, ರಕ್ತದಾನ ಮಾಡಿದವರಿಗೂ ಹೆಚ್ಚು ಸಹಾಯವಾಗುತ್ತದೆ ಎಂದು ತಿಳಿಸಿದರು.


ವೇದಿಕೆಯಲ್ಲಿ ಸೇವಾಭಾರತಿ ಕನ್ಯಾಡಿಯ ಅಧ್ಯಕ್ಷರಾದ ಶ್ರೀಮತಿ ಸ್ವರ್ಣ ಗೌರಿ, ಬೆಳ್ತಂಗಡಿ ತಾಲೂಕು ಔಷಧಿ ವ್ಯಾಪಾರಸ್ಥರ ಸಂಘದ ಅಧ್ಯಕ್ಷ ಶ್ರೀಧರ.ಕೆ.ವಿ, ಉಜಿರೆ ಹವ್ಯಕ ವಲಯದ ಅಧ್ಯಕ್ಷರಾದ ಶ್ಯಾಮ್ ಭಟ್ ಅತ್ತಾಜೆ, ರೆಡ್ ಕ್ರಾಸ್ ಸೊಸೈಟಿ ಬೆಳ್ತಂಗಡಿಯ ಶಿವಕುಮಾರ್, ಮತ್ತು ಡಾ.ಭಾರತಿ.ಜಿ.ಕೆ ಉಪಸ್ಥಿತರಿದ್ದು ಶುಭಹಾರೈಸಿದರು.
ಬೆನಕ ಆಸ್ಪತ್ರೆಯ ಸಾರ್ವಜನಿಕ ಸಂಪರ್ಕಾಧಿಕಾರಿ ಎಸ್.ಜಿ.ಭಟ್ ನಿರ್ವಹಿಸಿದ ಕಾರ್ಯಕ್ರಮದಲ್ಲಿ ಬೆಳ್ತಂಗಡಿ ರೆಡ್ ಕ್ರಾಸ್ ಸೊಸೈಟಿಯ ಕಾರ್ಯದರ್ಶಿ ಯಶವಂತ ಪಟ್ವರ್ಧನ್ ವಂದಿಸಿದರು.


ಭಾರತೀಯ ರೆಡ್ ಕ್ರಾಸ್ ಸೊಸೈಟಿಯ ಪ್ರವೀಣ್ ಹಾಗೂ ಬೆನಕ ಆಸ್ಪತ್ರೆಯ ಮ್ಯಾನೇಜರ್ ದೇವಸ್ಯ ನೇತೃತ್ವದಲ್ಲಿ ಬೆನಕ ಆಸ್ಪತ್ರೆಯ ಸಿಬ್ಬಂದಿ, ರೋಟರಿ ಸದಸ್ಯರು ಹಾಗೂ ಸಾರ್ವಜನಿಕರು ರಕ್ತದಾನ ಮಾಡಿದರು.

Related posts

ಕೈಕಂಬ- ಅತ್ಯಡ್ಕ- ಬಳ್ಳಿತೋಟ- ಬೋಜಾರ- ಮೂಡಾಯಿಬೆಟ್ಟು ಸಂಪರ್ಕಿಸುವ ಕೈಕಂಬ ಸೇತುವೆ ಶಿಥಿಲ: ಘನ ವಾಹನ ಸಂಚಾರ ನಿಷೇಧಿಸಿ ನಾವೂರು ಗ್ರಾ.ಪಂ. ನಿಂದ ಫಲಕ ಅಳವಡಿಕೆ

Suddi Udaya

ತೆಲಿಕೆದ ಬೊಳ್ಳಿ ಅರವಿಂದ್ ಬೋಳಾರ್ ರವರಿಗೆ ಬೆಳ್ತಂಗಡಿ ಮುಳಿಯ ಗೋಲ್ಡ್ & ಡೈಮಂಡ್ ವತಿಯಿಂದ ಸನ್ಮಾನ

Suddi Udaya

ಸೇಕ್ರೆಡ್ ಹಾರ್ಟ್ ಪದವಿಪೂರ್ವ ಕಾಲೇಜು ಪ್ರೌಢಶಾಲಾ ವಿಭಾಗ ಶಾಲಾ ಸಂಸತ್ತು ಚುನಾವಣೆ

Suddi Udaya

ಓಡಿಲ್ನಾಳ: ಶಕ್ತಿ ಯುವಕ ಮಂಡಲ ರೇಷ್ಮೆ ರೋಡ್ ಇದರ ವಾರ್ಷಿಕ ಮಹಾಸಭೆ: ನೂತನ ಪದಾಧಿಕಾರಿಗಳ ಆಯ್ಕೆ

Suddi Udaya

ಕನ್ಯಾಡಿ ಸೇವಾನಿಕೇತನಕ್ಕೆ ಶಾಸಕ ಹರೀಶ್ ಪೂಂಜ ಭೇಟಿ

Suddi Udaya

ಮಲೆಕುಡಿಯರ ಸಂಘ ನಿಡ್ಲೆ ವಲಯ ಸಮಿತಿಯಿಂದ ಮಾಹಿತಿ ಕಾರ್ಯಕ್ರಮ

Suddi Udaya
error: Content is protected !!